ಸಚಿವ ಸುಧಾಕರ್ ಬಳಿಗೆ ಚಾಕು ಇಟ್ಟುಕೊಂಡು ಬಂದ ಯುವಕ ಪೊಲೀಸ್ ವಶಕ್ಕೆ
Team Udayavani, Jul 29, 2022, 7:23 PM IST
ಗುಡಿಬಂಡೆ: ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ| ಕೆ.ಸುಧಾಕರ್ ಕಾರಿನ ಬಳಿಗೆ ಚಾಕು ಇಟ್ಟುಕೊಂಡು ಬಂದ ಯುವಕನನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಧನ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಜ್ವಲ ಭಾರತ, ಉಜ್ವಲ ಭವಿಷ್ಯ ಕಾರ್ಯಕ್ರಮ ಮುಗಿಸಿ ಸಚಿವರು ವಾಪಸ್ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಬೀಚಗಾನಹಳ್ಳಿ ಗ್ರಾಮದ ಯುವಕ ಗಂಗಪ್ಪ ಎಂಬುವನು ಚಾಕು ಇಟ್ಟುಕೊಂಡು ಕಾರಿನ ಬಳಿಗೆ ಹೋಗಿದ್ದು, ಅಲ್ಲಿಯೇ ಇದ್ದ ಪೊಲೀಸ್ ಪೇದೆ ಕರಿಬಾಬು ಅತನ ಅನುಮಾನಾಸ್ಪದ ವರ್ತನೆಯನ್ನು ಗಮನಿಸಿ ತಡೆದಿದ್ದಾರೆ.
ಅತನ ಬಳಿ ಚಾಕು ಇರುವುದನ್ನು ಗಮನಿಸಿ ತಕ್ಷಣ ಅಲ್ಲಿಂದ ಹೊರದಬ್ಬಿ ಇತರ ಪೊಲೀಸರ ಸಹಾಯದಿಂದ ಮುಂದೆ ಆಗಬಹುದಿದ್ದ ಅನಾಹುತವನ್ನು ತಪ್ಪಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಪೊಲೀಸರು ಆತನನ್ನು ಕರೆದೊಯ್ದಿದ್ದು, ಸತ್ಯಾಂಶ ವಿಚಾರಣೆ ನಂತರವೇ ಹೊರಬರಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ