8 ತಿಂಗಳಿಂದ ಸಿಕ್ಕಿಲ್ಲ ಹಾಲಿನ ಪ್ರೋತ್ಸಾಹ ಧನ!


Team Udayavani, May 27, 2023, 3:57 PM IST

8 ತಿಂಗಳಿಂದ ಸಿಕ್ಕಿಲ್ಲ ಹಾಲಿನ ಪ್ರೋತ್ಸಾಹ ಧನ!

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹ ಧನ ಕಳೆದ 8 ತಿಂಗಳಿಂದ ಜಿಲ್ಲೆಯ ರೈತರಿಗೆ ಜಮೆ ಆಗದೇ ಹಾಲು ಉತ್ಪಾದನೆ ಯಲ್ಲಿ ತೊಡಗಿರುವ ಹೈನುಗಾರರು ಪ್ರೋತ್ಸಾಹ ಧನಕ್ಕಾಗಿ ಚಾತಕ ಪಕ್ಷಿಗಳಂತೆ ಎದುರು ನೋಡುವಂತಾಗಿದೆ.

ಕಳೆದ 2022ರ ಅಕ್ಟೋಬರ್‌ ತಿಂಗಳಿಗೆ ಸ್ಥಗಿತಗೊಂ ಡಿರುವ ಪ್ರೋತ್ಸಾಹ ಧನ ಬರೋಬ್ಬರಿ 8 ತಿಂಗಳಾದರೂ ಇದುವರೆಗೂ ಹಾಲು ಉತ್ಪಾದಕರ ಖಾತೆಗೆ ನಯಾಪೈಸೆ ಜಮೆ ಆಗದೇ ಇರುವುದು ಜಿಲ್ಲೆಯ ಹಾಲು ಉತ್ಪಾದಕರ ಆಕ್ರೋಶಕ್ಕೆ ಕಾರಣವಾಗಿದೆ.

5 ರೂ. ಪ್ರೋತ್ಸಾಹ ಧನ: ಹಾಲು ಉತ್ಪಾದಕರಿಗೆ ಹಾಲು ಒಕ್ಕೂಟಗಳು ವೈಜ್ಞಾನಿಕವಾಗಿ ಬೆಲೆ ನೀಡುತ್ತಿಲ್ಲ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೈನೋದ್ಯಮವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರತಿ ಲೀ.ಹಾಲಿಗೆ ಒಕ್ಕೂಟಗಳು ನೀಡುವ ಬೆಲೆ ಜೊತೆಗೆ ಸರ್ಕಾರ 5 ರೂ. ಪ್ರೋತ್ಸಾಹ ಧನ ನೀಡುತ್ತಾ ಬರುತ್ತಿದೆ. ಆದರೆ, ಕಾಲಕಾಲಕ್ಕೆ ಪ್ರೋತ್ಸಾಹ ಧನ ರೈತರಿಗೆ ತಲುಪಿಸುವಲ್ಲಿ ಸರ್ಕಾರಗಳು ಆಸಕ್ತಿ ತೋರದ ಪರಿಣಾಮ ವರ್ಷಕ್ಕೊಮ್ಮೆ, ಆರು ತಿಂಗಳಗೊಮ್ಮೆ ಪ್ರೋತ್ಸಾಹ ಧನ ನೋಡುವಂತಾಗಿದೆ. ಜಿಲ್ಲೆಯಲ್ಲಿ 900 ಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, ಪ್ರತಿ ನಿತ್ಯ 4 ಲಕ್ಷಕ್ಕೂ ಅಧಿಕ ಲೀ.ಹಾಲು ಉತ್ಪಾದನೆ ಆಗುತ್ತಿದೆ. ಸಾವಿರಾರು ಬಡ ಕುಟುಂಬಗಳು ಹೈನೋದ್ಯಮವನ್ನೇ ಬದುಕಿಗೆ ಆಧಾರವಾಗಿ ಇಟ್ಟುಕೊಂಡಿವೆ. ಆದರೆ ಸರ್ಕಾರ ಮಾತ್ರ ನೀಡಬೇಕಿರುವ ಪ್ರೋತ್ಸಾಹ ಧನ ತಿಂಗಳಾನುಗಟ್ಟಲೇ ಬಾಕಿ ಇರಿಸಿಕೊಂಡಿರುವುದು ಬೇಸರಕ್ಕೆ ಕಾರಣವಾಗಿದೆ.

ಬಾಕಿ ಬಿಡುಗಡೆಗೆ ಆಗ್ರಹ: ಸದ್ಯ ಜಿಲ್ಲಾದ್ಯಂತ ಮುಂಗಾರು ಹಂಗಾಮು ಶುರುವಾಗಿದ್ದು, ರೈತರು ಬಿತ್ತನೆ ಕಾರ್ಯಕ್ಕೆ ಸಿದ್ಧಗೊಳ್ಳಬೇಕಿದೆ. ಮತ್ತೂಂದು ಕಡೆ ಹಾಲು ಉತ್ಪಾದಕರು ಮಕ್ಕಳನ್ನು ಶಾಲಾ, ಕಾಲೇಜುಗಳಿಗೆ ದಾಖಲಿಸಲು ಹಣಕಾಸಿನ ತೊಂದರೆ ಇರುವ ಕಾರಣ ಬಾಕಿ ಪ್ರೋತ್ಸಾಹ ಧನ ಕೊಟ್ಟರೆ ತುಂಬ ಅನುಕೂಲ ಎನ್ನುವ ಪರಿಸ್ಥಿತಿಯಲ್ಲಿ ಜಿಲ್ಲೆಯ ರೈತರು ಇದ್ದಾರೆ.

ಚರ್ಮಗಂಟು ರೋಗಕ್ಕೆ 478 ಜಾನುವಾರು ಬಲಿ! : ವರ್ಷದಿಂದ ವರ್ಷಕ್ಕೆ ಹೈನೋದ್ಯಮ ರೈತರಿಗೆ ಒಂದು ರೀತಿ ಸವಾಲಾಗಿ ಪರಿಣಮಿಸಿದೆ. ಇದರ ನಡುವೆ ಪ್ರತಿ ವರ್ಷ ಕಾಡುವ ಕಾಲುಬಾಯಿ ಜ್ವರ ರೈತರನ್ನು ಕಂಗಾಲಾಗಿಸುತ್ತಿದೆ. ಈ ವರ್ಷ ವಿಶೇಷವಾಗಿ ಜಿಲ್ಲಾದ್ಯಂತ ಆರ್ಭಟಿಸಿದ ಚರ್ಮಗುಂಟು ರೋಗಕ್ಕೆ ಜಿಲ್ಲೆಯಲ್ಲಿ ಬರೋಬ್ಬರಿ 478 ಜಾನುವಾರುಗಳು ಬಲಿಯಾಗಿ ರೈತರು ತೀವ್ರ ಆರ್ಥಿಕ ತೊಂದರೆ ಅನುಭವಿಸಿದರು. ಮೃತಪಟ್ಟ 478 ರಾಸುಗಳ ಪೈಕಿ ಇದುವರೆಗೂ ಕೇವಲ 369 ರಾಸುಗಳಿಗೆ ಮಾತ್ರ ಸರ್ಕಾರದಿಂದ ಪರಿಹಾರ ಸಿಕ್ಕಿದ್ದು, ಉಳಿದಂತೆ 15 ರಾಸುಗಳು ವಿಮೆ ವ್ಯಾಪ್ತಿಗೆ ಒಳಪಟ್ಟರೆ ಉಳಿದ 94 ರಾಸುಗಳಿಗೆ ಸರ್ಕಾರದಿಂದ ಪರಿಹಾರ ಬಾಕಿ ಇದೆಯೆಂದು ಜಿಲ್ಲೆಯ ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ರವಿ ಶುಕ್ರವಾರ ಉದಯವಾಣಿಗೆ ತಿಳಿಸಿದರು.

ಇದರ ನಡುವೆ ಪಶು ಆಹಾರ ಬೆಲೆ ಏರಿಕೆ ಪರಿಣಾಮ ರೈತರು ಹಾಲು ಉತ್ಪಾದನೆಯಿಂದ ವಿಮುಖವಾಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಳೆದ ನಾಲ್ಕೈದು ತಿಂಗಳಿಂದ ಮಾರುಕಟ್ಟೆಯಲ್ಲಿ ಪಶು ಆಹಾರ ಬೆಲೆ ಮಾರುಕಟ್ಟೆಯಲ್ಲಿ ವಿಪರೀತ ಏರಿಕೆ ಆಗುತ್ತಲೇ ಇರುವುದು ರೈತರನ್ನು ಚಿಂತೆಗೀಡು ಮಾಡಿದೆ. ಹಾಲು ಉತ್ಪಾದನೆ ರೈತರಿಗೆ ಲಾಭದಾಯಕವಲ್ಲ ಎನ್ನುವ ಪರಿಸ್ಥಿತಿಯನ್ನು ಪಶುಆಹಾರ ಬೆಲೆ ಏರಿಕೆ ತಂದೊಡ್ಡಿದೆ. 900, 1000 ರೂ. ಇದ್ದ ಪಶು ಆಹಾರ ಬೆಲೆ 1,200, 1400ಕ್ಕೆ ಮುಟ್ಟಿದೆ. ಅದೇ ರೀತಿ ಚಕ್ಕೆ ಕೂಡ 30 ಕೆ.ಜಿ. 1,500 ತಲುಪಿದೆ.

ಸಾಮಾನ್ಯ ವರ್ಗದ ಹಾಲು ಉತ್ಪಾದಕರಿಗೆ ಕಳೆದ ಅಕ್ಟೋಬರ್‌ ತಿಂಗಳಿಂದ ಇಲ್ಲಿವರೆಗೂ ಪ್ರತಿ ಲೀ.ಹಾಲಿಗೆ ನೀಡುವ 5 ರೂ. ಪ್ರೋತ್ಸಾಹ ಧನ ಬಾಕಿ ಇದೆ. ಎಸ್‌ಸಿ ಹಾಗೂ ಎಸ್‌ಟಿ ಸಮುದಾಯದ ಹಾಲು ಉತ್ಪಾದಕರಿಗೆ ಕಳೆದ ಫೆಬ್ರವರಿ ತಿಂಗಳಿಂದ ಸರ್ಕಾರದ 5 ರೂ. ಪ್ರೋತ್ಸಾಹ ಧನ ಬಾಕಿದೆ. ಸದ್ಯದಲೇ ಬಿಡುಗಡೆ ಆಗುವ ನಿರೀಕ್ಷೆ ಇದೆ. – ಗುರುಮೂರ್ತಿ, ವ್ಯವಸ್ಥಾಪಕ ನಿರ್ದೇಶಕರು, ಕೋಚಿಮುಲ್‌

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.