ಜಿಲ್ಲೆಯ ಹೊಸ ತಾಲೂಕು ರಚನೆಗೆ ಲಾಕ್‌!


Team Udayavani, May 29, 2020, 6:44 AM IST

jil hosa talu

ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೂತನವಾಗಿ ಆಸ್ತಿತ್ವಕ್ಕೆ ಬರಬೇಕಿದ್ದ ಹೊಸ ತಾಲೂಕುಗಳ ರಚನೆಗೆ ಗ್ರಹಣ ಹಿಡಿದಂತಾಗಿದ್ದು, ತಾಪಂ ಹಾಗೂ ಜಿಪಂ ಚುನಾವಣೆಗಳಿಗೂ ಮುನ್ನ ಹೊಸ ತಾಲೂಕುಗಳ ರಚನೆ ಆಗುತ್ತಾ ಅಥವಾ ಇಲ್ಲವಾ ಎನ್ನುವ ಮಾತು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಹೋಬಳಿಯನ್ನು ಹೊಸ ತಾಲೂ ಕಾಗಿ ರಚಿಸಲು ಹಿಂದಿನ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ನಿರ್ಧಾರವಾದರೆ, ಗೌರಿ ಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿಯನ್ನು ಹೊಸ ತಾಲೂಕಾಗಿ ರಚನೆ ಮಾಡಲು ಈಗಿನ ಬಿಜೆಪಿ ಸರ್ಕಾರ ಘೋಷಿಸಿತ್ತು.

ಪ್ರಕ್ರಿಯೆ ಶುರುವಾಗಿಲ್ಲ: ಜಿಲ್ಲೆಯ ಬಾಗೇ ಪಲ್ಲಿ ತಾಲೂಕಿನ ಚೇಳೂರು ಹೊಸ ತಾಲೂಕು ರಚನೆಗೆ ಪ್ರಕ್ರಿಯೆಗಳು ಶುರುವಾದ ಬಳಿಕ ಕೊರೊನಾ ಎದುರಾಗಿದ್ದರಿಂದ ಪ್ರಕ್ರಿಯೆಗಳು ಸದ್ದಿಲ್ಲದೇ ಮೊಟಕುಗೊಂಡರೆ, ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಹೋಬಳಿ ತಾಲೂಕು ರಚನೆ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆದರೂ ಇದುವರೆಗೂ ಪ್ರಕ್ರಿಯೆ ಮಾತ್ರ ಶುರುವಾಗಿಲ್ಲ.

ಸಭೆ ನಡೆದಿಲ್ಲ: ಚೇಳೂರು ಹೋಬಳಿಯನ್ನು ತಾಲೂಕು ರಚನೆ ಮಾಡುವ ಸಂಬಂಧ ಜಿಲ್ಲೆಯ ಉಪ ವಿಭಾಗಾಧಿಕಾರಿ ರಘು ನಂದನ್‌, ಚೇಳೂರು ಹೊಸ ತಾಲೂಕುಗಳಿಗೆ ಸೇರುವ ಚಿಂತಾಮಣಿ, ಶಿಡ್ಲಘಟ್ಟ ಹಾಗೂ ಬಾಗೇಪಲ್ಲಿ ತಾಲೂಕಿನ  ಶಾಸಕರ ಸಭೆಯನ್ನು ಒಮ್ಮೆ ಕರೆದು ಅಭಿಪ್ರಾಯ ಸಂಗ್ರಹಿಸಿದರು. ಬಳಿಕ ಕೊರೊನಾ ಲಾಕ್‌ಡೌನ್‌ ಎದುರಾದ ಪರಿಣಾಮ ಹೊಸ ತಾಲೂಕು ರಚನೆಗೆ ಬೇಕಾದ ಚಟುವಟಿಕೆಗಳು ನಡೆಯದ ಕಾರಣ ಚೇಳೂರು ತಾಲೂಕು ಸಹ  ಅಸ್ತಿತ್ವಕ್ಕೆ ಬರಲಿಲ್ಲ.

ಇನ್ನೂ ಮಂಚೇನಹಳ್ಳಿ ಹೋಬಳಿ ತಾಲೂಕು ರಚನೆ ಬಗ್ಗೆ ಯಾವುದೇ ಸಭೆಯಾಗಲಿ, ಸರ್ಕಾ ರದ ಮಟ್ಟದಲ್ಲಿ ಅಥವಾ ಜಿಲ್ಲಾ ಮಟ್ಟದಲ್ಲಿ ಆಗಿಲ್ಲ. ಮಂಚೇನಹಳ್ಳಿ ತಾಲೂಕಿಗೆ ಗಡಿ ರಚನೆ ಬಗ್ಗೆ ಸಭೆ ನಡೆದು ಒಮ್ಮತ  ತೀರ್ಮಾನ ಆಗದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ಉದಯವಾಗಬೇಕಿದ್ದ ಮಂಚೇನಹಳ್ಳಿ  ಹಾಗೂ ಚೇಳೂರು ತಾಲೂಕುಗಳು ನೆನ ಗುದಿಗೆ ಬಿದ್ದಿವೆ. ಮಂಚೇನಹಳ್ಳಿ ತಾಲೂಕು ರಚನೆ ವಿಚಾರ ಚಿಕ್ಕಬಳ್ಳಾಪುರ ಕ್ಷೇತ್ರದ  ಶಾಸಕರಾಗಿರುವ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ಗೆ ಉಪ ಚುನಾವಣೆಯಲ್ಲಿ ರಾಜ ಕೀಯವಾಗಿ ಸಾಕಷ್ಟು ಬಲ ತಂದುಕೊಟ್ಟಿದೆ.

ಆದರೆ ಉಪ ಚುನಾವಣೆಗೂ ಮೊದಲು ಸಿಎಂ ಬಿ.ಎಸ್‌.ಯಡಿಯೂರಪ್ಪ ಮಂಚೇನಹಳ್ಳಿ ಹೋಬಳಿ ಹೊಸ ತಾಲೂಕಾಗಿ ಘೋಷಿಸಿದರು. ಆದರೆ ಬಜೆಟ್‌ನಲ್ಲಿ ಯಾವುದೇ ಅನು ದಾನ ಮೀಸಲಿಡಲಿಲ್ಲ. ಚುನಾವಣೆ ಮುಗಿದ ಬಳಿಕ ಈ ಬಗ್ಗೆ ಉಸ್ತುವಾರಿ ಸಚಿವರ ಹಾದಿಯಾಗಿ ಯಾರು ಚಕಾರ ಎತ್ತದ ಕಾರಣ ಮಂಚೇನಹಳ್ಳಿ ಹೊಸ ತಾಲೂಕು ಆಗುವ  ಕನಸು ನನಸಾಗದೇ ಉಳಿದಿದೆ.

ಕೊರೊನಾ ಸೋಂಕು ಎದುರಾದ ಬಳಿಕ ಹೊಸ ತಾಲೂಕುಗಳ ಬಗ್ಗೆ ಯಾವುದೇ ಚಟುವಟಿಕೆ ನಡೆದಿಲ್ಲ. ಚೇಳೂರು ತಾಲೂಕು ರಚನೆ ಬಗ್ಗೆ ಚುನಾಯಿತ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದು, ಸರ್ಕಾರಕ್ಕೆ ಸದ್ಯದಲ್ಲೇ ವರದಿ  ಸಲ್ಲಿಸಲಾಗುವುದು. ಮಂಚೇನಹಳ್ಳಿ ತಾಲೂಕು ರಚನೆ ಬಗ್ಗೆ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ.
-ಎ.ಎನ್‌.ರಘುನಂದನ್‌, ಉಪ ವಿಭಾಗಾಧಿಕಾರಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gudibande

Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapur: Siddaramaiah should resign if there is morality: MP Dr K Sudhakar

Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್

Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ: ನಟ ಚೇತನ್ ಆರೋಪ

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

4-gudibande

Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.