ಇಂದಿರಾ ಕ್ಯಾಂಟೀನ್ನಲ್ಲಿ ಶುಚಿತ್ವ ಕಾಪಾಡಿ
Team Udayavani, Jan 27, 2019, 9:16 AM IST
ಗೌರಿಬಿದನೂರು: ಇಂದಿರಾ ಕ್ಯಾಂಟೀನ್ಗಳಲ್ಲಿ ಕಡಿಮೆ ದರದಲ್ಲಿ ಆಹಾರ ಸಿಗುತ್ತದೆ. ಜೊತೆಗೆ ರುಚಿಕರ ಹಾಗೂ ಶುಚಿತ್ವದ ಆಹಾರ ನೀಡಬೇಕೆಂದು ಸಂಸದ ವೀರಪ್ಪಮೊಯ್ಲಿ ಹೇಳಿದರು.
ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿನ ಇಂದಿರಾ ಕ್ಯಾಂಟೀನ್ಗೆ ಚಾಲನೆ ನೀಡಿದ ನಂತರ ಅನ್ನ ಸಾಂಬರ್ ಮತ್ತು ಕೇಸರಿ ಬಾಸ್ ಸೇವಿಸಿ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರು ಬಡವರ ಹಸಿವನ್ನು ನೀಗಿಸುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವುಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆಯು ಉಪಯುಕ್ತ ಮತ್ತು ಜನಪರವಾದ ಕಾರ್ಯಗಳಾಗಿವೆ.
ವಿವಿಧ ಕಾರ್ಯಗಳ ನಿಮಿತ್ತ ನಗರಕ್ಕೆ ಆಗಮಿಸುವ ಗ್ರಾಮೀಣ ಭಾಗದ ಜನತೆ, ಕೂಲಿ ಕಾರ್ಮಿಕರು ಸೇರಿದಂತೆ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಇಂದಿರಾ ಕ್ಯಾಂಟೀನ್ನಿಂದ ಪ್ರಯೋಜನವಾಗಲಿದೆ.ಅಧಿಕಾರಿಗಳು ಇದರ ಗುಣಮಟ್ಟವನ್ನು ಕಾಪಾಡುವ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು.
ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಹಸಿದವನಿಗೆ ಮಾತ್ರ ಅನ್ನದ ಬೆಲೆ ತಿಳಿಯುತ್ತದೆ. ಅಂತಹ ಜನರ ಪಾಲಿಗೆ ಇಂದಿರಾ ಕ್ಯಾಂಟೀನ್ ವರದಾನವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಜಿÇ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ವಿ.ಮಂಜುನಾಥ್, ಜಿÇ್ಲಾ ನಗರ ಯೋಜನಾ ಅಭಿವೃದ್ಧಿ ಕೋಶದ ನಿರ್ದೇಶಕ ಎನ್.ಭಾಸ್ಕರ್, ತಹಶೀಲ್ದಾರ್ ಎಚ್.ಶ್ರೀನಿವಾಸ್, ನಗರಸಭೆ ಆಯುಕ್ತ ವಿ.ಮುನಿಶ್ಯಾಮಪ್ಪ, ನಗರಸಭೆ ಅಧ್ಯಕ್ಷ ಶಫೀಕ್ ಖಾನ್, ಮುಖಂಡರಾದ ಕೆ.ಎನ್.ಕೇಶವರೆಡ್ಡಿ, ಪ್ರಕಾಶರೆಡ್ಡಿ, ಜಿ.ಬಾಲಾಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024