ಹರಾಜಿಗೆ ವರ್ತಕರು ಗೈರು: ಮಳಿಗೆ ಮತ್ತೆ ನೆನಗುದಿಗೆ


Team Udayavani, Aug 22, 2019, 3:00 AM IST

harajige

ಚಿಕ್ಕಬಳ್ಳಾಪುರ: ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣವಾಗಿ ಹರಾಜುಗೊಳ್ಳದೇ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದು ಸ್ಥಳೀಯ ನಗರಸಭೆಗೆ ಬರುವ ಆದಾಯಕ್ಕೆ ಕತ್ತರಿ ಬಿದ್ದಂತಾಗಿದ್ದ ಜಿಲ್ಲಾ ಕೇಂದ್ರದ ಖಾಸಗಿ ಬಸ್‌ ನಿಲ್ದಾಣದಲ್ಲಿರುವ 47 ಕ್ಕೂ ಹೆಚ್ಚು ಅಂಗಡಿ, ಮಳಿಗೆಗಳ ಹರಾಜು ಪ್ರಕ್ರಿಯೆಗೆ ವರ್ತಕರ ಬಹಿಷ್ಕಾರದಿಂದ ಮತ್ತೆ ನೆನಗುದಿಗೆ ಬಿದ್ದಂತಾಗಿದೆ.

ಕಳೆದ ಆ.13 ರಂದು ನಿಯಮಾನುಸಾರ ಅಂಗಡಿ ಮಳಿಗೆಗಳನ್ನು ಹರಾಜು ನಡೆಸಿ ಲಾಟರಿ ಮೂಲಕ ವರ್ತಕರಿಗೆ ವಿತರಣೆ ಮಾಡುವಂತೆ ಹೈಕೋರ್ಟ್‌ ಆದೇಶ ನೀಡಿತ್ತು. ಕೋರ್ಟ್‌ ಆದೇಶದಂತೆ ಜಿಲ್ಲಾಧಿಕಾರಿಗಳೇ ಖುದ್ದು ನಗರಸಭಾ ಸಭಾಂಗಣದಲ್ಲಿ ವರ್ತಕರ ಸಭೆ ನಡೆಸಿ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು. ಆದರೆ ಆ.13 ರಂದು ನಡೆಯಬೇಕಿದ್ದ ಹರಾಜು ಪ್ರಕ್ರಿಯೆಗೆ ವರ್ತಕರು ಪಾಲ್ಗೊಳ್ಳದೇ ಬಹಿಷ್ಕಾರ ಹಾಕಿರುವುದು ಬೆಳಕಿಗೆ ಬಂದಿದೆ.

47 ಮಳಿಗೆ ನೆನಗುದಿಗೆ: ಖಾಸಗಿ ಬಸ್‌ ನಿಲ್ದಾಣದಲ್ಲಿ ಒಟ್ಟು 47 ಮಳಿಗೆಗಳಿವೆ. ಈ ಪೈಕಿ ಪೌರಾಡಳಿತ ಇಲಾಖೆ ಅಧಿಕಾರಿಗಳ ಈ ಹಿಂದಿನ ಸಭೆಯ ನಡಾವಳಿ ಮತ್ತು ಹೈಕೋರ್ಟ್‌ ಆದೇಶದಂತೆ ಆದ್ಯತೆ ಮೇರೆಗೆ ಈ ಹಿಂದೆ ತೆರೆವಾಗಲಿಕ್ಕೂ ಮೊದಲು ಹಳೆ ಬಸ್‌ ನಿಲ್ದಾಣದಲ್ಲಿದ್ದ 39 ವರ್ತಕರಿಗೆ ನೀಡಲು ಮಳಿಗೆಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಬೇಕಿತ್ತು.

4,700-11,900 ರೂ. ಬಾಡಿಗೆ ನಿಗದಿ: ಮಳಿಗೆಗಳ ಅಳತೆ ಆಧರಿಸಿ 4,700 ರಿಂದ 11,900 ರೂ. ಬಾಡಿಗೆ ನಿಗದಿಯಾಗಿದ್ದು, ಷರತ್ತುಗಳಿಗೆ ಒಳಪಟ್ಟು ವರ್ತಕರಿಗೆ 12 ವರ್ಷ ಕರಾರಿನ ಮೇಲೆ ಮಳಿಗೆಗಳನ್ನು ಬಾಡಿಗೆ ನಿರ್ಧರಿಸಲಾಗಿತ್ತು. ಲಾಟರಿಯಲ್ಲಿ ವರ್ತಕರಿಗೆ ಹಂಚಿಕೆ ಮಾಡಿ ಉಳಿಯುವ 8 ಮಳಿಗೆಗಳಿಗೆ ನಂತರದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಸಲು ಹೈಕೋರ್ಟ್‌ ಸ್ಥಳೀಯ ನಗರಸಭೆಗೆ ಆದೇಶಿಸಿತ್ತು.

ಆದರೆ ವರ್ತಕರು ಜಿಲ್ಲಾಡಳಿತ ನಿಗದಿಪಡಿಸಿರುವ ಠೇವಣಿ ಹಾಗೂ ಬಾಡಿಗೆ ಹಣ ದುಬಾರಿಯಾಗಿದೆ ಎಂದು ಆರೋಪಿಸಿ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯಿಂದ ದೂರ ಉಳಿಯುವ ಮೂಲಕ ಜಿಲ್ಲಾಡಳಿತಕ್ಕೆ ಸೆಡ್ಡು ಹೊಡೆದಿದ್ದಾರೆ. ಹೀಗಾಗಿ ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಹೈಕೋರ್ಟ್‌ ಆದೇಶದಿಂದ ಮುಕ್ತಿ ಕಾಣುವ ನಿರೀಕ್ಷೆ ಹೊಂದಿದ್ದ ಖಾಸಗಿ ಬಸ್‌ ನಿಲ್ದಾಣದ ಮಳಿಗೆಗಳು ಮತ್ತೆ ನೆನಗುದಿಗೆ ಬಿದ್ದಂತಾಗಿದೆ.

ಅಕ್ರಮ ಚಟುವಟಿಕೆಗಳ ತಾಣ: ಜಿಲ್ಲಾ ಕೇಂದ್ರದಲ್ಲಿ ನಗರಸಭೆ ವತಿಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಖಾಸಗಿ ಬಸ್‌ ನಿಲ್ದಾಣದಲ್ಲಿ ಅಂಗಡಿ ಮಳಿಗೆಗಳನ್ನು ನಿರ್ಮಿಸಿ ವರ್ಷಗಳೇ ಉರುಳಿವೆ. ಇದರಿಂದ ಇಡೀ ಬಸ್‌ ನಿಲ್ದಾಣದಲ್ಲಿ ಅಂಗಡಿ ಮಳಿಗೆಗಳು ರಾತ್ರಿಯಾದರೆ ಅಕ್ರಮ ಚಟುವಟಿಕೆಗಳ ತಾಣವಾಗಿದೆ. ಮತ್ತೂಂದು ಕಡೆ ಮಾಸಿಕ ನಗರಸಭೆಗೆ ಹರಿದು ಬರಬೇಕಿದ್ದ ಲಕ್ಷಾಂತರ ರೂ. ಬಾಡಿಗೆ ಕೂಡ ನಗರಸಭೆಗೆ ಬಾರದಂತೆ ಆಗಿದೆ.

ಸ್ಥಳೀಯ ವರ್ತಕರ ವಾದ ಏನು?: ಈ ಹಿಂದೆ ಹಳೆಯ ಖಾಸ್‌ ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಪ್ರಸ್ತುತ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಪ್ರತ್ಯೇಕಗೊಂಡಿವೆ. ಸದ್ಯ ಖಾಸಗಿ ಬಸ್‌ ನಿಲ್ದಾಣಕ್ಕೆ ಕೇವಲ ಬೆರಳೆಣಿಕೆಯಷ್ಟು ಖಾಸಗಿ ಬಸ್‌ಗಳು ಬರುತ್ತವೆ. ಹೆಚ್ಚಿನ ಪ್ರಯಾಣಿಕರು ಬರುವುದಿಲ್ಲ. ಹೀಗಾಗಿ ದುಬಾರಿ ಬಾಡಿಗೆ, ಠೇವಣಿ ಕಟ್ಟಿ ವ್ಯಾಪಾರ ಮಾಡಿ ಬದುಕಲು ಕಷ್ಟವಾಗುತ್ತದೆ. ಈ ಹಿಂದೆ ಹಳೆ ಬಸ್‌ ನಿಲ್ದಾಣದಲ್ಲಿ ಮಳಿಗೆಗಳಿಗೆ 500, 600 ರೂ. ಮಾತ್ರ ಬಾಡಿಗೆ ಕಟ್ಟುತ್ತಿದ್ದೇವು.

ಆದರೆ ಇದೀಗ ಲಕ್ಷಗಟ್ಟಲೇ ಠೇವಣಿ, ಸಾವಿರಾರು ರೂ. ಬಾಡಿಗೆ ಕಟ್ಟಬೇಕು ಎಂದರೆ ಕಷ್ಟವಾಗುತ್ತದೆ. ಸಂತೆ ಮಾರುಕಟ್ಟೆಯಲ್ಲಿರುವ ಸಂಕೀರ್ಣದಲ್ಲಿ 4,000 ಬಾಡಿಗೆ ನಿಗದಿ ಮಾಡಿದರೂ ವರ್ತಕರು ಹೋಗದೆ ಖಾಲಿ ಉಳಿದಿವೆ. ಆದ್ದರಿಂದ ಠೇವಣಿ, ಬಾಡಿಗೆ ಕಡಿಮೆ ಮಾಡಬೇಕು ಎಂದು ವರ್ತಕರು ಮನವಿ ಮಾಡಿದ್ದರು. ಆದರೆ ಇದಕ್ಕೆ ಜಿಲ್ಲಾಡಳಿತ ಒಪ್ಪಿರಲಿಲ್ಲ. ಹೀಗಾಗಿ ಆ.13 ರಂದು ನಡೆಯಬೇಕಿದ್ದ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ವರ್ತಕರ ಬಹಿಷ್ಕಾರದಿಂದ ಸ್ಥಗಿತಗೊಂಡಿದೆ.

ಹೈಕೋರ್ಟ್‌ ಆದೇಶದಂತೆ ಆ.13 ರಂದು ಮಳಿಗೆಗಳ ಹರಾಜು ನಡೆಯಬೇಕಿತ್ತು. ಆದರೆ ವರ್ತಕರು ದುಬಾರಿ ಬಾಡಿಗೆ, ಠೇವಣಿ ಎಂದು ಹೇಳಿ ಯಾರು ಕೂಡ ಭಾಗವಹಿಸಿಲ್ಲ. ಈ ಬಗ್ಗೆ ಮತ್ತೆ ಹೈಕೋರ್ಟ್‌ ಗಮನಕ್ಕೆ ತಂದು ಮುಂದೆ ಕೋರ್ಟ್‌ ನೀಡುವ ಸೂಚನೆಯಂತೆ ಮುಂದಿನ ಕ್ರಮ ವಹಿಸುತ್ತೇವೆ.
-ಉಮಾಕಾಂತ್‌, ನಗರಸಭೆ ಆಯುಕ್ತರು

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.