ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಿ


Team Udayavani, Jul 3, 2019, 3:00 AM IST

strishak

ಚಿಕ್ಕಬಳ್ಳಾಪುರ: ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸುವಲ್ಲಿ ನಿರ್ಲಕ್ಷ್ಯ ತೋರುವ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ (ವಿಎಸ್‌ಎಸ್‌ಎನ್‌) ಬೆಳೆ ಸಾಲ ನೀಡುವುದಿಲ್ಲ ಎಂದು ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಜಿಲ್ಲಾ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ತಾಲೂಕಿನ ವಿಎಸ್‌ಎಸ್‌ಎನ್‌ ಕಾರ್ಯದರ್ಶಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಅವರು, ಸಹಕಾರ ಸಂಘಗಳ ಕಾರ್ಯದರ್ಶಿಗಳು ಬೆಳೆ ಸಾಲ ನೀಡಲು ತೋರುವ ಆಸಕ್ತಿ, ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡಲು ಏಕೆ ಆಸಕ್ತಿ ತೋರುತ್ತಿಲ್ಲ ಎಂದು ಕಾರ್ಯದರ್ಶಿಗಳನ್ನು ತರಾಟೆಗೆ ತೆಗೆದುಕೊಂಡರು.

ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿಲ್ಲ: ತೀವ್ರ ಬರಗಾಲದಿಂದ ರೈತಾಪಿ ಜನ ಸಂಕಷ್ಟದಲ್ಲಿದೆ. ಆದರೆ ನಿಜವಾದ ರೈತರಿಗೆ ಸಾಲ ಸೌಲಭ್ಯಗಳು ಸಿಗುತ್ತಿಲ್ಲ. ಇತರೆ ಆದಾಯ ಬರುವ ಚಟುವಟಿಕೆಗಳಲ್ಲಿ ಮಹಿಳೆಯರು ತೊಡಗಿಸಿಕೊಳ್ಳಲು ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುತ್ತಿದೆ. ಆದರೆ ವಿಎಸ್‌ಎಸ್‌ಎನ್‌ ಕಾರ್ಯದರ್ಶಿಗಳು ಈ ವಿಚಾರದಲ್ಲಿ ಬದ್ಧತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿಲ್ಲ ಎಂದರು.

ಸಹಕಾರ ಸಂಘವೊಂದು 10 ಕೋಟಿ ಸಾಲ ಕೊಡಿಸಿದರೆ ಅದರಿಂದ 20 ಲಕ್ಷ ಆದಾಯ ಬರುತ್ತದೆ. ಪ್ರತಿಯೊಬ್ಬ ಕಾರ್ಯದರ್ಶಿಗಳು ಇನ್ಮುಂದೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಮಹಿಳಾ ಸಂಘಗಳ ರಚನೆಗೆ ಮುಂದಾಗಬೇಕು. ಕೆಲಸದಲ್ಲಿ ಯಾವುದೇ ಸಬೂಬು ಹೇಳುವಂತಿಲ್ಲ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆಂದರು.

ಚಿಕ್ಕಬಳ್ಳಾಪುರ ಪ್ರಗತಿ ಕುಂಠಿತ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಎರಡು ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ತಾಲೂಕು ಸ್ತ್ರೀಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಪ್ರಗತಿಯಲ್ಲಿ ಸಾಕಷ್ಟು ಕುಂಠಿತವಾಗಿದೆ. ಡಿಸಿಸಿ ಬ್ಯಾಂಕ್‌ ಎಷ್ಟು ಬೇಕಾದರೂ ಸಾಲ ಕೊಡಲು ಸಿದ್ಧವಿದೆ. ಆದರೆ, ಕಾರ್ಯದರ್ಶಿಗಳು ಈ ಬಗ್ಗೆ ಗಮನ ಹರಿಸಬೇಕೆಂದರು.

ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಎಚ್‌.ಎಸ್‌.ಮೋಹನ್‌ ರೆಡ್ಡಿ, ಕೆ.ಎಸ್‌.ದ್ಯಾವಪ್ಪ, ಕಸಬಾ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಚೆನ್ನಕೃಷ್ಣಪ್ಪ, ಅಡಗಲ್‌ ಸಂಘದ ಅಧ್ಯಕ್ಷ ಪಿ.ಕೆಂಪಣ್ಣ ಮತ್ತು ಮೈಲಪ್ಪನಹಳ್ಳಿ ಸಂಘದ ಅಧ್ಯಕ್ಷ ಜಗದೀಶ್‌ ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸುಮಾರು 1 ಲಕ್ಷ ಮಹಿಳೆಯರಿಗೆ ಸಾಲ ವಿತರಿಸಬಹುದಾಗಿದೆ. ಆದರೆ ಕಾರ್ಯದರ್ಶಿಗಳ ಬೇಜವಾಬ್ದಾರಿತನದಿಂದ ಈವರೆಗೆ ಶೇ.10 ರಷ್ಟು ಮಹಿಳೆಯರಿಗೆ ಸಾಲ ದೊರೆಯುತ್ತಿಲ್ಲ. ಇದರಿಂದಾಗಿ ಅಧ್ಯಕ್ಷರು ನಮಗೆ ಮೋಸ ಮಾಡುತ್ತಿದ್ದಾರೆ ಎಂಬ ಭಾವನೆ ಈ ತಾಲೂಕಿನವರಲ್ಲಿ ಬರುತ್ತಿದೆ.
-ಬಾಲ್ಯಹಳ್ಳಿ ಗೋವಿಂದಗೌಡ, ಅಧ್ಯಕ್ಷರು, ಡಿಸಿಸಿ ಬ್ಯಾಂಕ್‌

ಟಾಪ್ ನ್ಯೂಸ್

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.