ಲೋಕ ಸಮರ: ಖೋಟಾ ನೋಟು ಚಲಾವಣೆ?


Team Udayavani, Apr 21, 2019, 3:00 AM IST

loka-sam

ಚಿಕ್ಕಬಳ್ಳಾಪುರ: ಕ್ಷೇತ್ರದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಮತದಾರರಿಗೆ ಹಂಚಿಕೆ ಮಾಡಿರುವ ಹಣದಲ್ಲಿ ಖೋಟಾ ನೋಟುಗಳು ಚಲಾವಣೆ ಮಾಡಿರುವ ಪ್ರಸಂಗ ಬೆಳಕಿಗೆ ಬಂದಿದ್ದು, ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಇದೀಗ ಖೋಟಾನೋಟಗಳ ಕಾರುಬಾರಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ರಾಜಕೀಯ ಪಕ್ಷಗಳು ಶತಾಯಗತಾಯ ಕ್ಷೇತ್ರದಲ್ಲಿ ಗೆಲ್ಲಬೇಕೆಂದು ಪ್ರತಿಷ್ಠೆ ಪಣಕ್ಕಿಟ್ಟು ಚುನಾವಣೆ ನಡೆಸಿ ಕ್ಷೇತ್ರದ ಮತದಾರರಿಗೆ ವಿವಿಧ ಆಸೆ, ಆಮಿಷ ನೀಡಿದ್ದು ಈ ವೇಳೆ ಮತದಾರರಿಗೆ ಹಣ ಹಂಚಿಕೆಯ ಸಂದರ್ಭದಲ್ಲಿ ರಾಜಕೀಯ ಪಕ್ಷವೊಂದು ಮತದಾರರಿಗೆ 100 ರೂ. ಮುಖ ಬೆಲೆಯ ಖೋಟೋ ನೋಟುಗಳನ್ನು ಹಂಚಿಕೆ ಮಾಡಿದೆಯೆಂಬ ಆರೋಪ ಪ್ರಬಲವಾಗಿ ಕೇಳಿ ಬಂದಿದ್ದು, ಹಣದ ಆಸೆಗೆ ಬಿದ್ದು ಮತ ಮಾರಿಕೊಂಡ ಮತದಾರರು ಈಗ ಹಣ ಚಲಾವಣೆಯಾಗದಿದ್ದರಿಂದ ಹಿಡಿಶಾಪ ಹಾಕುತ್ತಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯ ಕಣ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು. ಕ್ಷೇತ್ರದ ಹಾಲಿ ಸಂಸದ ಎಂ.ವೀರಪ್ಪ ಮೊಯ್ಲಿ, ಬಿಜೆಪಿಯ ಬಿ.ಎನ್‌.ಬಚ್ಚೇಗೌಡ, ಉಳಿದಂತೆ ಬಿಎಸ್ಪಿ, ಸಿಪಿಎಂ ಹಾಗೂ ಪಕ್ಷೇತರರು ಕಣದಲ್ಲಿದ್ದರು. ಆದರೆ ಕಾಂಗ್ರೆಸ್‌, ಬಿಜೆಪಿ ನಡುವೆಯೇ ಈ ಬಾರಿ ನೇರ ಸ್ಪರ್ಧೆ ಏರ್ಪಟ್ಟಿದ್ದರಿಂದ ತಮ್ಮ ಗೆಲುವಿಗಾಗಿ ರಾಜಕೀಯ ಪಕ್ಷಗಳು ಅಡ್ಡದಾರಿ ಹಿಡಿದು ಮತದಾರರಿಗೆ ಖೋಟಾ ನೋಟುಗಳನ್ನು ವಿತರಿಸುವ ಮೂಲಕ ಮಕ್ಮಲ್‌ ಟೋಪಿ ಹಾಕಿರುವುದು ಈಗ ಮತದಾರರ ಆಕ್ರೋಶಕ್ಕೆ ಕಾರಣವಾಗಿದೆ.

ಶನಿವಾರ ಬೆಳಕಿಗೆ: ಮತದಾನ ನಡೆದ ಎರಡು ದಿನಗಳ ಬಳಿಕ ರಾಜಕೀಯ ಪಕ್ಷಗಳು ಮತದಾರರಿಗೆ ಖೋಟಾ ನೋಟುಗಳನ್ನು ಹಂಚಿರುವುದು ಬೆಳಕಿಗೆ ಬಂದಿದೆ. ಬಹಳಷ್ಟು ಮತದಾರಿಗೆ ಜಿಲ್ಲೆಯಲ್ಲಿ ಒಂದು ಮತಕ್ಕೆ 100, 150, 200, 300 ರೂ. ಕೊಟ್ಟಿದ್ದು ಹಣದ ಹೊಳೆ ಹರಿಸಿವೆ. ಆದರೆ ಮತದಾರರಿಗೆ ಹಣ ನೀಡುವ ಸಂದರ್ಭದಲ್ಲಿ 100 ರೂ. ಮುಖ ಬೆಲೆಯ ಖೋಟಾ ನೋಟುಗಳನ್ನು ಹಣದ ಕಂತುಗಳಲ್ಲಿ ಇಟ್ಟು ವಿತರಿಸಿದ್ದಾರೆ. ಆದರೆ ಯಾರು ವಿತರಿಸಿದ್ದಾರೆಂಬುದು ಮಾತ್ರ ನಿಗೂಢವಾಗಿದೆ.

ಮತದಾರು ತಾವು ಪಡೆದ 100 ರೂ. ಮುಖ ಬೆಲೆಯ ನೋಟುಗಳು ಚಲಾವಣೆ ಆಗದಿರುವುದಕ್ಕೆ ಹಣ ಕೊಟ್ಟವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಕಂಡು ಬಂದಿದೆ. ಆದರೆ ಈ ವಿಚಾರವನ್ನು ಬಹಿರಂಗವಾಗಿ ಹೇಳಲು ಯಾರು ಮುಂದೆ ಬರುತ್ತಿಲ್ಲ. ಹಣ ಪಡೆದವರ ಪೈಕಿ ಬಹುತೇಕರು ಮಹಿಳೆಯರೇ ಆಗಿದ್ದಾರೆ.

ಜಾಲತಾಣಗಳಲ್ಲಿ ಖೋಟಾ ನೋಟಗಳು: ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜಕೀಯ ಪಕ್ಷಗಳು ವಿತರಿಸಿವೆ ಎನ್ನಲಾದ ಖೋಟಾ ನೋಟುಗಳು ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕುತೂಹಲ ಕೆರಳಿಸಿದೆ. ಈ ಬಗ್ಗೆ ಯಾರು ಕೂಡ ಮಾತನಾಡಿರುವ ಆಡಿಯೋ ಇಲ್ಲದಿದ್ದರೂ ರಾಜಕೀಯ ಪಕ್ಷಗಳು ಕ್ಷೇತ್ರದಲ್ಲಿ ಮತ ಗಳಿಕೆಗೆ ಲಕ್ಷಾಂತರ ರೂ. ಖೋಟಾ ನೋಟುಗಳನ್ನು ವಿತರಿಸಿದ್ದು, ಅವುಗಳನ್ನು ಪಡೆದ ಮತದಾರರು ಅವು ಖೋಟಾ ನೋಟು ಎಂದು ಗೊತ್ತಾದ ಮೇಲೆ ಹಣ ಹಂಚಿಕೆ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.