ದಲಿತರಿಗೆ ಮೂಲಭೂತ ಹಕ್ಕು ಸಿಗಲಿ
Team Udayavani, Dec 7, 2019, 12:49 PM IST
ಗೌರಿಬಿದನೂರು: ಸಂವಿಧಾನ ಅನುಷ್ಠಾನಕ್ಕೆ ಬಂದು ಏಳು ದಶಕ ಕಳೆದರೂ ಇಂದಿಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರ ಆಶಯಗಳು ಇನ್ನೂ ಈಡೇರಿಲ್ಲ. ದಲಿತರಿಗೆ ಶಿಕ್ಷಣ, ಸಾಮಾಜಿಕ ಸ್ಥಿತಿಗತಿ ಮತ್ತು ಮೂಲಭೂತ ಹಕ್ಕುಗಳ ಲಭ್ಯತೆ ಮರೀಚಿಕೆಯಾಗಿಯೇ ಉಳಿದಿದೆ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹಾಗೂ ಮುಖಂಡ ಹುದಗೂರು ನಂಜುಂಡಪ್ಪ ಹೇಳಿದರು.
ತಾಲೂಕಿನ ಹುದೂಗೂರು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ರ 63 ನೇ ಪರಿನಿರ್ವಾಣ ಅಂಗವಾಗಿ ಅಂಬೇಡ್ಕರ್ ಯುವಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ನಮನ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ ಯಥಾವತ್ತಾಗಿ ಜಾರಿ ಆಗದಿರುವುದರಿಂದ ದಲಿತರು ಇನ್ನೂ ಇದೇ ಸ್ಥಿತಿಯಲ್ಲಿರುವಂತಾಗಿದೆ. ಆಳುವ ಸರ್ಕಾರಗಳು ಅಧಿಕಾರಿ ಗಳಲ್ಲಿ ಕಾರ್ಯ ಬದ್ಧತೆ ಇಲ್ಲದೇ ಅವರ ಹಕ್ಕುಗಳಿಗೆ ಚ್ಯುತಿಯಾಗಿ ಅಂಧಕಾರದಲ್ಲಿ ಬದುಕು ವಂತಾ ಗಿದೆ ಎಂದರು.
ದಲಿತ ಸಂಘಟನೆಗಳ ಪದಾಧಿಕಾರಿಗಳು ಇನ್ನಾದರೂ ಎಚ್ಚೆತ್ತು ದಲಿತರಿಗೆ ಸಿಗ ಬೇಕಾದ ಸವಲತ್ತುಗಳ ಬಗ್ಗೆ ಅರಿತು ಪಡೆಯಲು ಪ್ರಯತ್ನಿಸಬೇಕು. ಜನಪ್ರತಿನಿಧಿ ಗಳು ಹಾಗೂ ಅಧಿಕಾರಿಗಳು ಶೋಷಿತರಿಗೆ ಸವಲತ್ತು ತಲುಪುವಂತೆ ಮಾಡಬೇಕು. ದಲಿತರಿಗೆ ರಾಜಕೀಯ ಶಕ್ತಿ ತುಂಬಿದಾಗ ಮಾತ್ರ ಅವರಿಗೆ ನಿಜವಾದ ಸ್ವಾತಂತ್ರ್ಯ ಸಿಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮದ ದಲಿತ ಮುಖಂಡರಾದ ಎಚ್.ಬಿ.ನಾರಾಯಣಪ್ಪ, ಎ.ರಾಮಾಂಜಿನಪ್ಪ, ನರಸಿಂಹಮೂರ್ತಿ, ಬಾಲಪ್ಪ, ನಂಜುಂಡಯ್ಯ, ನಾರಾಯಣಸ್ವಾಮಿ, ಶಿವಶಂಕರ್, ಬಾಲಕೃಷ್ಣ , ಯೇಸು, ನಾಗರಾಜು, ಟೈಲರ್ ನಾಗಪ್ಪ, ರಮೇಶ, ಆಟೋ ರಮೇಶ್, ಪ್ರಸನ್ನ, ಎಚ್.ಎನ್.ಮೂರ್ತಿ ಮುಂತಾದವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು