ಗಾಂಜಾ ಸಾಗಾಟ: ನಾಲ್ವರ ಬಂಧನ


Team Udayavani, Aug 14, 2019, 3:00 AM IST

gnja-sag

ಚಿಕ್ಕಬಳ್ಳಾಪುರ: ನೆರೆಯ ಆಂಧ್ರಪ್ರದೇಶದಿಂದ ರಾಷ್ಟ್ರೀಯ ಹೆದ್ದಾರಿ-7ರ ಮೂಲಕ ರಾಜಧಾನಿ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಚಿಕ್ಕಬಳ್ಳಾಪುರ ಆರಕ್ಷಕ ಉಪ ಅಧೀಕ್ಷಕ ಪ್ರಭುಶಂಕರ್‌ ನೇತೃತ್ವದ ತಂಡ, ಬರೋಬ್ಬರಿ 20 ಕೆ.ಜಿ. ಗಾಂಜಾ ಜಪ್ತಿ ಮಾಡಿಕೊಂಡಿದೆ.

ಬಂಧಿತ ಆರೋಪಿಗಳನ್ನು ನೆರೆಯ ಆಂಧ್ರಪ್ರದೇಶದ ಕದಿರಿ ತಾಲೂಕಿನ ವಂಚರೆಡ್ಡಿಪಲ್ಲಿ ಗ್ರಾಮದ ನಿವಾಸಿ ನಾರಾಯಣ ಬಿನ್‌ ನಾಗಪ್ಪ (38), ವಿಶಾಖಪಟ್ಟಣಂನ ರತ್ನಪೇಟೆ ಗ್ರಾಮದ ಪಿಂಡಿ ಅಪ್ಪಣ್ಣ ಬಿನ್‌ ಸಿಂಹಾಚಲಂ (32), ನಲ್ಲಗೊಂಡ ಗ್ರಾಮದ ತುರೇರಾಮ್‌ ಕೋಂ ನಾಗೇಶ್ವರರಾವ್‌ (25) ಹಾಗೂ ಕದಿರಿ ತಾಲೂಕಿನ ನಲ್ಲಗುಟ್ಟಪಲ್ಲಿ ಗ್ರಾಮದ ಅಂಜನೇಯಲು ಬಿನ್‌ ವೆಂಕಟರವಣ (27) ಎಂದು ಗುರುತಿಸಲಾಗಿದೆ.

ಚಿತ್ರಾವತಿ ಬಳಿ ಸೆರೆ: ಚಿಕ್ಕಬಳ್ಳಾಪುರ ಉಪ ವಿಭಾಗದ ಆರಕ್ಷಕ ಉಪ ಅಧೀಕ್ಷಕ ಪ್ರಭುಶಂಕರ್‌ ನೇತೃತ್ವದಲ್ಲಿ ಪೊಲೀಸರ ತಂಡ ನಗರ ಹೊರ ವಲಯದ ಚಿತ್ರಾವತಿ ಸಮೀಪ ಐಎಂವಿ ಪ್ರಕರಣಗಳನ್ನು ದಾಖಲಿಸುವಾಗ ಬಾಗೇಪಲ್ಲಿ ಕಡೆಯಿಂದ ಬರುವ ವಾಹನಗಳನ್ನು ತಪಾಸಣೆ ನಡೆಸಿದಾಗ ಸಿಕ್ಕಿ ಬಿದ್ದಿದ್ದಾರೆ.

ಆಂಧ್ರ ಕಡೆಯಿಂದ ಬಂದ ಎಪಿ-02-ಟಿಸಿ-0051 ಆಟೋ ರಿಕ್ಷಾ ಮತ್ತು ಅದರ ಹಿಂಬದಿಯಲ್ಲಿ ಬಂದ ಎಪಿ39-ಎಕೆ-992 ಸಂಖ್ಯೆಯ ಟಿವಿಎಸ್‌ ಎಕ್ಸೆಲ್‌ ದ್ವಿಚಕ್ರವಾಹನ ಬಂದಿದ್ದು ಎರಡು ವಾಹನಗಳನ್ನು ಪೊಲೀಸರು ಅನುಮಾನ ಬಂದು ತಪಾಸಣೆ ನಡೆಸಿದಾಗ ಆರೋಪಿಗಳು ಮೂರು ಲಗೇಜ್‌ ಬ್ಯಾಗ್‌ಗಳಲ್ಲಿ ಸುಮಾರು 20 ಕೆ.ಜಿ. ತೂಕ ಇರುವ ಗಾಂಜಾ ಸೊಪ್ಪುನ್ನು ಕವರ್‌ಗಳಲ್ಲಿ ತುಂಬಿ ಅದರ ಮೇಲೆ ಇನ್ಸುಲೇಷನ್‌ ಟೇಪ್‌ನಿಂದ ಸುತ್ತಿ 9 ಬಂಡಲ್‌ಗ‌ಳು ಇಟ್ಟಿರುವುದು ಪತ್ತೆಯಾಗಿದೆ.

5 ಸಾವಿರಕ್ಕೆ ಖರೀದಿಸಿ 10 ಸಾವಿರಕ್ಕೆ ಮಾರಾಟ: ಸದ್ಯ ಗಾಂಜಾ ಸಾಗಾಟ ಜಾಲದಲ್ಲಿ ಪೊಲೀಸರ ಅತಿಥಿಗಳಾಗಿರುವ ಆಂಧ್ರ ಮೂಲದ ಅಸಾಮಿಗಳು, ಆಂಧ್ರಪ್ರದೇಶದ ವಿವಿಧೆಡೆಗಳಲ್ಲಿ ಕೆ.ಜಿ.ಗಾಂಜಾವನ್ನು 5 ಸಾವಿರ ರೂ.ಗೆ ಖರೀದಿ ಮಾಡಿ ಅದನ್ನು ಬೆಂಗಳೂರಿಗೆ ತಂದು 10 ಸಾವಿರ ರೂ.ನಂತೆ ಮಾರಾಟ ಮಾಡುತ್ತಿದ್ದಾರೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಸಂತೋಷ ಬಾಬು ತಿಳಿಸಿದ್ದಾರೆ.

ಆರೋಪಿಗಳಿಂದ ಪೊಲೀಸರು 2,200 ರೂ. ನಗದು, 4 ಮೊಬೈಲ್‌, ಒಂದು ದ್ವಿಚಕ್ರವಾಹನ, ಒಂದು ಆಟೋ ಜಪ್ತಿ ಮಾಡಿಕೊಂಡಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬಹುಮಾನ ಘೋಷಿಸಿದ ಎಸ್ಪಿ: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 20 ಕೆ.ಜಿ.ಯಷ್ಟು ಗಾಂಜಾವನ್ನು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿರುವ ಪೊಲೀಸ್‌ ಉಪಾಧೀಕ್ಷಕ ಪ್ರಭುಶಂಕರ್‌ ಹಾಗೂ ಅವರ ಸಿಬ್ಬಂದಿ ವಿ.ನಾರಾಯಣಸ್ವಾಮಿ, ಬಾಲಸುಬ್ರಹ್ಮಣ್ಯ, ಶಿವಪ್ಪ ಬ್ಯಾಕೋಡ್‌, ಪುಷ್ಪಲತಾ, ಶ್ರೀನಾಥ್‌, ಬಾಬು ಹಾಗೂ ಚಾಲಕ ಮೋಹನ್‌ ಕುಮಾರ್‌ ತಂಡಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಸಂತೋಷ ಬಾಬು ನಗದು ಬಹುಮಾನ ಘೋಷಿಸಿದ್ದಾರೆ.

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಲಾಗುತ್ತಿದ್ದ ಮಹಿಳೆ ಸೇರಿ ನಾಲ್ವರನ್ನು ಬಂಧಿಸಿದ್ದು, ಅವರಿಂದ 20 ಕೆ.ಜಿ.ತೂಕದ ಗಾಂಜಾ ಸೊಪ್ಪು ಸೇರಿದಂತೆ 1 ದ್ವಿಚಕ್ರ ವಾಹನ, ಆಟೋ ರೀಕ್ಷಾ ಸೇರಿ 3 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
-ಕೆ.ಸಂತೋಷ ಬಾಬು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.