ಜಿಲ್ಲೆಯ ಹೊಸ ತಾಲೂಕು ರಚನೆಗೆ ಲಾಕ್‌!


Team Udayavani, May 29, 2020, 6:44 AM IST

jil hosa talu

ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೂತನವಾಗಿ ಆಸ್ತಿತ್ವಕ್ಕೆ ಬರಬೇಕಿದ್ದ ಹೊಸ ತಾಲೂಕುಗಳ ರಚನೆಗೆ ಗ್ರಹಣ ಹಿಡಿದಂತಾಗಿದ್ದು, ತಾಪಂ ಹಾಗೂ ಜಿಪಂ ಚುನಾವಣೆಗಳಿಗೂ ಮುನ್ನ ಹೊಸ ತಾಲೂಕುಗಳ ರಚನೆ ಆಗುತ್ತಾ ಅಥವಾ ಇಲ್ಲವಾ ಎನ್ನುವ ಮಾತು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿಯನ್ನು ಹೊಸ ತಾಲೂ ಕಾಗಿ ರಚಿಸಲು ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ನಿರ್ಧಾರವಾದರೆ, ಗೌರಿ ಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯನ್ನು ಹೊಸ ತಾಲೂಕಾಗಿ ರಚನೆ ಮಾಡಲು ಈಗಿನ ಬಿಜೆಪಿ ಸರ್ಕಾರ ಘೋಷಿಸಿತ್ತು.

ಪ್ರಕ್ರಿಯೆ ಶುರುವಾಗಿಲ್ಲ: ಜಿಲ್ಲೆಯ ಬಾಗೇ ಪಲ್ಲಿ ತಾಲೂಕಿನ ಚೇಳೂರು ಹೊಸ ತಾಲೂಕು ರಚನೆಗೆ ಪ್ರಕ್ರಿಯೆಗಳು ಶುರುವಾದ ಬಳಿಕ ಕೊರೊನಾ ಎದುರಾಗಿದ್ದರಿಂದ ಪ್ರಕ್ರಿಯೆಗಳು ಸದ್ದಿಲ್ಲದೇ ಮೊಟಕುಗೊಂಡರೆ, ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿ ತಾಲೂಕು ರಚನೆ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆದರೂ ಇದುವರೆಗೂ ಪ್ರಕ್ರಿಯೆ ಮಾತ್ರ ಶುರುವಾಗಿಲ್ಲ.

ಸಭೆ ನಡೆದಿಲ್ಲ: ಚೇಳೂರು ಹೋಬಳಿಯನ್ನು ತಾಲೂಕು ರಚನೆ ಮಾಡುವ ಸಂಬಂಧ ಜಿಲ್ಲೆಯ ಉಪ ವಿಭಾಗಾಧಿಕಾರಿ ರಘು ನಂದನ್‌, ಚೇಳೂರು ಹೊಸ ತಾಲೂಕುಗಳಿಗೆ ಸೇರುವ ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಬಾಗೇಪಲ್ಲಿ ತಾಲೂಕಿನ  ಶಾಸಕರ ಸಭೆಯನ್ನು ಒಮ್ಮೆ ಕರೆದು ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಕೊರೊನಾ ಲಾಕ್‌ಡೌನ್‌ ಎದುರಾದ ಪರಿಣಾಮ ಹೊಸ ತಾಲೂಕು ರಚನೆಗೆ ಬೇಕಾದ ಚಟುವಟಿಕೆಗಳು ನಡೆಯದ ಕಾರಣ ಚೇಳೂರು ತಾಲೂಕು ಸಹ  ಅಸ್ತಿತ್ವಕ್ಕೆ ಬರಲಿಲ್ಲ.

ಇನ್ನೂ ಮಂಚೇನಹಳ್ಳಿ ಹೋಬಳಿ ತಾಲೂಕು ರಚನೆ ಬಗ್ಗೆ ಯಾವುದೇ ಸಭೆಯಾಗಲಿ, ಸರ್ಕಾ ರದ ಮಟ್ಟದಲ್ಲಿ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿಲ್ಲ. ಮಂಚೇನಹಳ್ಳಿ ತಾಲೂಕಿಗೆ ಗಡಿ ರಚನೆ ಬಗ್ಗೆ ಸಭೆ ನಡೆದು ಒಮ್ಮತ  ತೀರ್ಮಾನ ಆಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಉದಯವಾಗಬೇಕಿದ್ದ ಮಂಚೇನಹಳ್ಳಿ  ಹಾಗೂ ಚೇಳೂರು ತಾಲೂಕುಗಳು ನೆನ ಗುದಿಗೆ ಬಿದ್ದಿವೆ. ಮಂಚೇನಹಳ್ಳಿ ತಾಲೂಕು ರಚನೆ ವಿಚಾರ ಚಿಕ್ಕಬಳ್ಳಾಪುರ ಕ್ಷೇತ್ರದ  ಶಾಸಕರಾಗಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ಗೆ ಉಪ ಚುನಾವಣೆಯಲ್ಲಿ ರಾಜ ಕೀಯವಾಗಿ ಸಾಕಷ್ಟು ಬಲ ತಂದುಕೊಟ್ಟಿದೆ.

ಆದರೆ ಉಪ ಚುನಾವಣೆಗೂ ಮೊದಲು ಸಿಎಂ ಬಿ.ಎಸ್‌.ಯಡಿಯೂರಪ್ಪ ಮಂಚೇನಹಳ್ಳಿ ಹೋಬಳಿ ಹೊಸ ತಾಲೂಕಾಗಿ ಘೋಷಿಸಿದರು. ಆದರೆ ಬಜೆಟ್‌ನಲ್ಲಿ ಯಾವುದೇ ಅನು ದಾನ ಮೀಸಲಿಡಲಿಲ್ಲ. ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಉಸ್ತುವಾರಿ ಸಚಿವರ ಹಾದಿಯಾಗಿ ಯಾರು ಚಕಾರ ಎತ್ತದ ಕಾರಣ ಮಂಚೇನಹಳ್ಳಿ ಹೊಸ ತಾಲೂಕು ಆಗುವ  ಕನಸು ನನಸಾಗದೇ ಉಳಿದಿದೆ.

ಕೊರೊನಾ ಸೋಂಕು ಎದುರಾದ ಬಳಿಕ ಹೊಸ ತಾಲೂಕುಗಳ ಬಗ್ಗೆ ಯಾವುದೇ ಚಟುವಟಿಕೆ ನಡೆದಿಲ್ಲ. ಚೇಳೂರು ತಾಲೂಕು ರಚನೆ ಬಗ್ಗೆ ಚುನಾಯಿತ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ಸರ್ಕಾರಕ್ಕೆ ಸದ್ಯದಲ್ಲೇ ವರದಿ  ಸಲ್ಲಿಸಲಾಗುವುದು. ಮಂಚೇನಹಳ್ಳಿ ತಾಲೂಕು ರಚನೆ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ.
-ಎ.ಎನ್‌.ರಘುನಂದನ್‌, ಉಪ ವಿಭಾಗಾಧಿಕಾರಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.