ವಾಲಿಬಾಲ್‌ ಗುಟ್ಟ ಕಾಲೋನಿಯಲ್ಲಿ ಮೂಲ ಸೌಕರ್ಯ ಮರೀಚಿಕೆ

ಕುಡಿಯಲು ಶುದ್ಧ ನೀರಿಲ್ಲ, ರಸ್ತೆ, ಚರಂಡಿ ನಿರ್ಮಾಣ ಮಾಡಿಲ್ಲ ಪಾತಪಾಳ್ಯ ಗ್ರಾಮದ ವಾಲಿಬಾಲ್‌ ಗುಟ್ಟ ಕಾಲೋನಿಯ ನಿವಾಸಿಗಳ ಪರದಾಟ

Team Udayavani, Jan 6, 2021, 1:28 PM IST

ವಾಲಿಬಾಲ್‌ ಗುಟ್ಟ ಕಾಲೋನಿಯಲ್ಲಿ ಮೂಲ ಸೌಕರ್ಯ ಮರೀಚಿಕೆ

ಬಾಗೇಪಲ್ಲಿ: ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ನಿವಾಸಿಗಳು ಕೊಳಚೆ ಪ್ರದೇಶದಲ್ಲಿ ವಾಸಿಸುವದುಸ್ಥಿತಿ ಪಾತಾಪಳ್ಯ ಗ್ರಾಮದ ವಾಲಿಬಾಲ್‌ ಗುಟ್ಟಕಾಲೋನಿಯಲ್ಲಿ ಕಂಡು ಬಂದಿದ್ದು, ಇಲ್ಲಿನ ನಾಗರಿಕರಿಗೆ ಇದುವರೆಗೂ ಕನಿಷ್ಠ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫ‌ಲರಾಗಿದ್ದಾರೆ.

ತಾಲೂಕಿನ ಪಾತಾಪಳ್ಯ ಗ್ರಾಪಂ ಕೇಂದ್ರ ಸ್ಥಾನಹಾಗೂ ಗ್ರಾಪಂ ಕಾರ್ಯಾಲಯದ ಮುಂಭಾಗದಲ್ಲಿರುವ ವಾಲಿಬಾಲ್‌ ಗುಟ್ಟಕಾಲೋನಿನಿವಾಸಿಗಳು ಕನಿಷ್ಠ ಸೌಲಭ್ಯಗಳಿಲ್ಲದೇ ಪರ ದಾಡುವಂತಾಗಿದೆ. ಮುಖ್ಯರಸ್ತೆಗೆ ಹೊಂದು ಕೊಂಡಿರುವ ಈ ಕಾಲೋನಿಗೆ ಕಾಲ್ನಡಿಗೆಯಲ್ಲಿ ತೆರಳಲು ಸಹ ಕಷ್ಟ ಸಾಧ್ಯವಾಗಿದೆ. ಇಲ್ಲಿನ ರಸ್ತೆಗಳು ಸಂಪೂರ್ಣ ಇಂದಿಗೂ ಕಾಡುಕಲ್ಲುನಿಂದ ನಿರ್ಮಿಸಿರುವ ಹಳೆಯ ರಸ್ತೆಗಳಾಗಿದ್ದು, ರಸ್ತೆ ಮತ್ತು ಮನೆಗಳ ಮುಂಭಾಗದಲ್ಲಿ ಚರಂಡಿ ನಿರ್ಮಾಣ ಮಾಡದ ಕಾರಣನಿತ್ಯ ಬಳಕೆ ಹಾಗೂ ಶೌಚಾಲಯ ಕೊಳಚೆನೀರು ರಸ್ತೆಯ ಮಧ್ಯದಲ್ಲೇ ಶೇಖರಣೆಯಾಗಿರುತ್ತದೆ.

ಕೆಲ ಸಾರ್ವಜನಿಕರು ಮನೆಗಳ ಸುತ್ತಮುತ್ತಲಿನಪ್ರದೇಶದ ಖಾಲಿ ಜಾಗದಲ್ಲಿ ಗುಂಡಿಗಳನ್ನುತೋಡಿಕೊಂಡು ಚರಂಡಿಯ ಕೊಳಚೆ ನೀರನ್ನು ಗುಂಡಿಗೆ ತುಂಬಿಸಿದ್ದಾರೆ. ಗುಂಡಿಗಳಿಂದಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವುದರ ಜೊತೆಗೆ ದುರ್ವಾಸನೆ ಬೀರುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸಮರ್ಪಕ ಶುದ್ಧ ಕುಡಿಯುವನೀರಿನ ಸರಬರಾಜು ಇಲ್ಲದೇ ಶುದ್ಧ ನೀರಿಗೂ ಪರದಾಡುವ ಪರಿಸ್ಥಿತಿ ಇಲ್ಲಿನ ನಾಗರಿಕರನ್ನು ಕಾಡುತ್ತಿದೆ.

ಸೌಕರ್ಯ ಕಲ್ಪಿಸಲಿ: ಚುನಾವಣೆ ಸಮಯದಲ್ಲಿಮತಕ್ಕಾಗಿ ಇಲ್ಲಿನ ನಿವಾಸಿಗಳಲ್ಲಿ ಮತಯಾಚನೆಮಾಡುವ ರಾಜಕಾರಣಿಗಳಿಗೆ ಈ ಭಾಗದಜಲ್ವಂತ ಸಮಸ್ಯೆಗಳು ಕಣ್ಣಿಗೆ ಕಾಣಿಸುವುದಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಸಂಬಂಧಪಟ್ಟಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಇನ್ನಾದರೂ ಮೂಲ ಸೌಕರ್ಯ ಕಲ್ಪಿಸಲು ಗಮನ ಹರಿಸಬೇಕಾಗಿದೆ.

ಗ್ರಾಮಗಳ ಅಭಿವೃದ್ಧಿಗೆ ಸರ್ಕಾರಕೋಟ್ಯಂತರ ರೂ. ಬಿಡುಗಡೆಮಾಡುತ್ತಿದ್ದರೂ ಕಾಳಜಿ ಇಲ್ಲದ ಅಧಿಕಾರಿಗಳ ಧೋರಣೆಯಿಂದ ಇಲ್ಲಿನ ನಿವಾಸಿಗಳು ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಮೂರ್ತಿ, ಅಂಬೇಡ್ಕರ್‌ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ, ಪಾತಪಾಳ್ಯ

ಪಾತಪಾಳ್ಯ ಗ್ರಾಮದ ವಾಲಿಬಾಲ್‌ ಗುಟ್ಟ ಕಾಲೋನಿ ಎತ್ತರದಪ್ರದೇಶದಲ್ಲಿದ್ದು, ಸಮತಟ್ಟು ಇಲ್ಲದಕಾರಣ ರಸ್ತೆ ಮತ್ತು ಚರಂಡಿಗಳನಿರ್ಮಾಣಕ್ಕೆ ಅಡಚಣೆ ಉಂಟಾಗಿದೆ.ಕಾಲೋನಿಯ ಸಂಪೂರ್ಣ ರಸ್ತೆಗಳನ್ನು ಏಕಕಾಲದಲ್ಲಿ ನಿರ್ಮಿಸಿ ಎಂಬ ಸ್ಥಳೀಯರ ಬೇಡಿಕೆಗೆ ಗ್ರಾಪಂನಲ್ಲಿ ಅಗತ್ಯ ಅನುದಾನದ ಕೊರತೆ ಇದೆ. ಹಂತ ಹಂತವಾಗಿ ಸೌಲಭ್ಯಗಳನ್ನು ಕಲ್ಪಿಸುತ್ತೇವೆ. –ನಾರಾಯಣ, ಪಿಡಿಒ, ಪಾತಪಾಳ್ಯ ಗ್ರಾಪಂ

 

ಪಿ.ಮಂಜುನಾಥ ರೆಡ್ಡಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.