ಕೃಷಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಲಿ
Team Udayavani, May 12, 2020, 10:15 AM IST
ಚಿಕ್ಕಬಳ್ಳಾಪುರ: ಕೊರೊನಾ ಲಾಕ್ಡೌನ್ ಪರಿಣಾಮ ಎಲ್ಲ ಕ್ಷೇತ್ರಗಳಿಗಿಂತ ಕೃಷಿ ವಲಯಕ್ಕೆ ಹೆಚ್ಚಿನ ಹೊಡೆದ ಬಿದ್ದಿದ್ದು, ರೈತಾಪಿ ಕೂಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕೂಡಲೇ ಸರ್ಕಾರ ಕೃಷಿ ವಲಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯ ಕರ್ತರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ನಗರದ ತಾಲೂಕು ಕಚೇರಿ ಮುಂದೆ ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಒದಗಿಸಿ ಬೆಲೆ ನಿಗದಿಗೊಳಿಸಬೇಕು, ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ರೈತರಿಗೆ ಕೃಷಿ ಸಾಲ ವಿಸ್ತರಿಸಿ ಸಾಲದ ಬಡ್ಡಿ ಮನ್ನಾಗೊಳಿಸ ಬೇಕು, ಪಡಿತರ ವಿತರಣೆ ಹೆಚ್ಚಿಸಿ ತಲಾ ಒಬ್ಬ ವ್ಯಕ್ತಿಗೆ ತಿಂಗಳಿಗೆ 15 ಕೆ.ಜಿ. ಅಕ್ಕಿ ನೀಡಬೇಕೆಂದು ಪ್ರಾಂತ ರೈತ ಸಂಘದ ಸದಸ್ಯರು ಸರ್ಕಾರವನ್ನು ಆಗ್ರಹಿಸಿದರು.
ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪಮಾತನಾಡಿ, ಕೊರೊನಾ ಸಂಕಷ್ಟದಿಂದ ಎರಡು ತಿಂಗ ಳಿಂದ ಲಾಕ್ಡೌನ್ ಘೋಷಿಸಿರುವ ಸರ್ಕಾರ ರೈತರಿಗೆ, ಕೃಷಿಕರ ಸಮಸ್ಯೆ ಈಡೇರಿಸಲು ಗಂಭೀರ ಪ್ರಯತ್ನ ನಡೆಸಿಲ್ಲ. ಮುಂಗಾರು ಹಂಗಾಮು ಶುರುವಾಗಿರುವುದ ರಿಂದ ರೈತರಿಗೆ ಅಗತ್ಯ ರಸಗೊಬ್ಬರ, ಬಿತ್ತನೆ ಬೀಜ ವಿತರಿಸಲು ಕ್ರಮ ವಹಿಸಬೇಕು.
ಎಲ್ಲಾ ಕೃಷಿ ಪರಿಕರಗಳ ಮೇಲೆ ವಿಶೇಷ ರಿಯಾಯಿತಿ ಘೋಷಿಸಬೇಕು. ಪಶು ಆಹಾರ ಬೆಲೆ ಕಡಿತಗೊಳಿಸಬೇಕು, ರೈತಾಪಿ ಕೃಷಿ ಕೂಲಿ ಕಾರಕ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಸುದರ್ಶನ್, ಬಸವರಾಜ್, ನಾಗೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ