ಉಪ ಚುನಾವಣೆ ಧರ್ಮ ಯುದ್ದ: ಮಾಜಿ ಸಚಿವ ಕೃಷ್ಣಬೈರೇಗೌಡ
Team Udayavani, Nov 18, 2019, 12:30 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಧರ್ಮ ಯುದ್ದವಾಗಿದ್ದು ಧರ್ಮ ಹಾಗೂ ಅಧರ್ಮ ನಡುವೆ ನಡೆಯುತ್ತಿರುವ ಚುನಾವಣೆಯಲ್ಲಿ ಅಸತ್ಯ- ಅಧರ್ಮವನ್ನು ಅನುಸರಿಸಿದ ಅನರ್ಹ ಶಾಸಕರಿಗೆ ಪಾಠ ಕಲಿಸಬೇಕೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂದಿ ಅಂಜಿನಪ್ಪ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ಕಾಂಗ್ರೆಸ್ ನಿಂದ ಎಲ್ಲ ಅಧಿಕಾರ ಪಡೆದು ಹಣ, ಅಧಿಕಾರ ದಾಹದಿಂದ ಕೋಮುವಾದಿ ಬಿಜೆಪಿಗೆ ಸೇರಿದ್ದಾರೆಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಆನೈತಿಕ ರಾಜಕಾರಣಕ್ಕೆ ಮುಂದಾಗಿದೆಯೆಂದರು. ಬಿಜೆಪಿ ನಾಯಕರಿಗೆ ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮೇಲೆ ನಂಬಿಕೆ ಇಲ್ಲ ಆದ್ದರಿಂದ ವಮಾಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಚಿಕ್ಕಬಳ್ಳಾಪುರ ಕ್ಷೇತ್ರದ ಜನ ಸ್ವಾಭಿಮಾನಿಗಳಾಗಿದ್ದು ಬಿಜೆಪಿಗೆ ಮಾರಾಟವಾಗಿರುವ ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಕ್ಕಪಾಠ ಕಲಿಸಬೇಕೆಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶಿವಶಂಕರರೆಡ್ಡಿ, ಶಾಸಕ ವಿ.ಮುನಿಯಪ್ಪ, ಅಭ್ಯರ್ಥಿ ನಂದಿ ಅಂಜಿನಪ್ಪ, ಜಿ.ಎಚ್.ನಾಗರಾಜ್, ರಮೇಶ್, ನವೀನ್ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!
Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!
Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!
MUST WATCH
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ