ವಾಲಿಬಾಲ್ ಗುಟ್ಟ ಕಾಲೋನಿಯಲ್ಲಿ ಮೂಲ ಸೌಕರ್ಯ ಮರೀಚಿಕೆ
ಕುಡಿಯಲು ಶುದ್ಧ ನೀರಿಲ್ಲ, ರಸ್ತೆ, ಚರಂಡಿ ನಿರ್ಮಾಣ ಮಾಡಿಲ್ಲ ಪಾತಪಾಳ್ಯ ಗ್ರಾಮದ ವಾಲಿಬಾಲ್ ಗುಟ್ಟ ಕಾಲೋನಿಯ ನಿವಾಸಿಗಳ ಪರದಾಟ
Team Udayavani, Jan 6, 2021, 1:28 PM IST
ಬಾಗೇಪಲ್ಲಿ: ಕನಿಷ್ಠ ಮೂಲ ಸೌಲಭ್ಯಗಳಿಲ್ಲದೇ ನಿವಾಸಿಗಳು ಕೊಳಚೆ ಪ್ರದೇಶದಲ್ಲಿ ವಾಸಿಸುವದುಸ್ಥಿತಿ ಪಾತಾಪಳ್ಯ ಗ್ರಾಮದ ವಾಲಿಬಾಲ್ ಗುಟ್ಟಕಾಲೋನಿಯಲ್ಲಿ ಕಂಡು ಬಂದಿದ್ದು, ಇಲ್ಲಿನ ನಾಗರಿಕರಿಗೆ ಇದುವರೆಗೂ ಕನಿಷ್ಠ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ.
ತಾಲೂಕಿನ ಪಾತಾಪಳ್ಯ ಗ್ರಾಪಂ ಕೇಂದ್ರ ಸ್ಥಾನಹಾಗೂ ಗ್ರಾಪಂ ಕಾರ್ಯಾಲಯದ ಮುಂಭಾಗದಲ್ಲಿರುವ ವಾಲಿಬಾಲ್ ಗುಟ್ಟಕಾಲೋನಿನಿವಾಸಿಗಳು ಕನಿಷ್ಠ ಸೌಲಭ್ಯಗಳಿಲ್ಲದೇ ಪರ ದಾಡುವಂತಾಗಿದೆ. ಮುಖ್ಯರಸ್ತೆಗೆ ಹೊಂದು ಕೊಂಡಿರುವ ಈ ಕಾಲೋನಿಗೆ ಕಾಲ್ನಡಿಗೆಯಲ್ಲಿ ತೆರಳಲು ಸಹ ಕಷ್ಟ ಸಾಧ್ಯವಾಗಿದೆ. ಇಲ್ಲಿನ ರಸ್ತೆಗಳು ಸಂಪೂರ್ಣ ಇಂದಿಗೂ ಕಾಡುಕಲ್ಲುನಿಂದ ನಿರ್ಮಿಸಿರುವ ಹಳೆಯ ರಸ್ತೆಗಳಾಗಿದ್ದು, ರಸ್ತೆ ಮತ್ತು ಮನೆಗಳ ಮುಂಭಾಗದಲ್ಲಿ ಚರಂಡಿ ನಿರ್ಮಾಣ ಮಾಡದ ಕಾರಣನಿತ್ಯ ಬಳಕೆ ಹಾಗೂ ಶೌಚಾಲಯ ಕೊಳಚೆನೀರು ರಸ್ತೆಯ ಮಧ್ಯದಲ್ಲೇ ಶೇಖರಣೆಯಾಗಿರುತ್ತದೆ.
ಕೆಲ ಸಾರ್ವಜನಿಕರು ಮನೆಗಳ ಸುತ್ತಮುತ್ತಲಿನಪ್ರದೇಶದ ಖಾಲಿ ಜಾಗದಲ್ಲಿ ಗುಂಡಿಗಳನ್ನುತೋಡಿಕೊಂಡು ಚರಂಡಿಯ ಕೊಳಚೆ ನೀರನ್ನು ಗುಂಡಿಗೆ ತುಂಬಿಸಿದ್ದಾರೆ. ಗುಂಡಿಗಳಿಂದಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುವುದರ ಜೊತೆಗೆ ದುರ್ವಾಸನೆ ಬೀರುತ್ತಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಸಮರ್ಪಕ ಶುದ್ಧ ಕುಡಿಯುವನೀರಿನ ಸರಬರಾಜು ಇಲ್ಲದೇ ಶುದ್ಧ ನೀರಿಗೂ ಪರದಾಡುವ ಪರಿಸ್ಥಿತಿ ಇಲ್ಲಿನ ನಾಗರಿಕರನ್ನು ಕಾಡುತ್ತಿದೆ.
ಸೌಕರ್ಯ ಕಲ್ಪಿಸಲಿ: ಚುನಾವಣೆ ಸಮಯದಲ್ಲಿಮತಕ್ಕಾಗಿ ಇಲ್ಲಿನ ನಿವಾಸಿಗಳಲ್ಲಿ ಮತಯಾಚನೆಮಾಡುವ ರಾಜಕಾರಣಿಗಳಿಗೆ ಈ ಭಾಗದಜಲ್ವಂತ ಸಮಸ್ಯೆಗಳು ಕಣ್ಣಿಗೆ ಕಾಣಿಸುವುದಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಸಂಬಂಧಪಟ್ಟಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು ಇನ್ನಾದರೂ ಮೂಲ ಸೌಕರ್ಯ ಕಲ್ಪಿಸಲು ಗಮನ ಹರಿಸಬೇಕಾಗಿದೆ.
ಗ್ರಾಮಗಳ ಅಭಿವೃದ್ಧಿಗೆ ಸರ್ಕಾರಕೋಟ್ಯಂತರ ರೂ. ಬಿಡುಗಡೆಮಾಡುತ್ತಿದ್ದರೂ ಕಾಳಜಿ ಇಲ್ಲದ ಅಧಿಕಾರಿಗಳ ಧೋರಣೆಯಿಂದ ಇಲ್ಲಿನ ನಿವಾಸಿಗಳು ಮೂಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. –ಮೂರ್ತಿ, ಅಂಬೇಡ್ಕರ್ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ, ಪಾತಪಾಳ್ಯ
ಪಾತಪಾಳ್ಯ ಗ್ರಾಮದ ವಾಲಿಬಾಲ್ ಗುಟ್ಟ ಕಾಲೋನಿ ಎತ್ತರದಪ್ರದೇಶದಲ್ಲಿದ್ದು, ಸಮತಟ್ಟು ಇಲ್ಲದಕಾರಣ ರಸ್ತೆ ಮತ್ತು ಚರಂಡಿಗಳನಿರ್ಮಾಣಕ್ಕೆ ಅಡಚಣೆ ಉಂಟಾಗಿದೆ.ಕಾಲೋನಿಯ ಸಂಪೂರ್ಣ ರಸ್ತೆಗಳನ್ನು ಏಕಕಾಲದಲ್ಲಿ ನಿರ್ಮಿಸಿ ಎಂಬ ಸ್ಥಳೀಯರ ಬೇಡಿಕೆಗೆ ಗ್ರಾಪಂನಲ್ಲಿ ಅಗತ್ಯ ಅನುದಾನದ ಕೊರತೆ ಇದೆ. ಹಂತ ಹಂತವಾಗಿ ಸೌಲಭ್ಯಗಳನ್ನು ಕಲ್ಪಿಸುತ್ತೇವೆ. –ನಾರಾಯಣ, ಪಿಡಿಒ, ಪಾತಪಾಳ್ಯ ಗ್ರಾಪಂ
–ಪಿ.ಮಂಜುನಾಥ ರೆಡ್ಡಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉದ್ಯೋಗ ಖಾತ್ರಿಯಿಂದ ಜೀವನ ಹಸನು
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿದ ಜಿಲ್ಲಾಧಿಕಾರಿಗಳ ನೋಟಿಸ್
ಹೆತ್ತ ಮಗುವನ್ನು ಮಾರಾಟ ಮಾಡಿದ ತಾಯಿ! : ಮಹಿಳೆ ಸಹಿತ ನಾಲ್ವರ ಬಂಧನ
ಆಂಧ್ರ ಮಹಿಳೆಗೆ 75 ಲಕ್ಷ ರೂ.ವಂಚನೆ, ಹಲ್ಲೆ : ರೈಸ್ ಮಿಲ್ ಮಾಲೀಕನ ವಿರುದ್ಧ ಮಹಿಳೆ ಆರೋಪ
ಚಿಕ್ಕಬಳ್ಳಾಪುರ : ದ್ವಿತೀಯ ಹಂತದ ಕೋವಿಡ್ ಲಸಿಕೆ ಅಭಿಯಾನ ಆರಂಭ- 2358 ಫಲಾನುಭವಿಗಳಿಗೆ
MUST WATCH
ಬಸ್ ನೊಳಗೆ ಯುವತಿಗೆ ಕಿರುಕುಳ: ಘಟನೆ ಬಗ್ಗೆ ಯುವತಿ ಹೇಳಿದ್ದೇನು?
ಬಸ್ ನಲ್ಲಿ ಕಿರುಕುಳ ಪೋಸ್ಟ್: ಆರೋಪಿಯ ಬಂಧನ, ಪೊಲೀಸರೆದುರೇ ಕಪಾಳ ಮೋಕ್ಷ ಮಾಡಿದ ಯುವತಿ
PLASTIC ನಿಂದ ತಯಾರಾದ ECHO BRICKS ನ ಉಪಯೋಗಗಳು ಹಾಗೂ ಪ್ರಯೋಜನಗಳು
Manipalದ Auto Rickshaw ಚಾಲಕನಿಂದ Battery ಚಾಲಿತ Yamaha R15 ನೂತನ ಆವಿಷ್ಕಾರ
ಸರ್ವಿಸ್ ಆನ್ ವೀಲ್ಸ್ : ಮನೆ ಬಾಗಿಲಿಗೆ ಸರಕಾರಿ ಸೇವೆ
ಹೊಸ ಸೇರ್ಪಡೆ
ಡ್ರಗ್ಸ್ ದಂಧೆ: ಪೆಡ್ಲರ್ಗಳಿಬ್ಬರ ಬಂಧನ
ಸಮಯ ಮತ್ತೆ ಮರಳಿ ಸಿಗಲ್ಲ….ಸಮಯ ಪಾಲನೆಯಿಂದ ನಮಗೇನು ಲಾಭ?
ಸಚಿವರ ಅಸಮಾಧಾನಕ್ಕೆ ಮಣಿದ ಸಿಎಂ ಬಿಎಸ್ ವೈ: ಮತ್ತೆ ಖಾತೆ ಬದಲಾವಣೆ, ಎಂಟಿಬಿಗೆ ಸಕ್ಕರೆ ಸಿಹಿ
ಅತೃಪ್ತಿ ಮುಂದುವರಿಸಿದರೆ ಸಚಿವರ ಮನೆಮುಂದೆ ಧರಣಿ ಮಾಡುತ್ತೇವೆ: ಬಿಜೆಪಿ ಶಾಸಕರ ವಾರ್ನಿಂಗ್
ಗ್ರಾಹಕರ ಗಮನಕ್ಕೆ: ರಾತ್ರಿ 1ರಿಂದ 3ರವರೆಗೆ ಹಣ ವರ್ಗಾವಣೆಗೆ ಯುಪಿಐ ಬಳಸಬೇಡಿ: NPCI