ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಶಿವಕುಮಾರ್‌ ಸಲಹೆ

Team Udayavani, Aug 17, 2021, 3:42 PM IST

ನರೇಗಾ ಯೋಜನೆ ಸದ್ಬಳಕೆ ಮಾಡಿಕೊಳ್ಳಿ

ಶಿಡ್ಲಘಟ್ಟ: ಉದ್ಯೋಗ ಖಾತ್ರಿ ಯೋಜನೆಯನ್ನು ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ತರಬೇಕೆಂದು ಜಿಪಂ ಉಪ ಕಾರ್ಯದರ್ಶಿ ಬಿ. ಶಿವಕುಮಾರ್‌ ಸಲಹೆ ನೀಡಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಉದ್ಯೋಗ ಖಾತ್ರಿ ಯೋಜನೆ ಕುರಿತು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳು ಸಂಘಟಿತರಾಗಿ ಮೊದಲು ಗ್ರಾಪಂ ಮೂಲಕ ಉದ್ಯೋಗ ಚೀಟಿ ಪಡೆದುಕೊಂಡು, ನೋಂದಣಿ ಮಾಡಿಸಬೇಕು. 256 ಮಾದರಿಯ ಕಾಮಗಾರಿ ಮಾಡಿ, ಆರ್ಥಿಕವಾಗಿ ಸದೃಢರಾಗುವ ಜೊತೆಗೆ ಗ್ರಾಮದಲ್ಲಿ ಉತ್ತಮ ವಾತಾವರಣಸೃಷ್ಟಿಸಲು ಅವಕಾಶಗಳಿವೆ ಎಂದು ವಿವರಿಸಿದರು.

ವಿವಿಧ ಕಾಮಗಾರಿಗಳು: ನರೇಗಾ ಯೋಜನೆ ಮೂಲಕ ಈಗಾಗಲೇ ಶಿಡ್ಲಘಟ್ಟ ತಾಲೂಕು ಸಹಿತ ಜಿಲ್ಲೆಯಲ್ಲಿ ಮಾದರಿ ಸರ್ಕಾರಿ ಶಾಲೆಗಳು,
ಅಂಗನವಾಡಿ ಕೇಂದ್ರ, ಮಳೆ ನೀರು ಸಂರಕ್ಷಣೆ ಮಾಡಲು ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೆ, ಶಾಲಾ ವಿದ್ಯಾರ್ಥಿಗಳಿಗೆ ಭದ್ರತೆ ಒದಗಿಸಲು ಕಾಂಪೌಂಡ್‌ ನಿರ್ಮಾಣ, ಅಂರ್ತಜಲ ಮಟ್ಟವನ್ನು ವೃದ್ಧಿಗೊಳಿಸಲು ಗೋಕುಂಟೆ, ಕಲ್ಯಾಣಿ, ಕೆರೆ ಅಭಿವೃದ್ಧಿಗೊಳಿಸುವ ಜೊತೆಗೆ ಬಹುಕಮಾನ್‌ ಚೆಕ್‌ಡ್ಯಾಂ,ಕಾಲುವೆ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ತಾಂತ್ರಿಕ ತೊಂದರೆ ಇದ್ರೆಕರೆ ಮಾಡಿ:ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗಾಗಿ ಅನೇಕ ಯೋಜನೆ ಜಾರಿಗೊಳಿಸಿದೆ. ನರೇಗಾ ಮೂಲಕ ಕೆಲಸವನ್ನು ಮಾಡಲು ಗ್ರಾಪಂನಿಂದ ಏನಾದರೂ ತೊಂದರೆಯಾಗುತ್ತಿದ್ದರೆ ಅಥವಾ ತಾಂತ್ರಿಕ ದೋಷಗಳ ನೆಪದಲ್ಲಿ ಅನಗತ್ಯವಾಗಿ ಸಹಕರಿಸದಿದ್ದಲ್ಲಿ ನೇರವಾಗಿ ತಮ್ಮ ಮೊಬೈಲ್‌ ಸಂಖ್ಯೆಗಳಿಗೆಕರೆ ಮಾಡಿ ಹೇಳಿದರು.

ಇದನ್ನೂ ಓದಿ:ಅಫ್ಘಾನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧವಾಗಿದೆ: ಪ್ರಹ್ಲಾದ ಜೋಶಿ

ಎಲ್ಲಾ ರೀತಿಯ ನೆರವು: ನಾವು ತಕ್ಷಣ ತಮ್ಮ ದೂರುಗಳಿಗೆ ಸ್ಪಂದಿಸಿ ಸರ್ಕಾರದ ಯೋಜನೆಯ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಇಲಾಖೆಯ ಅಧಿಕಾರಿಗಳಿಂದ ಎಲ್ಲಾ ರೀತಿಯ ಸಹಕಾರ ಮತ್ತು ನೆರವು ಕಲ್ಪಿಸುವುದಾಗಿ ಭರವಸೆ ನೀಡಿದರು.

ಅನೇಕ ಅವಕಾಶಗಳು: ಉದ್ಯೋಗಖಾತ್ರಿ ಯೋಜನೆ ಮೂಲಕ ಅನೇಕ ಕಾಮಗಾರಿ ನಡೆಸಲು ಮಹಿಳಾ ಸ್ವಸಹಾಯ ಸಂಘಗಳಿಗೆ ಅವಕಾಶಗಳಿವೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕೃಷಿ ಚಟುವಟಿಕೆ ಅಥವಾ ವೈಯಕ್ತಿಕ ಕಾಮಗಾರಿ ನಡೆಸಲು ಸಹ ಅವಕಾಶಗಳಿದೆ. ವಿಶೇಷವಾಗಿ ಅಪ್ಪಳ, ಗೃಹ ಬಳಕೆಗಳ ವಸ್ತುಗಳ ತಯಾರಿಕೆ, ಇನ್ನಿತರೆ ಆದಾಯೋತ್ಪನ್ನ ಚಟುವಟಿಕೆ ನಡೆಸಲು ಜಿಪಂ, ತಾಪಂ ಹಾಗೂ
ಗ್ರಾಪನಿಂದ ಎಲ್ಲಾ ರೀತಿಯ ಮಾರ್ಗದರ್ಶನ ನೀಡುತ್ತೇವೆ ಎಂದು ವಿವರಿಸಿದರು.

ಘನ ತ್ಯಾಜ್ಯ ವಿಲೇವಾರಿಗೆ ಅವಕಾಶ: ರಾಜ್ಯದ ನಾನಾ ಭಾಗಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳು, ಗ್ರಾಮ ನೈರ್ಮಲ್ಯ ಕಾಪಾಡುವ ಕೆಲಸ ಮಾಡಿ, ಗ್ರಾಮವನ್ನು ಸ್ವತ್ಛ ಹಾಗೂ ಸುಂದರವಾಗಿಡುವ ಜೊತೆಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿದ್ದಾರೆ.ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸುತ್ತಿರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ವಹಣೆ ಮಾಡಲು ಸಹ ಅವಕಾಶಗಳಿವೆ ಎಂದು ವಿವರಿಸಿದರು.

ಶುಲ್ಕ ಪಾವತಿಸಿ: ಪ್ರತಿಯೊಂದು ಮನೆಗೆ ತಲಾ 30 ರೂ. ತೆರಿಗೆವಸೂಲಿ ಮಾಡಲುಅವಕಾಶ ಕಲ್ಪಿಸಲಾಗಿದೆ. ನಾಗರಿಕರು ಸಹ ತ್ಯಾಜ್ಯ ವಿಲೇವಾರಿ ಮಾಡಲು ಸಹಕರಿಸಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಭರಿಸಲು ಗ್ರಾಮೀಣ ಪ್ರದೇಶವನ್ನು ಸ್ವತ್ಛವಾಗಿಡಲು ಸಹಕರಿಸಬೇಕು ಎಂದು ವಿವರಿಸಿದರು. ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಪ್ಪ, ಎನ್‌ಆರ್‌ಎಲ್‌ಎಂ ಯೋಜನೆ ಸಲಹೆಗಾರ ರಾಮಸ್ವಾಮಿ, ಡಿಎಂಐಎಸ್‌ ಮುಖಂಡ ಮಧು, ಐ.ಇ.ಸಿ ಸಂಯೋಜಕ ಪ್ರಶಾಂತ್‌, ಎನ್‌ಆರ್‌ಎಲ್‌ ಎಂ ಜಿಲ್ಲಾ ಸಂಯೋಜಕ ಬಿರಾದರ್‌, ತಾಪಂನ ಕನಕಮ್ಮ, ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಸದಸ್ಯರು ಉಪಸ್ಥಿತರಿದ್ದರು

ಸಂಘದ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಸೌಲಭ್ಯಗಳ ಮಾಹಿತಿ: ಚಂದ್ರಕಾಂತ್‌
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಾರಿಗೊಳಿಸುವಯೋಜನೆಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಜೊತೆಗೆ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರ ವಾಟ್ಸ್‌ಆ್ಯಪ್‌ ಗ್ರೂಪ್‌ ಮಾಡಿ ನರೇಗಾ ಮತ್ತು ಸ್ವತ್ಛಭಾರತ ಮಿಷನ್‌, ಇನ್ನಿತರೆ ಯೋಜನೆಗಳ ಸೌಲಭ್ಯಗಳ
ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ತಾಪಂ ಇಒ ಚಂದ್ರಕಾಂತ್‌ ಹೇಳಿದರು.

ತಾಲೂಕು ಕಚೇರಿಯ ಸಭಾಂಗಣದಲ್ಲಿ ಉದ್ಯೋಗ ಖಾತ್ರಿ ಯೋಜನೆ ಕುರಿತು ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಗ್ರಾಪಂಗಳಲ್ಲಿ ಉದ್ಯೋಗವನ್ನು ಬೇಕೆಂದು ಬರುವರಿಗೆ ಕಡ್ಡಾಯವಾಗಿ ಉದ್ಯೋಗ ಚೀಟಿಯನ್ನು ನೀಡಲು ಸೂಚನೆ ನೀಡಲಾಗಿದೆ.

ಮಹಿಳೆಯರು ಕೌಶಲ್ಯವನ್ನು ಬೆಳೆಸಿಕೊಂಡು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸದೃಢರಾಗಬೇಕೆಂದು ಸಲಹೆ ನೀಡಿದರು. ಸಭೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಗ್ರಾಪಂನಲ್ಲಿ ಉದ್ಯೋಗ ಚೀಟಿ ಮತ್ತು ಕಾಮಗಾರಿ ನಡೆಸಲು ಆಗುತ್ತಿರುವ ತೊಂದರೆಯನ್ನು ಜಿಪಂ ಉಪ ಕಾರ್ಯದರ್ಶಿ ಮತ್ತು ತಾಪಂ ಇಒ ಗಮನಕ್ಕೆ ತಂದು ಪರಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಪ್ರತಿಯೊಂದು ಹಂತದಲ್ಲಿ ಅಗತ್ಯ ಸಹಕಾರ ಮತ್ತು ನೆರವು ನೀಡುವುದಾಗಿ ಭರವಸೆ ನೀಡಿ, ತಮ್ಮ ಮೊಬೈಲ್‌ ಸಂಖ್ಯೆಗಳನ್ನು ನೀಡಿ ಕರೆ ಮಾಡಿ ಎಂದರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.