ಸಿನಿ ಪ್ರಿಯರಿಲ್ಲದೇ ಚಿತ್ರಮಂದಿರ ಭಣ ಭಣ
Team Udayavani, Nov 10, 2020, 4:51 PM IST
ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಷರತ್ತುಗಳನ್ನು ವಿಧಿಸಿ ಚಲನಚಿತ್ರ ಮಂದಿರಗಳನ್ನು ಕಾರ್ಯಾರಂಭಿಸಲು ಅ.15ರಿಂದ ಅವಕಾಶ ಕಲ್ಪಿಸಲಾಗಿತ್ತು. ಆದರೆ ಸಿನಿ ಪ್ರಿಯರಿಲ್ಲದೇ ಚಿತ್ರ ಮಂದಿರಗಳು ಭಣಭಣ ಎನ್ನುತ್ತಿವೆ.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚಿತ್ರ ಮಂದಿರಗಳಿದ್ದರೂ ಸಹ ಕೆಲವೊಂದು ಚಿತ್ರ ಮಂದಿರಗಳಲ್ಲಿ ಕೋವಿಡ್ ಸೋಂಕಿನ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಚಿತ್ರಪ್ರದರ್ಶನ ಆರಂಭಿಸಿದರೂ ಸಹ ಸಿನಿಮಾ ಪ್ರಿಯರು ಚಿತ್ರಮಂದಿರಗಳತ್ತ ಬರುತ್ತಿಲ್ಲ. ಚಿಕ್ಕಬಳ್ಳಾಪುರ ನಗರದ ಬಾಲಾಜಿ ಚಿತ್ರಮಂದಿರ ತೆರೆದು ಚಿತ್ರ ಪ್ರದರ್ಶನ ನಡೆಯುತ್ತಿದ್ದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ಸಿನಿ ಪ್ರಿಯರ ದರ್ಶನ ಇಲ್ಲದಂತಾಗಿದೆ.
ಚಿತ್ರಮಂದಿರದಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗೆ ವೇತನ ಸೇರಿದಂತೆ ನಿರ್ವಹಣೆಗೆ ತೊಂದರೆಯುಂಟಾಗುತ್ತಿದೆ. ಸಿನಿಪ್ರಿಯರ ನಿರಾಸಕ್ತಿಯಿಂದ ಈಗಾಗಲೆ ಚಿತ್ರಮಂದಿರಗಳ ನಿರ್ವಹಣೆ ಮಾಡಲು ಕಷ್ಟ ಎದುರಿಸುವಂತಹ ವಾತಾವರಣ ನಿರ್ಮಾಣವಾಗಿದ್ದು, ಕೆಲವರು ಮುಂದಿನ ವರ್ಷ ಜನವರಿ ತನಕ ಚಿತ್ರಮಂದಿರಗಳನ್ನು ಮುಚ್ಚಿ ನಂತರ ತೆರೆಯಲು ಚಿಂತನೆ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ತಾಲೂಕಿನ ಚಿತ್ರಮಂದಿರದ ಮಾಲೀಕರು ಕೋವಿಡ್ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ಚಿತ್ರಮಂದಿರಗಳನ್ನು ತೆರೆಯಲು ಹಿಂಜರಿಯುತ್ತಿದ್ದಾರೆ.
ಚಿತ್ರಮಂದಿರದಲ್ಲಿ ಟಿಕೆಟ್ ಕೊಡುವವರು ಮತ್ತು ಸ್ವೀಕರಿಸುವ 4 ಮಂದಿ ಸೇರಿದಂತೆ 8 ಜನಕೆಲಸ ನಿರ್ವಹಿಸುತ್ತಿದ್ದೇವೆ.ಪ್ರತಿನಿತ್ಯ 4 ಶೋಗಳು ನಡೆಸಿದರೂ ಸಹಕನಿಷ್ಟ 4 ಸಾವಿರ ರೂ. ಸಂದಾಯವಾ ಗುತ್ತಿಲ್ಲ. ಪ್ರತಿನಿತ್ಯ ಕನಿಷ್ಠ 10 ಸಾವಿರ ರೂ.ನಿರ್ವಹಣೆ ಖರ್ಚು ಬರುತ್ತದೆ. ನಷ್ಟ ಅನುಭವಿಸಿ ಚಿತ್ರಮಂದಿರ ನಡೆಸುವುದು ಹೊರೆಯಾಗಿದೆ. – ವೇಣುಗೋಪಾಲ್, ವ್ಯವಸ್ಥಾಪಕರು, ಬಾಲಾಜಿ ಚಿತ್ರಮಂದಿರ, ಚಿಕ್ಕಬಳ್ಳಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ