ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಮರೀಚಿಕೆ

ಹೊರಗುತ್ತಿಗೆ ನೌಕರರ ಮುಷ್ಕರ

Team Udayavani, Sep 27, 2020, 3:24 PM IST

cb-tdy-1

ಚಿಂತಾಮಣಿ: ಕಳೆದ ನಾಲ್ಕೈದು ತಿಂಗಳುಗಳಿಂದ ಹೊರಗುತ್ತಿಗೆ ನೌಕರರಿಗೆ ಸಂಬಳ ನೀಡದ ಪರಿಣಾಮ ನೌಕರರು ಮೂರು ದಿನಗಳಿಂದ ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಿರತರಾಗಿರುವ ಪರಿಣಾಮ ನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯಗಳಿಲ್ಲದೆ ಆಸ್ಪತ್ರೆ ದುರ್ವಾಸನೆ ಬೀರುವಂತಾಗಿದ್ದು, ಸಾರ್ವಜನಿಕರ ಮತ್ತು ರೋಗಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಾಲೈದು ತಿಂಗಳುಗಳಿಂದ ಸಂಬಳ ಇಲ್ಲ: ಸಾರ್ವಜನಿಕ ಆಸ್ಪತ್ರೆಯಲ್ಲಿ 24 ಹೊರಗುತ್ತಿಗೆ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಇವರಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ಸಂಬಳ ನೀಡದಿರುವುದರಿಂದ ಜೀವನಕ್ಕೆ ನಿರ್ವಹಣೆಗೆ ಕಷ್ಟವಾಗಿ ನೌಕರರು ಕೆಲಸಕ್ಕೆ ಗೈರು ಹಾಜರಾಗಿದ್ದರಿಂದ ಆಸ್ಪತ್ರೆಯಲ್ಲಿನ ಕ್ಲೀನಿಕ್‌ ಮತ್ತು ನಾನ್‌ ಕ್ಲೀನಿಕ್‌ಕೆಲಸಗಳು ನಿಂತು ಹೋಗಿ ರೋಗಿಗಳು ಪರದಾಡುವಂತಾಗಿದೆ.

ಆವರಣದಲ್ಲೇ ಕಸದ ಚೀಲಗಳು: ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ದಿನ ನೂರಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ದಿನಕ್ಕೆ 50 ಕ್ಕೂ ಹೆಚ್ಚು ರೋಗಿಗಳು ದಾಖಲಾಗುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಮೂರು ದಿನಗಳಿಂದ ನೌಕರರು ಇಲ್ಲದ ಪರಿಣಾಮ ಕಸದ ಚೀಲಗಳು ಆಸ್ಪತ್ರೆಯ ಆವರಣದಲ್ಲೇ ಎಸೆದಿರುವುದರಿಂದ ದುರ್ವಾಸನೆ ಹೆಚ್ಚುತ್ತಿದ್ದು, ರೋಗಿಗಳು ದಿನ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಬೆಡ್‌ಶೀಟ್‌ ವಾಸನೆ: ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಹಾಸಿಗೆ ಮೇಲೆ ಹೊದಿಸಿರುವ ಬೆಡ್‌ಶೀಟ್‌ಗಳನ್ನು ಸಹ ಹೊಗೆಯದ ಪರಿಣಾಮ ದುರ್ವಾಸನೆ ಬೀರುತ್ತಿದ್ದು, ಕೋವಿಡ್ ಸಂಕಷ್ಟದ ಸಮಯದಲ್ಲಿ ರೋಗ ವಾಸಿ ಮಾಡಿಕೊಳ್ಳಲು ಬಂದು ಮತ್ತಷ್ಟು ಕಾಯಿಲೆಗಳನ್ನು ಹಚ್ಚಿಕೊಂಡು ಹೋಗಬೇಕಾಗಿದೆ ಎಂಬುದು ಆತಂಕಕ್ಕೆ ಕಾರಣವಾಗಿದೆ.

ತಾಯಿಮಕ್ಕಳ ಗತಿ ಏನು?: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿದಿನ ಹತ್ತಾರು ಗರ್ಭಿಣಿಯರ ಹೆರಿಗೆ ಆಗುತ್ತದೆ. ಇಲ್ಲಿಬಾಣಂತಿಯರು ಮತ್ತು ಎಳೆಕೂಸುಗಳು  ಇರುತ್ತಾರೆ. ಆದರೆ ಹೆರಿಗೆ ವಾರ್ಡ್‌ಗಳಲ್ಲೂ ಸಹ ಸ್ವತ್ಛತೆ ಮಾಡದಿರುವುದು ಆತಂಕಕ್ಕೆ ಕಾರಣವಾಗಿದೆ.

4 ಖಾಯಂ, 24 ನೌಕರರು ಹೊರಗುತ್ತಿಗೆ :  ಆಸ್ಪತ್ರೆಯಲ್ಲಿ ಖಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವುದು ಕೇವಲ ನಾಲ್ಕು ನೌಕರರು ಮಾತ್ರ. ಉಳಿದ24 ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸದರಿ ಕಾರ್ಯವನ್ನೆ ನಂಬಿ ಜೀವನ ಸಾಗಿಸುತ್ತಿರುವ ನೌಕರರಿಗೆ ಕೋವಿಡ್ ಸಂಕಷ್ಟದಲ್ಲಿಯೂ ಗುತ್ತಿಗೆದಾರ ಮತ್ತು ಅಧಿಕಾರಿಗಳು ಸಂಬಳ ನೀಡದ ಪರಿಣಾಮ ನೌಕರರುಕರ್ತವ್ಯಕ್ಕೆ ಗೈರಾಗಿದ್ದು, ಆಸ್ಪತ್ರೆಯ ಒಳಗೂ ಮತ್ತು ಹೊರಗೂ ಸ್ವಚ್ಛತಾಕಾರ್ಯಗಳು ನಡೆಯದೇ ದುರ್ವಾಸನೆ ಬೀರುತ್ತಿದೆ.

ಭರವಸೆ ಹುಸಿ : ಹೊರಗುತ್ತಿಗೆ ನೌಕರರಿಗೆ ಒಂದು ವಾರದೊಳಗೆ ಸಂಬಳ ನೀಡುತ್ತೇವೆಂದು ಹೇಳಿದ್ದ ಜಿಲ್ಲಾ ಆರೋಗ್ಯಾಧಿಕಾರಿಗಳು ಭರವಸೆ ನೀಡಿ ಎರಡು ವಾರವಾದರೂ ಇನ್ನು ಸಂಬಳ ನೀಡದ ಪರಿಣಾಮ ನೌಕರರು ಕರ್ತವ್ಯಕ್ಕೆ ಗೈರಾಗಲುಕಾರಣವಾಗಿದೆ.

ಆಸ್ಪತ್ರೆಯಲ್ಲಿಕಾರ್ಯ ನಿರ್ವಹಿಸುತ್ತಿದ್ದ ಹೊರಗುತ್ತಿಗೆ ನೌಕರರು ಮುಷ್ಕರದಲ್ಲಿ ತೊಡಗಿರುವುದ ರಿಂದ ಆಸ್ಪತ್ರೆಯಲ್ಲಿ ಇರುವ ನಾಲ್ಕೈದು ನೌಕರರಿಂದ ಸಂಪೂರ್ಣ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲು ಕಷ್ಟವಾಗಿದೆ. ಸಂತೋಷ್‌, ಆಸ್ಪತ್ರೆಯ ವೈದ್ಯಾಧಿಕಾರಿ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.