ಕೋವಿಡ್-19: ಕಳಭಟ್ಟಿ ಸಾರಾಯಿ ದಂಧೆ ಭೀತಿ!

ಕಳ್ಳಭಟ್ಟಿ ಸಾರಾಯಿಗೆ ಜಿಲ್ಲೆಯಲ್ಲಿ ಕರಾಳ ಇತಿಹಾಸ; ಅಬಕಾರಿ ಅಧಿಕಾರಿಗಳಿಗೆ ತಲೆನೋವು

Team Udayavani, Apr 12, 2020, 1:45 PM IST

Kallabatti

ಚಿಕ್ಕಬಳ್ಳಾಪುರ: ಕೋವಿಡ್-19 ತಡೆಗೆ ಲಾಕ್‌ ಡೌನ್‌ ಘೋಷಣೆಯಾಗಿರುವ ಪರಿಣಾಮ ಜಿಲ್ಲೆಯಲ್ಲಿ ಕುಡಿತದ ಚಟಕ್ಕೆ ದಾಸರಾಗಿರುವ ಮದ್ಯ ವ್ಯಸನಿಗಳು ಇದೀಗ ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಮುಂದಾಗಿರುವ ಅಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಕಳ್ಳಭಟ್ಟಿ ಸಾರಾಯಿ ದಂಧೆ ಇದೀಗ ಕೋವಿಡ್-19 ಲಾಕ್‌ಡೌನ್‌ ಪರಿಣಾಮ ಮತ್ತೆ ಜಿಲ್ಲೆಯಲ್ಲಿ ತಲೆ ಎತ್ತುವ ಭೀತಿ ಅಬಕಾರಿ ಇಲಾಖೆ ಅಧಿಕಾರಿಗಳನ್ನು ತೀವ್ರ ಚಿಂತೆಗೀಡು ಮಾಡಿದೆ. ಹಲವು ದಿನಗಳಿಂದ ಜಿಲ್ಲೆಯ
ಚಿಂತಾಮಣಿ, ಬಾಗೇಪಲ್ಲಿ ಮತ್ತಿತರ ಕಡೆ ಕಳ್ಳಭಟ್ಟಿ ಸಾರಾಯಿ ತಯಾರಿಸಿರುವ ಕುರುಹುಗಳು ಪತ್ತೆಯಾಗಿವೆ.

ಕೋವಿಡ್-19 ತಡೆಯುವ ಉದ್ದೇಶದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಲಾಕ್‌ ಡೌನ್‌ ಘೋಷಣೆ ಮಾಡಲಾಗಿದೆ. ಕಳೆದ ಮಾ.22ರಿಂದಲೇ ಜಿಲ್ಲೆಯಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿ, ಅಬಕಾರಿ ಇಲಾಖೆಗೆ ಸೇರಿದ ಎಲ್ಲಾ ಮದ್ಯದಂಗಡಿಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡಲಾಗಿದೆ. ಆದರೆ, ಗ್ರಾಮೀಣ ಪ್ರದೇಶದಲ್ಲಿ ಮದ್ಯ ವ್ಯಸನಿಗಳು ಎಂಎಸ್‌ ಐಎಲ್‌ ಮತ್ತಿತರ ಅಬಕಾರಿ ಮದ್ಯ ದೊರೆಯದ ಕಾರಣ ತಾವೇ ಕಳ್ಳಭಟ್ಟಿ ಸಾರಾಯಿ ತಯಾರಿಸಲು ಮುಂದಾಗಿರುವುದು ಜಿಲ್ಲೆಯಲ್ಲಿ ಕಂಡು ಬಂದಿದೆ. ಈಗಾಗಲೇ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಒಂದು ಕಳ್ಳಭಟ್ಟಿ ಸಾರಾಯಿ ಪ್ರಕರಣ ದಾಖಲಾಗಿ 1.5 ಲೀಟರ್‌ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದು ಒಬ್ಬರನ್ನು ಬಂಧಿಸಲಾಗಿದೆ.

ಅಬಕಾರಿ ಇಲಾಖೆ ಅಧಿಕಾರಿಗಳ ಮಾಹಿತಿ
ಪ್ರಕಾರವೇ ಜಿಲ್ಲೆಯ ಗುಡಿಬಂಡೆ ಹೊರತುಪಡಿಸಿ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ಸಾಧ್ಯತೆಗಳು ಇರುವ ಹಿನ್ನಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಜಿಲ್ಲಾದ್ಯಂತ ಕಳ್ಳಭಟ್ಟಿ ಸಾರಾಯಿ ದಂಧೆಗೆ ಬ್ರೇಕ್‌ ಹಾಕಲು ವಿಶೇಷ ತಂಡಗಳನ್ನು ರಚಿಸಿ, ಪ್ರತಿ ತಾಲೂಕಿನಲ್ಲಿ ಹಗಲು ರಾತ್ರಿ ಗಸ್ತು ಮಾಡಲಾಗುತ್ತಿದೆ. ಈ ಹಿಂದೆ ಕಳ್ಳಭಟ್ಟಿ ಸಾರಾಯಿ ದಂಧೆಗೆ ಜಿಲ್ಲೆಯಲ್ಲಿ ನೂರಾರು ಕೂಲಿ ಕಾರ್ಮಿಕ ಕುಟುಂಬಗಳು ಬಲಿಯಾಗಿರುವ ಇತಿಹಾಸ ಇದ್ದು, ಕಳೆದ ಹತ್ತು ಹನ್ನರೆಡು ವರ್ಷಗಳಿಂದ ಕಳ್ಳಭಟ್ಟಿ ಸಾರಾಯಿ ತಯಾರಿಸುವ ಅಡ್ಡೆಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಂಪೂರ್ಣ ನಿರ್ಮೂಲನೆ ಮಾಡಿದ್ದರು. ಆದರೆ, ಇದೀಗ ಲಾಕ್‌ಡೌನ್‌ ಪರಿಣಾಮ ಮದ್ಯ ಸಿಗದ ಹಿನ್ನಲೆಯಲ್ಲಿ ಮದ್ಯ ವ್ಯಸನಿಗಳು ಕಳ್ಳಭಟ್ಟಿ ಸಾರಾಯಿ ತಯಾರಿಕೆಗೆ ಮುಂದಾಗಿರುವುದು ಬೆಳಕಿಗೆ ಬಂದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಪ್ರತಿ ತಾಲೂಕಿನಲೂ ಪತ್ತೆ ಕಾರ್ಯಕ್ಕೆ ತಂಡ ರಚನೆ
ಜಿಲ್ಲೆಯಲ್ಲಿ ಎಂಎಸ್‌ಐಲ್‌ ಸೇರಿದಂತೆ ಎಲ್ಲ ರೀತಿ ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡಿರುವುದರಿಂದ ಕೆಲವರು ಕಳ್ಳಭಟ್ಟಿ ಸಾರಾಯಿ ತಯಾರಿಸಲು ಮುಂದಾಗಿದ್ದಾರೆ. ಈಗಾಗಲೇ ಈ ಸಂಬಂಧ ಒಬ್ಬರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೂಬ್ಬ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ಕಳ್ಳಭಟ್ಟಿ ಸಾರಾಯಿ ಅಡ್ಡೆಗಳು ತಲೆ ಎತ್ತದಂತೆ ಪ್ರತಿ ತಾಲೂಕಿಗೆ ಎರಡು ತಂಡಗಳನ್ನು ರಚಿಸಿ ಹಗಲು, ರಾತ್ರಿ ಪತ್ತೆ ಕಾರ್ಯ ಮಾಡಲಾಗುತ್ತಿದೆ ಎಂದು ಅಬಕಾರಿ ಉಪ ಆಯುಕ್ತ ಜಿ.ಪಿ.ನರೇಂದ್ರಕುಮಾರ್‌ ತಿಳಿಸಿದರು

● ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.