ಡಿ.18ಕ್ಕೆ ಮೆಗಾ ಲೋಕ ಅದಾಲತ್
Team Udayavani, Nov 26, 2021, 4:33 PM IST
ಚಿಕ್ಕಬಳ್ಳಾಪುರ: ಡಿ.18ಕ್ಕೆ ನಡೆಯುವ ಮೆಗಾ ಲೋಕ ಅದಾಲತ್ನಲ್ಲಿ ಬಾಕಿ ಪ್ರಕರಣ ಇತ್ಯರ್ಥಗೊಳಿಸಿಕೊಳ್ಳಲು ಸುವರ್ಣ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಾಧೀಶ ಲಕ್ಷ್ಮೀಕಾಂತ್ ಜೆ. ಮಿಸ್ಟಿನ್ ಹೇಳಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾದ್ಯಂತ ಡಿ.18 ರಂದು ಮೆಗಾ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಕೋರ್ಟ್ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ, ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿ ಲಕ್ಷ್ಮೀಕಾಂತ್ ಜೆ.ಮಿಸ್ಟಿನ್ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣ ದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲೆಯ ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಂಡು ಪ್ರಕರಣ ಗಳಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳ ಬೇಕು ಎಂದು ಮನವಿ ಮಾಡಿದರು.
ಮೆಗಾ ಅದಾಲತ್ನಲ್ಲಿ ಪ್ರಕರಣವು ಇತ್ಯರ್ಥವಾದಲ್ಲಿ ವ್ಯಕ್ತಿಯು ನೆಮ್ಮದಿ ಜೀವನ ನಡೆಸಲು ಸಾಧ್ಯ. ಲೋಕ್ ಅದಾಲತ್ನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಪ್ರಕರಣವು ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ.
ಇದನ್ನೂ ;- ಮಗ ಕಾಲೇಜಿಗೆ ಹೋದ ವೇಳೆ ಸೊಸೆ ಮೇಲೆ ಅತ್ಯಾಚಾರ ಎಸಗಿದ ಮಾವ: ಕೊಲೆ ಬೆದರಿಕೆ
ಹಾಗಾಗಿ, ಕೋರ್ಟ್ಗಳಲ್ಲಿ ಪ್ರಕರಣ ಹೊಂದಿರುವ ಸಾರ್ವಜನಿಕರು ಅದಾಲತ್ ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿವರಿಸಿದರು. ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ, ಆರ್ಥಿಕ ವಸೂಲಾತಿ, ಉದ್ಯೋಗ ದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕಾರ್ಮಿಕ ವಿವಾದ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್, ನೀರಿನ ಶುಲ್ಕಗಳು, ಜೀವನಾಂಶ ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧ, ವೈವಾಹಿಕ, ಕುಟುಂಬ ಹಾಗೂ ಇತರೆ ಸಿವಿಲ್ ಪ್ರಕರಣ ಗಳು) ಅದಾಲತ್ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!