ರಕ್ಕಸ ನಾಯಿಗಳ ಅಟ್ಟಹಾಸಕ್ಕೆ ಮುಗ್ಧ ಜೀವ ಬಲಿ
Team Udayavani, Oct 31, 2021, 10:50 AM IST
Representative Image used
ಚಿಕ್ಕಬಳ್ಳಾಪುರ: ಬೀದಿ ನಾಯಿಗಳ ದಾಳಿಗೆ 11 ವರ್ಷದ ಬಾಲಕ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದ ಖಲಂದರ್ ಖಾನ್ ಎಂಬ ಹುಡುಗ ಶಿಡ್ಲಘಟ್ಟದ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದು. ಇಂದು ಬೆಳಿಗ್ಗೆ ಈತನ ಅಪ್ಪ ಕೂಲಿ ಕೆಲಸಕ್ಕೆ ಹೊರಗಡೆ ಹೋಗಿದ್ದರು ಎನ್ನಲಾಗಿದೆ.
ಈ ವೇಳೆ ಮನೆಯಿಂದ ಹೊರ ಬಂದಿದ್ದ ಬಾಲಕನ ಮೇಲೆ ಸುಮಾರು 20ಕ್ಕೂ ಹೆಚ್ಚು ನಾಯಿಗಳು ಭೀಕರವಾಗಿ ದಾಳಿ ನಡೆಸಿವೆ.
ಇದನ್ನೂ ಓದಿ:-ಡೆತ್ ನೋಟ್ ನಲ್ಲಿ ಪೊಲೀಸರಿಬ್ಬರ ಹೆಸರು ಬರೆದಿಟ್ಟು ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ!
ಈ ದಾಳಿಯನ್ನು ಎದುರಿಸಲು ಸಾಧ್ಯವಾಗದೆ ಅಸಹಾಯಕನಾದ ಬಾಲಕನ ಮೈ ಎಲ್ಲಾ ತೀವ್ರವಾಗಿ ಗಾಯಗಲಾಗಿದ್ದು. ಬಟ್ಟೆಯು ಇಲ್ಲದಂತೆ ನಗ್ನ ಸ್ಥಿತಿಯಲ್ಲಿ ಹಳ್ಳಿ ರಸ್ತೆಯಲ್ಲಿ ಬಿದ್ದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಹಳ್ಳಿಯ ಒರ್ವರು ನಾಯಿಗಳನ್ನು ಓಡಿಸುವ ವೇಳೆಗೆ ಬಾಲಕನ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಈ ಘಟನೆಯ ನಂತರ ಸ್ಥಳಕ್ಕೆ ಬೇಟಿ ನೀಡಿದ ಗ್ರಾಮಸ್ಥರು ಮತ್ತು ನಗರ ಸಭಾ ಸದಸ್ಯರು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸಂಬಂಧ ಪಟ್ಟ ಸ್ಥಳೀಯ ಆಡಳಿತಕ್ಕೆ ತಿಳಿಸಿದರೂ ಸೂಕ್ತ ಕ್ರಮಕೈಗೊಂಡಿಲ್ಲ ಎನ್ನಲಾಗಿದೆ. ಶಿಡ್ಲ್ಘಟ್ಟ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದು, ತಹಶಿಲ್ದಾರ್ ಬಿ.ಎಸ್ ರಾಜೀವ್ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ