![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
Team Udayavani, Apr 15, 2024, 12:55 PM IST
![Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!](https://www.udayavani.com/wp-content/uploads/2024/04/8-10-620x372.jpg)
ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಪರಿಣಾಮ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೃಷಿ ಕೂಲಿ ಹಾಗೂ ಕಟ್ಟಡ ಇತರೇ ನಿರ್ಮಾಣ ಕಾರ್ಮಿಕರಿಗೆ ಬರ ತಂದೊಡ್ಡಿದ್ದು ನಿರ್ಮಾಣ ಕಾರ್ಯಕ್ಕೆ ಭಾರೀ ಹಿನ್ನೆಡೆ ಆದಂತೆ ಆಗಿದೆ.
ಹೌದು, ಲೋಕಸಭಾ ಚುನಾವಣೆ ಇನ್ನೂ ಕೇವಲ 12 ದಿನ ಮಾತ್ರ ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಪರಿಣಾಮ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಕೃಷಿ ಕೂಲಿ ಕಾರ್ಮಿಕರು ಕೆಲಸ ಕಾರ್ಯಗಳಿಗೆ ಗುಡ್ ಬೈ ಹೇಳಿ ಚುನಾವಣಾ ಪ್ರಚಾರಕ್ಕೆ ಮುಂದಾಗಿರುವ ಪರಿಣಾಮ ಕೃಷಿ ಹಾಗೂ ಇತರೇ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಕಾರ್ಮಿಕರ ಬರ ಎದುರಾಗಿದೆ.
ಲೋಕಸಭಾ ಚುನಾವಣೆಯು ಜಿಲ್ಲಾದ್ಯಂತ ಕಾಂಗ್ರೆಸ್ ಹಾಗೂ ಬಿಜೆಪಿ ಜೆಡಿಎಸ್ ಪಕ್ಷಗಳಿಗೆ ತೀವ್ರ ಪ್ರತಿಷ್ಠೆಯ ಕಣವಾಗಿದ್ದು, ಜಿದ್ದಾಜಿದ್ದಿಗೆ ನಿಂತ ಚುನಾವಣಾ ಪ್ರಚಾರಕ್ಕೆ ಅಭ್ಯರ್ಥಿಗಳು ಹಾಗೂ ಅವರ ಹಿಂಬಾಲಕರು ತೊಡಗಿರುವ ಪರಿಣಾಮ ನಗರ ಭಾಗಕ್ಕೆ ಗ್ರಾಮೀಣ ಭಾಗದಿಂದ ಬರುತ್ತಿದ್ದ ಕಟ್ಟಡ ಹಾಗೂ ಇತರೇ ನಿರ್ಮಾಣ ಕಾರ್ಮಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ. ಇದರಿಂದ ನಗರ ಭಾಗದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಕಾಮಗಾರಿಗಳು ಕಾರ್ಮಿಕರ ಕೊರತೆಯಿಂದ ಸ್ಥಗಿತಗೊಂಡಿವೆ. ಮೇಸ್ತಿಗಳಿದ್ದರೂ ಕಟ್ಟಡಕ್ಕೆ ಬೇಕಾದ ಕಚ್ಚಾ ಸಾಮಗ್ರಿ ತಂದುಕೊಡುವ ಕಾರ್ಮಿಕರು ಚುನಾವಣೆ ಪರಿಣಾಮ ಹಳ್ಳಿಗಳಲ್ಲಿಯೆ ಠಿಕಾಣಿ ಹೂಡಿದ್ದು, ಇದರಿಂದ ಕಟ್ಟಡ ಕಾಮಗಾರಿಗಳು ಸ್ಥಗಿತಗೊಳ್ಳುವಂತಾಗಿದೆ. ಬಣ್ಣದ ಕೆಲಸಗಾರರು ಕೂಡ ನಗರಗಳಿಗೆ ಬರುತ್ತಿಲ್ಲ. ಚುನಾವಣೆ ಮುಗಿಯುವವರೆಗೂ ಪೈಟಿಂಗ್ ಕೆಲಸ ಸ್ಥಗಿತ ಮಾಡಿದ್ದೇವೆಂದು ಚಿಕ್ಕಬಳ್ಳಾಪುರದ ಜೈ ಭೀಮ್ ನಗರದ ಪೈಟಿಂಗ್ ಗುತ್ತಿಗೆದಾರ ಮುರಳಿ ಭಾನುವಾರ ಉದಯವಾಣಿಗೆ ತಿಳಿಸಿದರು.
ಸಾಕಷ್ಟು ಕೆಲಸ ಇದೆ. ಆದರೆ ಪೈಟಿಂಗ್ ಕಾರ್ಮಿಕರು ಬರುತ್ತಿಲ್ಲ. ಚುನಾವಣೆ ಮುಗಿಯುವರೆಗೂ ಯಾವುದೇ ಕೆಲಸ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದು ಕಾರ್ಮಿಕರ ಬರದ ಬಗ್ಗೆ ಮುರಳಿ ವಿವರಿಸಿದರು.
ಸಭೆ, ಸಮಾವೇಶಗಳಿಗೂ ಕಾರ್ಮಿಕರ ಹಾಜರ್ :
ರಾಜಕೀಯ ಪಕ್ಷಗಳು ನಡೆಸುವ ಚುನಾವಣಾ ಪ್ರಚಾರ ಸಭೆಗಳಿಗೆ ಅದರಲ್ಲೂ ರೋಡ್ ಶೋ ಅಥವ ತಮ್ಮ ನಾಯಕರ ಆಗಮನ ವೇಳೆ ಆಯೋಜಿಸುವ ಸಮಾವೇಶಗಳಿಗೆ ಕೃಷಿ ಕೂಲಿ ಕಾರ್ಮಿಕರನ್ನು ಹಾಗೂ ಕಟ್ಟಡ ಹಾಗೂ ಇತರೇ ನಿರ್ಮಾಣ ಕಾರ್ಮಿಕರನ್ನು ರಾಜಕೀಯ ಪಕ್ಷಗಳು ಬಳಸಿಕೊಳ್ಳುತ್ತಿರುವುದರಿಂದ ಸಹಜವಾಗಿಯೆ ಜಿಲ್ಲೆಯಲ್ಲಿನ ನಗರ ಭಾಗದಲ್ಲಿ ಕಾರ್ಮಿಕರ ಕೊರತೆ ಎದುರಾಗಿದೆ. ಹಲವು ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾಮಗಾರಿಗಳು ಸ್ಥಿಗತಗೊಂಡಿವೆ. ಗ್ರಾಮೀಣ ಭಾಗದ ಕೃಷಿ ಚಟುವಟಿಕೆಗಳಿಗೂ ಕಾರ್ಮಿಕರ ಬರ ಎದುರಾಗಿದೆ. ಪಕ್ಷಗಳಿಂದ ಕಾರ್ಮಿಕರಿಗೆ ಬೇಡಿಕೆ ಹೆಚ್ಚಿರುವುದರಿಂದ ಪಕ್ಷಗಳು ಕೂಡ ಕಾರ್ಮಿಕರು ಕೇಳಿದಷ್ಟು ಭತ್ಯೆ ಕೊಡಬೇಕಿದೆ.
– ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-gudibande](https://www.udayavani.com/wp-content/uploads/2024/07/2-gudibande-150x90.jpg)
Gudibande: ಬೆಳ್ಳಂಬೆಳಗ್ಗೆ ಶೂಟ್ ಔಟ್, ಓರ್ವ ಸಾವು
![Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್](https://www.udayavani.com/wp-content/uploads/2024/07/sudhakar-1-150x108.jpg)
Chikkaballapura: ಇದು ರಾಜಕೀಯ ಬಜೆಟ್ ಅಲ್ಲ, ರಾಷ್ಟ್ರೀಯ ಬಜೆಟ್: ಸಂಸದ ಡಾ.ಕೆ.ಸುಧಾಕರ್
![Chikkaballapur: Siddaramaiah should resign if there is morality: MP Dr K Sudhakar](https://www.udayavani.com/wp-content/uploads/2024/07/sudhakr-150x83.jpg)
Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
![Mysore ಮೂಡಾ ಹಗರಣ… ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ: ನಟ ಚೇತನ್ ಆರೋಪ](https://www.udayavani.com/wp-content/uploads/2024/07/chethan-150x105.jpg)
MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್
![4-gudibande](https://www.udayavani.com/wp-content/uploads/2024/07/4-gudibande-150x90.jpg)
Gudibanda: ಎರಡು ಪ್ರತ್ಯೇಕ ಅಪಘಾತ; ಒಬ್ಬ ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.