ಮನುಷ್ಯನಿಗೆ ಈಜುನಿಂದ ನಿರಾಳ ಭಾವ


Team Udayavani, Apr 25, 2019, 3:07 AM IST

manushyanige

ಚಿಕ್ಕಬಳ್ಳಾಪುರ: ಮನುಷ್ಯನಿಗೆ ಯಾವ ಕ್ರೀಡೆಯಿಂದಲೂ ಸಿಗದಷ್ಟು ಮಾನಸಿಕ ನೆಮ್ಮದಿ, ನಿರಾಳತೆ ಈಜಿನಿಂದ ಮಾತ್ರ ಸಿಗುತ್ತದೆ. ಈಜು ಆತ್ಮರಕ್ಷಣೆ ಕಲೆಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬರು ಈಜು ಕಲಿಯುವುದು ತೀರಾ ಅವಶ್ಯಕ ಎಂದು ಜಿಲ್ಲಾ ಯುವ ಸಬಲಿಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ ತಿಳಿಸಿದರು.

ನಗರದ ಸರ್‌ ಎಂ.ವಿಶ್ವೇಶ್ವಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಯುವ ಸಬಲಿಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರದ ಭಾಗವಾಗಿ ಮೊದಲ ಹಂತದ ಈಜು ಕಲಿಕಾ ತರಬೇತಿ ಮುಕ್ತಾಯ ಸಮಾರಂಭದಲ್ಲಿ ಈಜು ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಇಲಾಖೆ ವತಿಯಿಂದ ಪ್ರಶಸ್ತಿ ಹಾಗೂ ಮೆಡಲ್‌ ವಿತರಿಸಿ ಮಾತನಾಡಿದರು.

ಚಿಕ್ಕ ವಯಸ್ಸಿನಲ್ಲಿಯೇ ಕಲಿಯಬೇಕು: ಬಹಳಷ್ಟು ಜನತೆ ಈಜು ಕಲಿಯದೇ ಕೆಲವು ಪ್ರಕೃತಿ ವಿಕೋಪ ಸೇರಿದಂತೆ ಜಲಪಾತಗಳಲ್ಲಿ ಬಿದ್ದು ಮೃತಪಡುತ್ತಾರೆ. ಆದರೆ ಈಜು ಕಲಿತವರು ಜಲಾಶಯಗಳಲ್ಲಿ ಬಿದ್ದ ತಕ್ಷಣ ದಡ ಮಟ್ಟುತ್ತಾರೆ. ಮತ್ತೂಬ್ಬರನ್ನು ರಕ್ಷಿಸಲು ಸಾಧ್ಯವಿದೆ ಎಂದರು. ಬೇರೆ ಕ್ರೀಡೆಗಳಲ್ಲಿ ತೊಡಗಿದರೆ ಮನುಷ್ಯನಿಗೆ ಆಯಾಸವಾಗುತ್ತೆ.

ಆದರೆ ಎಷ್ಟೇ ಬಾರಿ ಈಜು ಮಾಡಿದರೂ ಆಯಾಸ ಆಗುವುದಿಲ್ಲ. ಈಜು ಮಾನಸಿಕ ಹಾಗೂ ದೈಹಿಕವಾಗಿ ಮನುಷ್ಯನನ್ನು ಸದೃಢಗೊಳಿಸುತ್ತದೆ. ಪೋಷಕರು ಚಿಕ್ಕ ವಯಸ್ಸಿಗೆ ಮಕ್ಕಳಿಗೆ ಈಜು ಕಲಿಸುವ ತರಬೇತಿ ಕಳಿಸುವುದು ಬಹಳ ಮುಖ್ಯ. ದೊಡ್ಡವರಾದ ಮೇಲೆ ಈಜು ಕಲಿಕೆ ಮೇಲೆ ಆಸಕ್ತಿ ಬರುವುದಿಲ್ಲ ಎಂದರು.

ಜಿಲ್ಲೆಗೆ ಮಾದರಿ ಈಜುಕೊಳ: ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳ ರಾಜ್ಯಕ್ಕೆ ಮಾದರಿಯಾಗಿದೆ. ಬೆಂಗಳೂರು ಬಿಟ್ಟರೆ ಸುಸಜ್ಜಿತವಾದ ಈಜುಕೊಳ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಮಾತ್ರ ಇದೆ. ಮೊದಲನೇ ಹಂತದ ತರಬೇತಿಗೆ ಮಕ್ಕಳಿಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಜಿಲ್ಲೆಯ ಜನತೆ ಹಾಗೂ ಪೋಷಕರು ಈಜುಕೊಳವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ರುದ್ರಪ್ಪ ಕೋರಿದರು.

1 ರಿಂದ 10ನೇ ತರಗತಿ ಮಕ್ಕಳು: 6 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸಲಾಗಿದ್ದ ಈಜು ತರಬೇತಿ ಶಿಬಿರದಲ್ಲಿ 1 ರಿಂದ 10 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆಸಕ್ತಿಯಿಂದ ಈಜು ತರಬೇತಿಯಲ್ಲಿ ಭಾಗವಹಿಸಿದ್ದರು. ಬೆಂಗಳೂರಿನಿಂದ ಆಗಮಿಸಿದ್ದ ಖ್ಯಾತ ಈಜು ತರಬೇತಿದಾರ ಪುಂಡಲೀಕಾ ರವರು ಮಕ್ಕಳಿಗೆ ಈಜು ತರಬೇತಿ ನೀಡಿದರು. ಶಿಬಿರದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಇಲಾಖೆ ವತಿಯಿಂದ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಈಜು ತರಬೇತಿಗೆ 84 ಮಂದಿ ಭಾಗಿ: ಸರ್‌.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಈಜುಕೊಳದಲ್ಲಿ ಜಿಲ್ಲಾ ಯುವ ಸಬಲಿಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯ ಸುಮಾರು 84 ಮಂದಿ ಶಾಲಾ ಮಕ್ಕಳಿಗೆ ಮೊದಲ ಹಂತದಲ್ಲಿ 21 ದಿನಗಳ ಕಾಲ ಈಜು ಕಲಿಕಾ ತರಬೇತಿ ಆಯೋಜಿಸಲಾಗಿತ್ತು. ಕಡೆ ದಿನ ಮಕ್ಕಳಿಗೆ ವಿವಿಧ ಹಂತದಲ್ಲಿ ಈಜು ಸ್ಪರ್ಧೆಗಳನ್ನು ಆಯೋಜಿಸಿದ ಬಳಿಕ ವಿಜೇತರಾದ ವಿದ್ಯಾರ್ಥಿಗಳಿಗೆ ಕ್ರೀಡಾ ಇಲಾಖೆ ವತಿಯಿಂದ ಪ್ರಮಾಣ ಪತ್ರ ಹಾಗೂ ಮೆಡಲ್‌ಗ‌ಳನ್ನು ವಿತರಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.