ನಿರ್ವಹಣೆ ಕೊರತೆ: ಪಾಳುಬಿದ್ದ ಶಾಲಾ ಕಟ್ಟಡ


Team Udayavani, Feb 8, 2019, 7:08 AM IST

nirvahane.jpg

ಶಿಡ್ಲಘಟ್ಟ: ಜನಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ಆಲಸ್ಯದಿಂದ ತಾಲೂಕಿನ ದೇಶ ಭಕ್ತರಹಳ್ಳಿಯ ಸರ್ಕಾರಿ ಶಾಲೆಯ ಕಟ್ಟಡ ಪಾಳುಬಿದ್ದಿದ್ದು, ಅಕ್ರಮ ಚಟುವಟಿಕೆಗಳ ಆಶ್ರಯತಾಣವಾಗಿ ಪರಿವರ್ತನೆಗೊಂಡಿದೆ.

ಗ್ರಾಮದಲ್ಲಿ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾದ ಬಳಿಕ ಹಳೆ ಕಟ್ಟಡವನ್ನು ಕಡೆಗಣಿಸಿದ ಪರಿಣಾಮ ಕಟ್ಟಡ ಯಾರಿಗೆ ಬೇಡವಾದ ಪರಿಸ್ಥಿಗೆ ತಲುಪಿದೆ. ಸೂಕ್ತ ನಿರ್ವಹಣೆ ಇಲ್ಲದೇ ಕಟ್ಟಡದ ಸ್ವರೂಪವೇ ಬದಲಾಗಿದ್ದು, ದನಕರುಗಳು ಮತ್ತು ಕುರಿಮೇಕೆಗಳಿಗೆ ಆಶ್ರಯತಾಣ ಪರಿಣಮಿಸಿದೆ.

ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ಸ್ವಾತಂತ್ರ್ಯ ಸೇನಾನಿಗಳ ಹಿನ್ನೆಲೆ ಹೊಂದಿರುವ ಭಕ್ತರಹಳ್ಳಿಗೆ ದೇಶ ಭಕ್ತರಹಳ್ಳಿ ಎಂದು ಕರೆಯುತ್ತಾರೆ. ಇಂತಹ ಐತಿಹಾಸಿಕ ಗ್ರಾಮದಲ್ಲಿ ಶಾಲೆಯ ಕಟ್ಟಡ ಬಳಕೆಗೆ ಬಾರದೇ ಸರ್ಕಾರಿ ಸ್ವತ್ತುಗೆ ಇಂದು ವಾರಸುದಾರರಿಲ್ಲದೇ ಅನಾಥವಾಗಿ ಪಾಳುಬಿದ್ದಿದೆ.

ಕಟ್ಟಡ ನೋಡಿದರೇ ಭಯ: ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡದ ಪರಿಸ್ಥಿತಿ ಎಷ್ಟು ಭಯಾನಕವಾಗಿದೆ ಎಂದರೆ ಭೂತ ಬಂಗಲೆಯಾಗಿದೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಹಲವು ಹಳೆ ವಿದ್ಯಾರ್ಥಿಗಳು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಆದರೆ ಈ ಶಾಲೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಯಾರು ಆಸಕ್ತಿವಹಿಸದಿರುವುದು ದುರಂತವೇ ಸರಿ.

ಕಟ್ಟಡ ಶಿಥಿಲ: ಶಾಲೆಯ ಸುತ್ತಮುತ್ತ ಕುರಿ-ಮೇಕೆಗಳ ಸಗಣಿ ರಾಶಿಬಿದ್ದಿದೆ. ಕನಿಷ್ಠ ಶಾಲೆಯೊಳಗೆ ಪ್ರವೇಶ ಮಾಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದೊದಗಿದೆ. ಶಾಲೆ ಪಾಳುಬಿದ್ದಿರುವುದನ್ನು ಬಂಡವಾಳ ಮಾಡಿಕೊಂಡಿರುವ ಕೆಲವರು ಅಕ್ರಮ ಚಟುವಟಿಕೆಗಳಿಗೆ ಬಳಕೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಶಾಲೆಯ ಮುಂದೆ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ಅದು ಪೂರ್ಣಗೊಳ್ಳದೇ ತ್ಯಾಜ್ಯ ನೀರು ಶೇಖರಣೆಯಾಗಿ ಸೊಳ್ಳೆಗಳಿಗೆ ಆಶ್ರಯತಾಣವಾಗಿ ಪರಿವರ್ತನೆಗೊಂಡಿದ್ದು, ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡುವ ಆತಂಕ ಮನೆ ಮಾಡಿದೆ. ಶಾಲೆಯ ಕಾಂಪೌಂಡ್‌ ಗೋಡೆಗಳು ಸಂಪೂರ್ಣ ಶಿಥಿಲವಾಗಿದ್ದು, ಬಹುಶಃ ಕಟ್ಟಡವು ಶಿಥಿಲವಾಗಿದೆಯೇ? ಎಂಬ ಅನುಮಾನ ಮೂಡುವಂತಾಗಿದೆ.

ತಾಲೂಕಿನಲ್ಲಿ ಶಾಲೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಶಾಲಾ ಕಟ್ಟಡಗಳ ಆಸ್ತಿಯನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಶಾಲೆಯ ದುಸ್ಥಿತಿಯ ಕುರಿತು ಅರಿವು ಇಲ್ಲದಿರುವುದು ದುರಂತವೇ ಸರಿ. ಈ ಸಂಬಂಧ ಪತ್ರಿಕೆ ಅವರನ್ನು ಸಂಪರ್ಕಿಸಿದಾಗ ಶಾಲೆಯ ಕುರಿತು ಮಾಹಿತಿ ಇಲ್ಲ, ಸಿಆರ್‌ಪಿಗೆ ವರದಿ ಸಲ್ಲಿಸಲು ಸೂಚಿಸುತ್ತೇನೆ ಎಂದು ಹೇಳುವ ಮೂಲಕ ತಮ್ಮ ಬೇಜವಾಬ್ದಾರಿಯನ್ನು ಪ್ರದರ್ಶನ ಮಾಡಿದ್ದಾರೆ.

ಶೋಚನೀಯ ಪರಿಸ್ಥಿತಿ: ಶಿಡ್ಲಘಟ್ಟ ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಪಾಳುಬಿದ್ದಿರುವ ಶಾಲಾ ಕಟ್ಟಡಗಳು ಸಹಿತ ಜಿಲ್ಲೆಯಾದ್ಯಂತ ದುಸ್ಥಿತಿಯಲ್ಲಿರುವ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಗಮನಹರಿಸಬೇಕಾಗಿದೆ ಎಂದು ಶಿಕ್ಷಣ ಪ್ರೇಮಿಗಳು ಒತ್ತಾಯಿಸಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಿರ್ಲಕ್ಷ್ಯದಿಂದ ದಿನೇ ದಿನೇ ಸರ್ಕಾರಿ ಶಾಲೆಗಳ ಸ್ಥಿತಿ ಶೋಚನೀಯವಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಮೇಲೆ ನಿರೀಕ್ಷೆ?: ಭಕ್ತರಹಳ್ಳಿ ಗ್ರಾಮ ಪಂಚಾಯಿತಿಗೆ ಇತ್ತೀಚಿಗೆ ಚುನಾವಣೆ ನಡೆದಿದ್ದು, ಫೆ.8ರಂದು ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು, ನೂತನ ಆಡಳಿತ ಮಂಡಳಿ ಗ್ರಾಮದಲ್ಲಿ ಪಾಳುಬಿದ್ದಿರುವ ಶಾಲೆಯನ್ನು ಅಭಿವೃದ್ಧಿಗೊಳಿಸಲು ಗಮನಹರಿಸುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

* ಎಂ.ಎ.ತಮೀಮ್‌ ಪಾಷ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.