ಮೋಡ; ಮಾವು, ದ್ರಾಕ್ಷಿ ಬೆಳೆಗಾರರಲ್ಲಿ ನಡುಕ


Team Udayavani, Apr 30, 2023, 3:36 PM IST

ಮೋಡ; ಮಾವು, ದ್ರಾಕ್ಷಿ ಬೆಳೆಗಾರರಲ್ಲಿ ನಡುಕ

ಚಿಕ್ಕಬಳ್ಳಾಪುರ: ಹಣ್ಣುಗಳ ರಾಜ ಮಾವು ಮಾರುಕಟ್ಟೆ ಪ್ರವೇಶಕ್ಕೆ ಕೆಲವೇ ದಿನ ಮಾತ್ರ ಬಾಕಿ ಇದೆ. ನಿರೀಕ್ಷೆಯಂತೆ ಮೇ ಮೊದಲ ವಾರದಲ್ಲಿ ಮೊದಲ ಹಂತದಲ್ಲಿ ರಾಜಗಿರಿ, ಸೇಂಧೂರ ಮಾವು ಗ್ರಾಹಕರ ಕೈಗೆ ಸಿಗಲಿದೆ. ಆದರೆ, ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು ಮಾವು, ದ್ರಾಕ್ಷಿ ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದೆ.

ಜಿಲ್ಲಾದ್ಯಂತ ಬರೋಬ್ಬರಿ 11,500 ಹೆಕ್ಟೇರ್‌ನಲ್ಲಿ ತರಹೇವಾರಿ ಮಾವು ಇದ್ದರೆ, 2,900ಕ್ಕೂ ಅಧಿಕ ಹೆಕ್ಟೇರ್‌ನಲ್ಲಿ ದ್ರಾಕ್ಷಿ ಫ‌ಸಲು ಬಿಟ್ಟಿದೆ. ದ್ರಾಕ್ಷಿಗಿಂತ ಮಾವು ಮುಂಚಿತವಾಗಿ ಮಾರುಕಟ್ಟೆ ಪ್ರವೇಶಿಸಲಿದ್ದು ಕೊಯ್ಲಿಗೆ ದಿನಗಣನೆ ಶುರುವಾಗಿದೆ. ಆದರೆ, ಜಿಲೆಯಲ್ಲಿ ಅಕಾಲಿಕ ಮಳೆ ಆಗುವ ಆತಂಕ ಕಂಗೆಡಿಸಿದೆ.

ವಾಣಿಜ್ಯ ಬೆಳೆ: ಒಂದರೆಡು ದಿನಗಳ ಹಿಂದೆ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ ತಾಲೂಕುಗಳಲ್ಲಿ ಭಾರೀ ಮಳೆ ಆಗಿದ್ದು ಈಗ ಜಿಲ್ಲಾದ್ಯಂತ ಅಕಾಲಿಕ ಮಳೆ ಬೀಳುವ ಆತಂಕ ಶುರುವಾಗಿದೆ. ಕೊಯ್ಲಿಗೆ ಬಂದಿರುವ ಮಾವು ವನ್ನು ಕಳೆದುಕೊಳ್ಳುವ ಆತಂಕದಲ್ಲಿ ಬೆಳೆಗಾರರು ಇದ್ದಾರೆ. ಜಿಲ್ಲೆಯಲ್ಲಿ ಕೆಲವೇ ದಿನಕ್ಕೆ ಮಾವು ಸುಗ್ಗಿ ಆರಂಭಗೊಳ್ಳಲಿದೆ. ಪಕ್ಕದ ಕೋಲಾರ ಜಿಲ್ಲೆ ಬಿಟ್ಟರೆ ಮಾವು ಬೆಳೆಯುವುದರಲ್ಲಿ ಜಿಲ್ಲೆಯ ಚಿಂತಾಮಣಿ ತಾಲೂಕು ಮೊದಲ ಸ್ಥಾನದಲ್ಲಿದೆ. ರಾಜಗಿರಿ, ಬೆಂಗಳೂರು, ಸಿಂಧೂರ, ನೀಲಂ, ಬಾದಾಮಿ, ದೇಶಹರಿ, ಆಮ್ರಪಾಲಿ, ತೋತಾಪುರಿ, ಬಂಗನಪಲ್ಲಿ, ಮಲ್ಲಿಕಾ ಹೀಗೆ ತರಹೇವಾರಿ ಮಾವಿನ ಹಣ್ಣುಗಳನ್ನು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಯಾಗಿ ಬೆಳೆಯಲಾಗುತ್ತಿದೆ.

ದ್ರಾಕ್ಷಿಗೆ ಲಕ್ಷ ಲಕ್ಷ ಬಂಡವಾಳ: ದ್ರಾಕ್ಷಿ ಬೆಳೆಯಬೇಕಾದರೆ ಹೆಕ್ಟೇರ್‌ಗೆ ಸರಿ ಸುಮಾರು 1 ರಿಂದ 2 ಲಕ್ಷ ರೂ., ಖರ್ಚು ಮಾಡಬೇಕು. ಈಗಷ್ಟೇ ರೈತರು ದ್ರಾಕ್ಷಿ ತೋಟಗಳನ್ನು ಗೊಬ್ಬರ ಮತ್ತಿತರ ರಾಸಾಯನಿಕ ಗೊಬ್ಬರಗಳನ್ನು ಸಿಂಪಡಿಸಿ ತೋಟಗಳನ್ನು ಹದ ಮಾಡುತ್ತಿದ್ದಾರೆ. ದ್ರಾಕ್ಷಿ ತೋಟಗಳು ಚಿಗುರಿ ಕೆಲವು ಕಡೆ ಸಣ್ಣ ಸಣ್ಣ ಕಾಯಿಗಳು ಬಿಟ್ಟಿವೆ. ಇತಂಹ ಸಂದರ್ಭದಲ್ಲಿ ಮಳೆಯಾದರೆ ದ್ರಾಕ್ಷಿ ಗುಣಮಟ್ಟ ಕುಸಿಯುವುದರ ಜತೆಗೆ ಹಲವು ರೋಗ ಹರಡುತ್ತವೆ ಎಂಬ ಆತಂಕವನ್ನು ಜಿಲ್ಲೆಯ ದ್ರಾಕ್ಷಿ ಬೆಳೆಗಾರರರು ವ್ಯಕ್ತಪಡಿಸುತ್ತಿದ್ದಾರೆ. ಕಳೆದ ವರ್ಷ ಜಿಲ್ಲೆಯ ದ್ರಾಕ್ಷಿ ಬೆಳೆಗಾರರಿಗೆ ಸರಿಯಾಗಿ ಮಾರುಕಟ್ಟೆಯಲ್ಲಿ ಬೆಲೆ ಸಿಗದೇ ಕೈಗೆ ಬಂದ ಬೆಲೆಗೆ ದ್ರಾಕ್ಷಿ ಮಾರಾಟ ಮಾಡುವಂತಾಯಿತು. ಈ ಬಾರಿಯೂ ಬಂಪರ್‌ ಬೆಳೆ ತೆಗೆದು ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದ ಬೆಳೆಗಾರರಿಗೆ ಅಕಾಲಿಕ ಮಳೆ ಭೀತಿ ಆವರಿಸಿದೆ. ಒಂದು ವೇಳೆ ಅಕಾಲಿಕ ಮಳೆ ಅಬ್ಬರ ಹೆಚ್ಚಾದರೆ ಅಪಾರ ಪ್ರಮಾಣದ ದ್ರಾಕ್ಷಿ ಬೆಳೆ ಕಳೆದುಕೊಳ್ಳುವುದರ ಜತೆಗೆ ಮಾವು ಬೆಳೆ ಮೇಲೆಯೂ ದುಷ್ಪರಿಣಾಮ ಬೀರಲಿದೆ.

ಮಾರ್ಚ್‌ನಲ್ಲಿ 2 .20 ಕೋಟಿ ಬೆಳೆ ನಷ್ಟ!: ಜಿಲ್ಲೆಯಲ್ಲಿ ಕಳೆದ ಮಾ.17 ರಂದು ಬಿದ್ದ ಆಲಿಕಲ್ಲು ಸಹಿತ ಭಾರೀ ಮಳೆಯಿಂದಾಗಿ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಡೆಸಿರುವ ಬೆಳೆ ನಷ್ಟದ ಪ್ರಾಥಮಿಕ ಸಮೀಕ್ಷೆಯಲ್ಲಿ ಬರೋಬ್ಬರಿ 2.20 ಕೋಟಿಗೂ ಅಧಿಕ ಮೌಲ್ಯದ 100 ಹೆಕ್ಟೇರ್‌ನಲ್ಲಿನ ತೋಟಗಾರಿಕೆ ಬೆಳೆ ಮಳೆಯಿಂದ ಹಾನಿಯಾಗಿವೆ. ಇದೀಗ ಮತ್ತೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದರೂ ಸಹಜವಾಗಿಯೇ ರೈತರಲ್ಲಿ ತೀವ್ರ ಆತಂಕ ಮೂಡಿಸಿದೆ.

ಬೆಳೆ ನಷ್ಟ ಪರಿಹಾರಕ್ಕೆ ಎದುರು ನೋಡುತ್ತಿರುವ ಅನ್ನದಾತ: ಮಾರ್ಚ್‌ನಲ್ಲಿ ಜಿಲ್ಲೆಯ ಗುಡಿಬಂಡೆ, ಶಿಡ್ಲಘಟ್ಟ ಹಾಗೂ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಅಪಾರ ಪ್ರಮಾಣದ ದ್ರಾಕ್ಷಿ ಸೇರಿ ಹೂ, ಹಣ್ಣು, ತರಕಾರಿ ಬೆಳೆ ನೆಲ ಕಚ್ಚಿವೆ. ತೋಟಗಾರಿಕಾ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಜಿಲ್ಲೆಯಲ್ಲಿ ಒಟ್ಟು 100 ಹೆಕ್ಟೇರ್‌ನಲ್ಲಿ ಬೆಳೆ ನಷ್ಟ ಆಗಿದೆ. ಅದರಲ್ಲೂ ಗುಡಿಬಂಡೆ ತಾಲೂಕಿನ ಒಂದರಲ್ಲಿಯೇ ಅತಿ ಹೆಚ್ಚು 55.60 ಹೆಕ್ಟೇರ್‌ ಬೆಳೆ ನಾಶವಾಗಿದೆ. ಈ ಬಗ್ಗೆ ಈಗಾಗಲೇ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಬೆಳೆ ನಷ್ಟಕ್ಕೀಡಾದ ರೈತರ ಮಾಹಿತಿ ಸಂಗ್ರಹಿಸಿ ಪ್ರಾಕೃತಿಕ ವಿಕೋಪದಡಿ ಪರಿಹಾರಕ್ಕೆ ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು ಸರ್ಕಾರದಿಂದ ಬರುವ ಪರಿಹಾರಕ್ಕೆ ಜಿಲ್ಲೆಯ ಅನ್ನದಾತರು ಎದುರು ನೋಡುವಂತಾಗಿದೆ. ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ ಹಾಗೂ ಆಲಿಕಲ್ಲು ಮಳೆಯಾದರೆ ಮಾವು ಹಾಗೂ ದ್ರಾಕ್ಷಿ ಬೆಳೆ ನಷ್ಟವಾಗುತ್ತದೆ.

ಕಳೆದ ಮಾರ್ಚ್‌ ನಲ್ಲಿ ಆಲಿಕಲ್ಲು ಮಳೆಗೆ ಸುಮಾರು 2 ಕೋಟಿ ರೂ, ಮೌಲ್ಯದ 100 ಹೆಕ್ಟೇರ್‌ನಲ್ಲಿ ಹೂ, ಹಣ್ಣು, ತರಕಾರಿ, ಪಪ್ಪಾಯಿ, ದ್ರಾಕ್ಷಿ ಮತ್ತಿ ತರ ತೋಟಗಾರಿಕೆ ಬೆಳೆ ನಷ್ಟವಾಗಿದ್ದು ಪರಿಹಾ ರಕ್ಕಾಗಿ ಜಿಲ್ಲಾಡಳಿತಕ್ಕೆ ಈಗಾಗಲೇ ರೈತರ ವಿವರಗಳೊಂದಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. –ಗಾಯಿತ್ರಿ, ಉಪ ನಿರ್ದೇಶಕರು, ತೋಟಗಾರಿಕಾ ಇಲಾಖೆ

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.