ಭೌತಿಕ ಜಗತ್ತಿನಲ್ಲಿ ಭಾರತ ಉತ್ಕೃಷ್ಟವಾಗಲಿ: ಮೋಹನ್ ಭಾಗವತ್
ಮಾನವ ಅಭ್ಯುದಯ ವಿ.ವಿ. ಘಟಿಕೋತ್ಸವ
Team Udayavani, Jul 13, 2022, 11:37 PM IST
ಚಿಕ್ಕಬಳ್ಳಾಪುರ: ಆಧುನಿಕ ಜ್ಞಾನದ ಜತೆಗೆ ಪಾರಂಪರಿಕ ಜ್ಞಾನವನ್ನು ಜೀವನದಲ್ಲಿ ಅಳವಡಿಸಿಕೊಂಡು ಭೌತಿಕ ಜಗತ್ತಿನಲ್ಲಿ ನಮ್ಮ ಭಾರತವನ್ನು ಉತ್ಕೃಷ್ಟ ಮಾಡಬೇಕು ಎಂದು ಅರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದರು.
ಜಿಲ್ಲೆಯ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಆಯೋಜಿಸಿದ್ದ ಮಾನವ ಅಭ್ಯುದಯ ವಿಶ್ವವಿದ್ಯಾನಿಲಯದ ಪ್ರಥಮ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಹಾಗೂ ಮತ್ತಿತರರು ಮಾಡಿದ ವಿಚಾರಮಂಥನದ ರೀತಿಯಲ್ಲಿ ಭಾರತ ಅಭಿವೃದ್ಧಿ ಹೊಂದುತ್ತಿದೆ. ದೇಶದ ಭವಿಷ್ಯ ವಾಗಿರುವ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯಲ್ಲಿರುವ ಜ್ಞಾನವನ್ನು ಒಳ್ಳೆಯ ಸಮಾಜವನ್ನು ನಿರ್ಮಿಸಲು ವಿನಿಯೋಗಿಸಿ, ಪರೋಪಕಾರ ಮತ್ತು ಮಾನವೀಯ ಸೇವೆಯಿಂದ ದೇಶಕ್ಕೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಎಂದರು.
ಉತ್ಕೃಷ್ಟ ರಾಷ್ಟ್ರ ನಿರ್ಮಿಸಿ
ಗುರು ಪೂರ್ಣಿಮೆಯೆಂದು ಒಳ್ಳೆಯ ಸಂಸ್ಕಾರವನ್ನು ಪಡೆದು ಕೊಂಡು ಹೊರಹೊಮ್ಮುತ್ತಿರುವ ತಾವು ಮೊದಲು ವಿದ್ಯೆ ನೀಡಿದ ಗುರುಗಳನ್ನು ಗೌರವಿಸಿ, ಉತ್ಕೃಷ್ಟ ರಾಷ್ಟ್ರವನ್ನು ನಿರ್ಮಿಸಿ, ಮಾನವತ್ವವನ್ನು ಉತ್ಕೃಷ್ಟಗೊಳಿಸುವ ಕೆಲಸವನ್ನು ಮಾಡಬೇಕು. ಸತ್ಯ-ಅನುಕಂಪವನ್ನು ಮೈಗೂಡಿಸಿಕೊಂಡು ಚರಿತ್ರೆಯಲ್ಲಿ ಉಳಿದುಕೊಳ್ಳುವಂತಹ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತರುವಂತಹ ಕೆಲಸವನ್ನು ಮಾಡಬೇಕು ಎಂದರು.
ಗೌರವ ಡಾಕ್ಟರೆಟ್
ಖ್ಯಾತ ಭೌತಶಾಸ್ತ್ರಜ್ಞ ಡಾ| ಆರ್. ಚಿದಂಬರಂ, ಇಸ್ರೋ ಮಾಜಿ ಮುಖ್ಯಸ್ಥ ಕೆ. ಕಸ್ತೂರಿ ರಂಗನ್, ಕ್ರಿಕೆಟಿಗ ಸುನಿಲ್ ಗಾವಸ್ಕರ್, ಪಂಡಿತ್ ವೆಂಕಟೇಶ್ ಕುಮಾರ್, ಶಿಕ್ಷಣ, ಆರೋಗ್ಯ ಕ್ಷೇತ್ರದ ಸಾಧಕ ಶ್ರೀನಿವಾಸ್ ಹಾಗೂ ಸಮಾಜ ಸೇವಕಿ ಪೂರ್ಣಿಮಾ ದೇವಿ ಬರ್ಮನ್ ಅವರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ