ಸಂಘಗಳ ಉತ್ಪನ್ನಕ್ಕೆ ಮಾರುಕಟ್ಟೆ ಅತ್ಯಗತ್ಯ
Team Udayavani, Jul 9, 2020, 6:51 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರು ಸಿದಟಛಿಪಡಿಸುತ್ತಿರುವ ಉತ್ಪನ್ನಗಳಿಗೆ ಬ್ರ್ಯಾಂಡ್ ಮೂಲಕ ಜನರಿಗೆ ತಲುಪಿಸಲು ಸೂಕ್ತ ಮಾರುಕಟ್ಟೆ ವ್ಯವಸ್ಥೆ ಆಗ ಬೇಕೆಂದು ಮಾಜಿ ಕೃಷಿ ಸಚಿವ, ಗೌರಿಬಿದನೂರು ಶಾಸಕ ಎನ್.ಎಚ್.ಶಿವಶೆಂಕರರೆಡ್ಡಿ ತಿಳಿಸಿದರು.
ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಸಂಜೀವಿನಿ ಕುಟೀರ ಸ್ವಸಹಾಯ ಸಂಘಗಳ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಸಹಾಯ ಸಂಘಗಳು ರಚನೆಗೊಂಡ ನಂತರ ಮಹಿಳೆ ಯರು ಸ್ವಾವಲಂಬಿ ಜೀವನದೊಂದಿಗೆ ಕುಟುಂಬದ ಆರ್ಥಿಕತೆಯು ಸುಧಾರಿಸುವು ದರಲ್ಲಿ ಹೆಚ್ಚಿನ ಮಹತ್ವವನ್ನು ವಹಿಸುತ್ತಿದ್ದಾರೆ ಎಂದು ಹೇಳಿದರು.
ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸುವ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ಯನ್ನು ಒದಗಿಸಬೇಕು ಮತ್ತು ತಯಾರಿಸಿದ ಉತ್ಪನ್ನಗಳ ಗುಣಮಟ್ಟವನ್ನು ಕಾಯ್ದು ಕೊಳ್ಳಲು ಅವಶ್ಯವಾದ ಸಹಾಯ ಹಾಗೂ ಸಹಕಾರವನ್ನು ನೀಡಬೇಕೆಂದರು. ಗುಣಮಟ್ಟ ಕಾಯ್ದುಕೊಳ್ಳುವುದರೊಂದಿಗೆ ಉತ್ಪನ್ನಗಳಿಗೆ ನಿಗದಿತ ಬ್ರ್ಯಾಂಡ್ ನೀಡುವ ಮೂಲಕ ಜನರಿಗೆ ತಲುಪಿಸುವ ವ್ಯವಸ್ಥೆ ಆಗಬೇಕು.
ಇದಕ್ಕೆ ಪೂರಕವಾದ ಯೋಜನೆಯನ್ನು ರೂಪಿಸಬೇಕೆಂದರು. ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ಸಂಘ ವೆಂಬುದು ಸ್ವಾವಲಂಬಿ ತನವೇ ಅಲ್ಲದೆ, ಉತ್ತಮ ಆರ್ಥಿಕ ಆಡಳಿತ ವ್ಯವಸ್ಥೆಯ ಪರಿ ಚಯವನ್ನು ಮಹಿಳೆಯರಿಗೆ ಮಾಡಿಕೊಡು ತ್ತದೆ. ಇದರಿಂದ ಬ್ಯಾಂಕ್ ಹಣ ಕಾಸು ವ್ಯವಹಾರದ ಜ್ಞಾನವನ್ನು ನೀಡು ವುದಲ್ಲದೆ, ಆಧುನಿಕತೆಯೊಂದಿಗಿನ ಅಭಿವೃದಿಯ ಕಡೆಗೆ ಮಹಿಳೆ ನಡೆಯುವಲ್ಲಿ ಸಹಾಯವಾಗುತ್ತದೆ ಎಂದರು.
ತಾಪಂ ಅಧ್ಯಕ್ಷ ಆರ್.ಲೋಕೇಶ್, ಇಒ ಎನ್.ಮುನಿರಾಜ್, ಸ್ವಸಹಾಯ ಗುಂಪಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ