ಜಿಲ್ಲೆಯಲ್ಲಿ ಮಾನವ ನಿರ್ಮಿತ ಕಾಡ್ಗಿಚ್ಚೇ ಜಾಸ್ತಿ!


Team Udayavani, Jan 17, 2020, 12:23 PM IST

cb-tdy-1

ಚಿಕ್ಕಬಳ್ಳಾಪುರ: ಬಯಲು ಸೀಮೆ ಜಿಲ್ಲೆಗಳಲ್ಲಿ ಒಂದಾದ ಚಿಕ್ಕಬಳ್ಳಾಪುರದಲ್ಲಿ ಯಾವುದೇ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ನದಿ, ನಾಲೆಗಳು ಇಲ್ಲದೇ ಭೂಮಿ ಹಸಿರು ಕಾನನಗಿಂತ ಹೆಚ್ಚು ಒಣ ಪ್ರದೇಶದಿಂದ ಆವರಿಸಿಕೊಂಡಿರುವ ಪರಿಣಾಮ ಬೇಸಿಗೆ ಬಂದರೆ ಜಿಲ್ಲೆಯ ಅರಣ್ಯವನ್ನು ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ನೋಡಬೇಕಾದ ಪರಿಸ್ಥಿತಿ ಅರಣ್ಯ ಇಲಾಖೆಯದ್ದಾಗಿದೆ.

ಅರಣ್ಯ ನಾಶ: ಸತತ ಹತ್ತಾರು ವರ್ಷಗಳಿಂದ ಮಳೆ ಇಲ್ಲದೇ ಬರದಿಂದ ತತ್ತರಿಸಿರುವ ಜಿಲ್ಲೆಯಲ್ಲಿ ಕಾಡಿನೊಳಗಿನ ಮರ, ಗಿಡಗಳು, ಅಪಾರ ಪ್ರಮಾಣದ ಸಸ್ಯ ಸಂಪತ್ತು ಬೇಸಿಗೆ ಬಂದರೆ ಒಣಗುವಂತಾಗಿದೆ. ಈ ವೇಳೆ ಆಕಸ್ಮಿಕವಾಗಿ ಅಥವಾ ಮಾನವ ನಿರ್ಮಿತ ಕಾಡ್ಗಿಚ್ಚು ಸಂಭವಿಸಿ ವ್ಯಾಪಕ ಪ್ರಮಾಣದಲ್ಲಿ ಅರಣ್ಯ ನಾಶವಾಗುತ್ತಿರುವುದು ಜಿಲ್ಲೆಯ ಹವಾಮಾನ ವೈಪರೀತ್ಯದ ಮೇಲೆ ಸಾಕಷ್ಟು ದುಷ್ಪರಿಣಾಮಗಳು ಬೀರುವುದರ ಜೊತೆಗೆ ಜಿಲ್ಲೆ ಸದಾ ಬರದ ಛಾಯೆಯಿಂದ ನರಳುವಂತಾಗಿದೆ.

ನಂದಿಸಲು ಸಕಾಲಕ್ಕೆ ಅಸಾಧ್ಯ: ಜಿಲ್ಲೆಯಲ್ಲಿ ಮಿತಿ ಮೀರಿ ಬೆಳೆಸಿರುವ ನೀಲಿಗಿರಿ ಮರಗಳು ಬೇಸಿಗೆಯಲ್ಲಿ ಕಾಣುವ ಕಾಡ್ಗಿಚ್ಚುಗೆ ಇನ್ನಷ್ಟು ತುಪ್ಪ ಸುರಿಯುವಂತಾಗಿದೆ. ಬೃಹದಾಕಾರವಾಗಿರುವ ಬೆಟ್ಟಗುಡ್ಡಗಳಲ್ಲಿ ಬೇಸಿಗೆಯಲ್ಲಿ ಉದುರುವ ಎಲೆಗಳಿಗೆ ಆಕಸ್ಮಿಕವಾಗಿ ತಗಲುವ ಬೆಂಕಿ ಕಿಡಿಗಳಿಗೆ ಕಾಡ್ಗಿಚ್ಚು ಹರಡುತ್ತಿದೆ. ಆದರೆ ಅದನ್ನು ಸಮರ್ಪಕವಾಗಿ ಸಕಾಲದಲ್ಲಿ ನಂದಿಸಲು ಸಾಧ್ಯವಾಗದೇ ಹೆಕ್ಟೇರ್‌ ಗಟ್ಟಲೇ ಅರಣ್ಯದೊಳಗಿರುವ ಹುಲ್ಲುಕಡ್ಡಿ, ಸಸ್ಯ ಸಂಪತ್ತು ನಾಶವಾಗುತ್ತಿದೆ.

ಒಣಗಿದ ಹುಲ್ಲಿಗೆ ಬೆಂಕಿ: ಬಹಳಷ್ಟು ಕಾಡ್ಗಿಚ್ಚು ಪ್ರಕರಣಗಳು ಮಾನವ ನಿರ್ಮಿತವಾದದ್ದು ಎನ್ನುವುದು ಆತಂಕದ ವಿಚಾರ. ಹುಲ್ಲು ಸುಟ್ಟರೆ ಮುಂದೆ ಒಳ್ಳೆಯ ಹಸಿರು ಹುಲ್ಲು ಬರುತ್ತದೆ ಎಂಬ ಹಳ್ಳಿಗಾಡಿನ ಕುರಿ, ಮೇಕೆ, ದನ ಕಾಯುವ ಮಂದಿ ಬೇಸಿಗೆಯಲ್ಲಿ ಒಣಗಿದ ಹುಲ್ಲಿಗೆ ಬೆಂಕಿ ಇಡುವುದರಿಂದ ಅದು ಹರಡಿಕೊಂಡು ಕಾಡಿಗೆ ವ್ಯಾಪಿಸುತ್ತದೆ. ಜೊತೆಗೆ ರೈತರು ತಮ್ಮ ಹೊಲ, ಗದ್ದೆಗಳನ್ನು ಸ್ವಚ್ಛ ಮಾಡಲು ಅನಾವಶ್ಯಕವಾಗಿ ಬೆಳೆದ ಮುಳ್ಳು ಕಡ್ಡಿ ಮತ್ತಿತರ ಗಿಡಗಳನ್ನು ಕೀಳಲಾಗದೆ ರೈತರು ಬೆಂಕಿ ಇಟ್ಟು ಸುಡುವುದರಿಂದ ಅದು ಸಮೀಪದ ಕಾಡುಗಳಿಗೆ ಹರಡಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಮತ್ತೂಂದೆಡೆ ಭೂಗಳ್ಳರು ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಅರಣ್ಯಕ್ಕೆ ಬೆಂಕಿ ಇಡುವ ಪ್ರಸಂಗಗಳು ಜಿಲ್ಲೆಯಲ್ಲಿ ನಡೆಯುವುದನ್ನು ತಳ್ಳಿ ಹಾಕುವಂತಿಲ್ಲ.

ಕಾಡ್ಗಿಚ್ಚು ನಂದಿಸಲು ಬೆಂಕಿ ಲೈನ್‌: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಂಭವಿಸುವ ಕಾಡ್ಗಿಚ್ಚು ನಂದಿಸಲುಈಗಿನಿಂದಲೇ ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಸಸ್ಯ ಸಂಪತ್ತು ಇರುವ ನಂದಿಗಿರಿಧಾಮ, ಸ್ಕಂದಗಿರಿಬೆಟ್ಟ, ಅವುಲುಬೆಟ್ಟ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿರುವ ಅರಣ್ಯ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಬ್ಬಂದಿಗಳಿಗೆ ಸೂಚಿಸಿದೆ. ಒಂದು ಕಾಡಿನಿಂದ ಮತ್ತೂಂದು ಕಾಡಿಗೆ ಬೆಂಕಿ ತಗಲದಂತೆ ಬೆಂಕಿ ಲೈನ್‌ ಎಂಬ ಯೋಜನೆ ರೂಪಿಸಿದ್ದರೆ ಕಾಡಿನಲ್ಲಿ ಕಾಣಿಸಿಕೊಳ್ಳುವ ಕಾಡ್ಗಿಚ್ಚು, ಮತ್ತೂಂದು ಕಡೆಗೆ ಹರಡದಂತೆ ಅಲ್ಲಿಯೇ ನಂದಿಸುವ ವ್ಯವಸ್ಥೆಗೆ ಬೆಂಕಿ ವಾಚರ್‌ ಎನ್ನಲಾಗುತ್ತದೆ.

ಅರಣ್ಯ ಇಲಾಖೆಗೆ  ಸಿಬ್ಬಂದಿ ಕೊರತೆ: ಅರಣ್ಯಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವುದು ಬೇಸಿಗೆ ಸಂದರ್ಭದಲ್ಲಿ ಕಾಡ್ಗಿಚ್ಚುನ್ನು ಸಮರ್ಪಕವಾಗಿ ನಿಯಂತ್ರಿಸಿ ನಂದಿಸಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಇದೆ. ಒಣ ಪ್ರದೇಶ ಹೆಚ್ಚಾಗಿರುವುದರಿಂದ ಕಾಡ್ಗಿಚ್ಚು ಹೆಚ್ಚಾಗಿರುತ್ತದೆ. ಆದರೆ ಸಿಬ್ಬಂದಿ ಕೊರತೆಯಿಂದ ಇಂತಹ ಪ್ರಕರಣಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಬೆಂಕಿ ನಂದಿಸಲು ಆಧುನಿಕವಾದ ಉಪಕರಣಗಳು ಇಲ್ಲ. ಅಗ್ನಿಶಾಮಕವನ್ನು ಬಳಸಿಕೊಳ್ಳಬಹುದು. ಆದರೆ ಬೆಟ್ಟ, ಗುಡ್ಡಗಳಲ್ಲಿ ಕಾಡ್ಗಿಚ್ಚು ಸಂಭವಿಸಿದರೆ ಅವುಗಳ ಬಳಕೆ ಸಾಧ್ಯವಾಗುವುದಿಲ್ಲ. ಇದರಿಂದ ಇರುವ ಸಿಬ್ಬಂದಿಯನ್ನು ಬಳಸಿಕೊಂಡು ಅರಣ್ಯ ಇಲಾಖೆ ಬೇಸಿಗೆಯಲ್ಲಿ ಎದುರಾಗುವ ಕಾಡ್ಗಿಚ್ಚನ್ನು ನಂದಿಸಲು ಸಜ್ಜಾಗುತ್ತಿದೆ.

 

ನಂದಿಗಿರಿಧಾಮ, ಸ್ಕಂದಗಿರಿಗೂ ತಪಲ್ಲ  ಕಾಡ್ಗಿಚ್ಚು :  ಜಿಲ್ಲೆಯಲ್ಲಿ ಪ್ರಾಕೃತಿಕವಾಗಿ ಅಪಾರ ಪ್ರಮಾಣದ ಸಸ್ಯಕಾಶಿಯನ್ನು ಹೊಂದಿರುವ ದಕ್ಷಿಣ ಕರ್ನಾಟಕ ಊಟಿಯೆಂದು ಪ್ರಸಿದ್ಧಿ ಪಡೆದಿರುವ ವಿಶ್ವ ವಿಖ್ಯಾತ ನಂದಿಗಿರಿಧಾಮಕ್ಕೂ ಬೇಸಿಗೆ ಅವಧಿಯಲ್ಲಿ ಕಾಡ್ಗಿಚ್ಚು ಕಾಟ ತಪ್ಪಲ್ಲ. ಒಂದಲ್ಲ ಒಂದು ರೀತಿಯಲ್ಲಿ ಗಿರಿಧಾಮದಲ್ಲಿ ಬೇಸಿಗೆಯಲ್ಲಿ ಕಾಡ್ಗಿಚ್ಚು ಹರಡಿಕೊಂಡು ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗುತ್ತದೆ. ಸಮುದ್ರ ಮಟ್ಟದಿಂದ ಬರೋಬ್ಬರಿ 4000 ಸಾವಿರ ಅಡಿಗೂ ಎತ್ತರದಲ್ಲಿರುವ ನಂದಿಗಿರಿಧಾಮದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡರೆ ನಂದಿಸುವುದು ಸವಾಲಿನ ಕೆಲಸ. ಆದರೂ ಅರಣ್ಯ ಇಲಾಖೆ ನಂಗಿರಿಧಾಮದ ಬಗ್ಗೆ ವಿಶೇಷ ಜಾಗ್ರತೆ ವಹಿಸುತ್ತದೆ. ಇನ್ನೂ ನಂದಿಗಿರಿಧಾಮಕ್ಕೆ ಅಂಟಿಕೊಂಡಿರುವ ಚಾರಣ ಪ್ರಿಯರ ಮೋಹಕ ಸೆಳೆಯಾದ ಸ್ಕಂದಗಿರಿ ಬೆಟ್ಟದಲ್ಲಿ ಕೂಡ ಅರಣ್ಯ ಇಲಾಖೆ ಹೆಚ್ಚು ಜಾಗ್ರತೆ ವಹಿಸಬೇಕಿದೆ. ಇಲ್ಲಿ ಕೂಡ ಬೇಸಿಗೆ ಕಾಲದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಬೆಟ್ಟದಲ್ಲಿನ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗುತ್ತದೆ.

ಜಿಲ್ಲೆಯಲ್ಲಿ ಒಣ ಪ್ರದೇಶ  ಇರುವುದರಿಂದ ಅರಣ್ಯ ಪ್ರದೇಶವನ್ನು ಸಾಕಷ್ಟು ಸೂಕ್ಷ್ಮವಾಗಿ ನೋಡಿಕೊಳ್ಳಬೇಕಿದೆ. ಜಿಲ್ಲೆಯಲ್ಲಿ ಒಟ್ಟು ಐದು ವಲಯವಾಗಿ ಗುರುತಿಸಲಾಗಿದೆ. ಇಲಾಖೆ ನೀಡಿರುವ ಅನುದಾನದಲ್ಲಿ ಬೇಸಿಗೆ ಸಂದರ್ಭದಲ್ಲಿ ಸಂಭವಿಸುವ ಕಾಡ್ಗಿಚ್ಚನ್ನು ನಂದಿಸಲು ಬೆಂಕಿ ಲೈನ್‌ ಹಾಗೂ ಬೆಂಕಿ ವಾಚರ್‌ ಮುಖಾಂತರ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಭೀಕರವಾದಂತಹ ಅಥವಾ ವನ್ಯಜೀವಿಗಳ ಸಾವು ನೋವು ಸಂಭವಿಸಿದ ರೀತಿಯಲ್ಲಿ ಎಂದೂ ಕಾಡ್ಗಿಚ್ಚು ಸಂಭವಿಸಿಲ್ಲ -ಶ್ರೀಧರ್‌, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.