ಸೂಕ್ತ ಬಸ್‌ ಕಲ್ಪಿಸಲು ಕೆಎಸ್‌ಆರ್‌ಟಿಸಿ ವಿಫಲ


Team Udayavani, Nov 14, 2022, 4:10 PM IST

ಸೂಕ್ತ ಬಸ್‌ ಕಲ್ಪಿಸಲು ಕೆಎಸ್‌ಆರ್‌ಟಿಸಿ ವಿಫಲ

ಗುಡಿಬಂಡೆ: ತಾಲೂಕಿಗೆ ಸೂಕ್ತ ಬಸ್‌ ಕಲ್ಪಿಸಲು ಕೆಎಸ್‌ಆರ್‌ಟಿಸಿ ಸಂಪೂರ್ಣ ವಿಫಲವಾಗಿದೆ. ನ.14ರಿಂದ ಗುಡಿಬಂಡೆ ತಾಲೂಕನ್ನು ಕೆಂಪು ಬಸ್‌ ರಹಿತ ಮಾಡಲು ಹೋರಾಟ ಪ್ರಾರಂಭಿಸುತ್ತಿದ್ದೇವೆ ಎಂದು ಸಾರಿಗೆ ಘಟಕ ಸ್ಥಾಪನಾ ಹೋರಾಟ ವೇದಿಕೆ ಅಧ್ಯಕ್ಷ ಜಿ.ವಿ.ಗಂಗಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿ, ಸಾರ್ವಜನಿಕ ಸೇವೆಗೆಂದು ಗ್ರಾಮೀಣ ಪ್ರದೇಶದ ಬಸ್‌ ಸಂಪೂರ್ಣವಾಗಿ ಬಂದ್‌ ಮಾಡಿ, ರಾಜ್ಯದಲ್ಲಿ ಯಾವುದಾದರು ದೊಡ್ಡ ಕಾರ್ಯಕ್ರಮಗಳು ನಡೆದರೆ, ರಾಜಕೀಯ ಸಮಾವೇಶ, ಮದುವೆ ಸಮಾರಂಭ, ಜಾತ್ರಾ ವಿಶೇಷ ಹೆಸರಿನಲ್ಲಿ ವಾಹನಗಳನ್ನು ಬಾಡಿಗೆಗೆ ಕಳುಹಿಸಲಾಗುತ್ತಿರುವುದನ್ನು ನಾವು ಖಂಡಿಸುತ್ತಿದ್ದೇವೆ. ನಾವು ಗುಡಿಬಂಡೆಯನ್ನು ಕೆಂಪು ಬಸ್‌ ರಹಿತ ಹೋರಾಟಕ್ಕೆ ಮತ್ತೆ ಗುಡಿಬಂಡೆ ಪಟ್ಟಣದ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ಮುಂದುವರಿಸುತ್ತೇವೆ ಎಂದರು.

ಬಸ್‌ ಡಿಪೋಗಾಗಿ ಸಾಕಷ್ಟು ಹೋರಾಟ: ಜೂನ್‌ 29ರಂದು ಗುಡಿಬಂಡೆ ಸಾರ್ವಜನಿಕರ ಸಹಕಾರದೊಂದಿಗೆ ಬಂದ್‌ ಮಾಡಿ, ನಂತರದ ದಿನಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆ ವೇಳೆ ಸಾರಿಗೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ, ತಾಲೂಕು ಕೇಂದ್ರದಿಂದಲೇ ಬಸ್‌ಗಳು ಚಾಲನೆ ಮಾಡುವಂತೆ ಹಾಗೂ ಹೆಚ್ಚಿನ ಮಾರ್ಗಗಳನ್ನು ಕಲ್ಪಿಸಿಕೊಡುತ್ತೇವೆ ಎಂದು ಹೇಳಿ, ಪ್ರತಿಭಟನಾಕಾರರ ಮನಹೊಲಿಸಿದ್ದರು.

ಆದರೆ, ಭರವಸೆ ನೀಡಿ 6 ತಿಂಗಳು ಕಳೆದರೂ, ವಿಶೇಷ ಬಸ್‌ ಇರಲಿ, ಇರುವ ಬಸ್‌ಗಳನ್ನೇ ನಿಲ್ಲಿಸುತ್ತಾ ಬರುತ್ತಿದ್ದಾರೆ. ಇದರಿಂದ ಗುಡಿಬಂಡೆಯಿಂದ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಗೌರಿಬಿದನೂರು ಸೇರಿದಂತೆ ಇತರೆ ಸ್ಥಳಗಳಿಗೆ ಹೋಗಿ ಬರುವ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಪ್ರಯಾಣಿಕರು, ರೋಗಿಗಳಿಗೆ ಸಮಸ್ಯೆಯಾಗಿದೆ. ಇವರೆಲ್ಲರೂ ಖಾಸಗಿ ಸಾರಿಗೆ ಅವಲಂಬಿಸುವಂತಾಗಿದೆ. ಈಗಾಗಲೇ ಗುಡಿಬಂಡೆ ಬಸ್‌ ಡಿಪೋಗಾಗಿ ಸಾಕಷ್ಟು ಹೋರಾಟಗಳನ್ನು ನಡಸಿದ್ದೇವೆ ಎಂದು ಹೇಳಿದರು.

ಗುಡಿಬಂಡೆ ತಾಲೂಕಿನಲ್ಲಿ ಸಮರ್ಪಕ ಸಾರಿಗೆ ಬರಬೇಕಾದರೆ ಬಸ್‌ ಡಿಪೋ ನೀಡಿ, ಇಲ್ಲ ಕೆಂಪು ಬಸ್‌ ರಹಿತ ಮಾಡಲು ನಾವು ಸಿದ್ಧವಾಗಿದ್ದು, ಸಾರಿಗೆ ಅಧಿಕಾರಿಗಳೇ ನಾವು ಮುಂದೆ ಖಾಸಗಿ ಸಾರಿಗೆ ವ್ಯವಸ್ಥೆಗೆ ಮೊರೆ ಹೋಗಬೇಕಾದ ಪರಿಸ್ಥಿತಿಯನ್ನು ಗುಡಿಬಂಡೆ ಜನತೆಗೆ ನಿರ್ಮಾಣ ಮಾಡಿದ್ದಾರೆ ಎಂದು ದೂರಿದರು.

ಟಾಪ್ ನ್ಯೂಸ್

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

arrest

ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಸ‌ವಿಲೇವಾರಿಗೆ ವಾರ್ ರೂಂ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-13

ರೈತರಿಗೆ ಸಮಸ್ಯೆ ಕೇಳುವವರೇ ಇಲ್ಲ

TDY-19

ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಸುಳ್ಳು ಭರವಸೆ

tdy-18

ಯುಗಾದಿ ಹಬ್ಬದ ದಿನಸಿ ಕಿಟ್‌ ಪೊಲೀಸ್‌ ವಶಕ್ಕೆ

tdy-17

ಅಕಾಲಿಕ ಆಲಿಕಲ್ಲು ಮಳೆಗೆ ನೆಲಕಚ್ಚಿದ ಬೆಳೆ

tdy-15

ಶಾಸಕರು ಕಮಿಷನ್‌ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ‌

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

ಎ. 2 ರಂದು ಸಿತಾರ್‌-ಬಾನ್ಸುರಿ ಜುಗಲ್‌ ಬಂದಿ “ಬಸಂತ್‌ ಉತ್ಸವ್‌’

PRAMOD SAWANTH

ಹೊಸ ವರ್ಷದ ಆರಂಭದಲ್ಲಿ ಸ್ವಚ್ಛ ಭಾರತ ಸಂಕಲ್ಪ ಮಾಡಿ: ಗೋವಾ ಸಿಎಂ ಡಾ.ಪ್ರಮೋದ್ ಸಾವಂತ್ ಕರೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.