ಸೂಕ್ತ ಬಸ್‌ ಕಲ್ಪಿಸಲು ಕೆಎಸ್‌ಆರ್‌ಟಿಸಿ ವಿಫಲ


Team Udayavani, Nov 14, 2022, 4:10 PM IST

ಸೂಕ್ತ ಬಸ್‌ ಕಲ್ಪಿಸಲು ಕೆಎಸ್‌ಆರ್‌ಟಿಸಿ ವಿಫಲ

ಗುಡಿಬಂಡೆ: ತಾಲೂಕಿಗೆ ಸೂಕ್ತ ಬಸ್‌ ಕಲ್ಪಿಸಲು ಕೆಎಸ್‌ಆರ್‌ಟಿಸಿ ಸಂಪೂರ್ಣ ವಿಫಲವಾಗಿದೆ. ನ.14ರಿಂದ ಗುಡಿಬಂಡೆ ತಾಲೂಕನ್ನು ಕೆಂಪು ಬಸ್‌ ರಹಿತ ಮಾಡಲು ಹೋರಾಟ ಪ್ರಾರಂಭಿಸುತ್ತಿದ್ದೇವೆ ಎಂದು ಸಾರಿಗೆ ಘಟಕ ಸ್ಥಾಪನಾ ಹೋರಾಟ ವೇದಿಕೆ ಅಧ್ಯಕ್ಷ ಜಿ.ವಿ.ಗಂಗಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿ, ಸಾರ್ವಜನಿಕ ಸೇವೆಗೆಂದು ಗ್ರಾಮೀಣ ಪ್ರದೇಶದ ಬಸ್‌ ಸಂಪೂರ್ಣವಾಗಿ ಬಂದ್‌ ಮಾಡಿ, ರಾಜ್ಯದಲ್ಲಿ ಯಾವುದಾದರು ದೊಡ್ಡ ಕಾರ್ಯಕ್ರಮಗಳು ನಡೆದರೆ, ರಾಜಕೀಯ ಸಮಾವೇಶ, ಮದುವೆ ಸಮಾರಂಭ, ಜಾತ್ರಾ ವಿಶೇಷ ಹೆಸರಿನಲ್ಲಿ ವಾಹನಗಳನ್ನು ಬಾಡಿಗೆಗೆ ಕಳುಹಿಸಲಾಗುತ್ತಿರುವುದನ್ನು ನಾವು ಖಂಡಿಸುತ್ತಿದ್ದೇವೆ. ನಾವು ಗುಡಿಬಂಡೆಯನ್ನು ಕೆಂಪು ಬಸ್‌ ರಹಿತ ಹೋರಾಟಕ್ಕೆ ಮತ್ತೆ ಗುಡಿಬಂಡೆ ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು.

ಬಸ್‌ ಡಿಪೋಗಾಗಿ ಸಾಕಷ್ಟು ಹೋರಾಟ: ಜೂನ್‌ 29ರಂದು ಗುಡಿಬಂಡೆ ಸಾರ್ವಜನಿಕರ ಸಹಕಾರದೊಂದಿಗೆ ಬಂದ್‌ ಮಾಡಿ, ನಂತರದ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆ ವೇಳೆ ಸಾರಿಗೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ತಾಲೂಕು ಕೇಂದ್ರದಿಂದಲೇ ಬಸ್‌ಗಳು ಚಾಲನೆ ಮಾಡುವಂತೆ ಹಾಗೂ ಹೆಚ್ಚಿನ ಮಾರ್ಗಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಹೇಳಿ, ಪ್ರತಿಭಟನಾಕಾರರ ಮನಹೊಲಿಸಿದ್ದರು.

ಆದರೆ, ಭರವಸೆ ನೀಡಿ 6 ತಿಂಗಳು ಕಳೆದರೂ, ವಿಶೇಷ ಬಸ್‌ ಇರಲಿ, ಇರುವ ಬಸ್‌ಗಳನ್ನೇ ನಿಲ್ಲಿಸುತ್ತಾ ಬರುತ್ತಿದ್ದಾರೆ. ಇದರಿಂದ ಗುಡಿಬಂಡೆಯಿಂದ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಇತರೆ ಸ್ಥಳಗಳಿಗೆ ಹೋಗಿ ಬರುವ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಪ್ರಯಾಣಿಕರು, ರೋಗಿಗಳಿಗೆ ಸಮಸ್ಯೆಯಾಗಿದೆ. ಇವರೆಲ್ಲರೂ ಖಾಸಗಿ ಸಾರಿಗೆ ಅವಲಂಬಿಸುವಂತಾಗಿದೆ. ಈಗಾಗಲೇ ಗುಡಿಬಂಡೆ ಬಸ್‌ ಡಿಪೋಗಾಗಿ ಸಾಕಷ್ಟು ಹೋರಾಟಗಳನ್ನು ನಡಸಿದ್ದೇವೆ ಎಂದು ಹೇಳಿದರು.

ಗುಡಿಬಂಡೆ ತಾಲೂಕಿನಲ್ಲಿ ಸಮರ್ಪಕ ಸಾರಿಗೆ ಬರಬೇಕಾದರೆ ಬಸ್‌ ಡಿಪೋ ನೀಡಿ, ಇಲ್ಲ ಕೆಂಪು ಬಸ್‌ ರಹಿತ ಮಾಡಲು ನಾವು ಸಿದ್ಧವಾಗಿದ್ದು, ಸಾರಿಗೆ ಅಧಿಕಾರಿಗಳೇ ನಾವು ಮುಂದೆ ಖಾಸಗಿ ಸಾರಿಗೆ ವ್ಯವಸ್ಥೆಗೆ ಮೊರೆ ಹೋಗಬೇಕಾದ ಪರಿಸ್ಥಿತಿಯನ್ನು ಗುಡಿಬಂಡೆ ಜನತೆಗೆ ನಿರ್ಮಾಣ ಮಾಡಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.