ಪ್ರತಿಯೊಬ್ಬರಿಗೂ ಕಾನೂನು ಸೇವೆ ಸಿಗಲಿ
Team Udayavani, Nov 11, 2020, 5:23 PM IST
ಬಾಗೇಪಲ್ಲಿ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕಾನೂನು ಸೇವೆ ಲಭ್ಯವಾಗಬೇಕು ಎನ್ನುವ ಮಹತ್ತರ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ತಮ್ಮ ಹಕ್ಕುಗಳ ಮತ್ತು ಕರ್ತವ್ಯಗಳ ಬಗ್ಗೆತಿಳಿದುಕೊಳ್ಳಬೇಕು ಎಂದು ನ್ಯಾಯಾಧೀಶ ಎಸ್. ಎಂ.ಅರುಟಗಿ ತಿಳಿಸಿದರು.
ಪಟ್ಟಣದ ಜೆಎಂಎಫ್ಸಿ ಸಿವಿಲ್ ನ್ಯಾಯಾಲಯದಪ್ರಾಂಗಣದ ಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಬಾಗೇಪಲ್ಲಿ ಆಡಳಿತ ಇಲಾಖೆ,ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮೂಲಭೂತ ಹಕ್ಕುಗಳ ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ಛ ನ್ಯಾಯಾಲಯದ ನಿರ್ದೇಶನದಂತೆ ಈ ಕಾರ್ಯಕ್ರಮಗಳು ಏರ್ಪಡಿಸಲಾಗಿದ್ದು,ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ತಿಳಿಸಬೇಕು ಎಂಬ ಉದ್ದೇಶಒಳಗೊಂಡಿದೆ. ಉಚಿತ ಕಾನೂನು ಸೇವೆ ಸಿಗಬೇಕೆಂಬುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಅದೇ ರೀತಿಯಲ್ಲಿ ಸರ್ಕಾರದ ಧಇಲಾಖೆಗಳಿಂದ ಜನರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾತಿ ನೀಡಬೇಕಾಗಿದೆ ಎಂದರು.
ಅರಿವು ಮೂಡಿಸಿ: ವಕೀಲರ ಸಂಘದ ತಾಲೂಕು ಅಧ್ಯಕ್ಷ ಎ.ನಂಜುಂಡ ಮಾತನಾಡಿ,ನ್ಯಾಯಾಲಯಗಳು ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸಮಾನವಾದ ಕಾನೂನು ಹಾಗೂ ಹಕ್ಕುಗಳು, ಕರ್ತವ್ಯಗಳನ್ನು ರೂಪಿಸಿದ್ದು, ಅದರಂತೆ ನಡೆಯುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಇಂದು ಕಾನೂನು ಸೇವೆಗಳ ದಿನಾಚರಣೆ. ಬಹುತೇಕ ಜನರಿಗೆಕಾನೂನುಗಳ ಅರಿವು ಇಲ್ಲ. ಆದ್ದರಿಂದ ಕಾನೂನುಗಳನ್ನು ತಿಳಿದವರು ಜನಸಾಮಾನ್ಯರಿಗೆ ತಿಳಿಸಿ ಅರಿವು ಮೂಡಿಸಬೇಕಿದೆ ಎಂದರು.
ಹಿರಿಯ ವಕೀಲ ದತ್ತಾತ್ರೇಯ ಮಾತನಾಡಿದರು. ವಕೀಲರಾದ ನಂಜಪ್ಪ ನಾಗಭೂಷಣ್, ಪಿ.ಅಪ್ಪಸ್ವಾಮಿ, ನಾರಾಯಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ