ರಾಗಿ ಖರೀದಿ ಕೇಂದ್ರ: 1,966 ರೈತರು ನೋಂದಣಿ


Team Udayavani, Mar 5, 2020, 3:00 AM IST

raagi-kharidi

ಚಿಕ್ಕಬಳ್ಳಾಪುರ: ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ರಾಗಿ ಬೆಳೆಗೆ ಬೆಂಬಲ ಬೆಲೆ ಘೋಷಿಸಿದರೂ ಖರೀದಿ ಕೇಂದ್ರಗಳ ತೆರೆಯುವುದು ವಿಳಂಬ ಹಾಗೂ ಪಹಣಿಯಲ್ಲಿನ ಹಲವು ಲೋಪದೋಷಗಳಿಂದ ನಿರೀಕ್ಷಿತ ಮಟ್ಟದಲ್ಲಿ ಬೆಂಬಲ ಬೆಲೆ ಜಿಲ್ಲೆಯ ರೈತರ ಕೈ ತಪ್ಪಿದ್ದು ಲಕ್ಷಾಂತರ ರೈತರು ಇರುವ ಜಿಲ್ಲೆಯಲ್ಲಿ ರಾಗಿ ಮಾರಾಟಕ್ಕೆ ಖರೀದಿ ಕೇಂದ್ರಗಳಲ್ಲಿ ಇದುವರೆಗೂ ಕೇವಲ 1,966 ಮಂದಿ ಮಾತ್ರ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ 1.54 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಖುಷ್ಕಿ ಹಾಗೂ ನೀರಾವರಿ ಇದ್ದು, ಕಳೆದ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಕೈಕೊಟ್ಟರೂ ಹಿಂಗಾರು ಕೈ ಹಿಡಿದ ಪರಿಣಾಮ ರಾಗಿ ಬೆಳೆ ಹೆಚ್ಚಾಗಿ ಬೆಳೆದಿದ್ದರು. ಆದರೆ ಕೇಂದ್ರ ಸರ್ಕಾರ ಪ್ರತಿ ಕ್ವಿಂಟಲ್‌ ರಾಗಿಗೆ 3,150 ರೂ. ಬೆಂಬಲ ಬೆಲೆ ಘೋಷಿಸಿದರೂ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸುವುದು ವಿಳಂಬ ಆದ್ದರಿಂದ ಈಗಾಗಲೇ ರೈತರು ಮಾರುಕಟ್ಟೆಯಲ್ಲಿ ರಾಗಿ ಮಾರಾಟ ಮಾಡಿರುವುದರಿಂದ ಖರೀದಿ ಕೇಂದ್ರಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ರೈತರ ನೋಂದಣಿ ಆಗಿಲ್ಲ.

1,966 ಮಂದಿ ಮಾತ್ರ ನೋಂದಣಿ: ಜಿಲ್ಲೆಯಲ್ಲಿ ರಾಗಿ ಖರೀದಿ ಕೇಂದ್ರಗಳಲ್ಲಿ ರೈತರು ಹೆಸರು ನೋಂದಣಿಗೆ ಅವಕಾಶ ಕಲ್ಪಿಸಲಾಗಿದ್ದು ಇದುವರೆಗೂ ಕೇವಲ 1,966 ಮಂದಿ ರೈತರು ಮಾತ್ರ ರಾಗಿ ಮಾರಾಟಕ್ಕೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ನೋಂದಣಿಗೆ ಇನ್ನೂ ಮಾ.15 ರ ವರೆಗೂ ಮಾತ್ರ ಕಾಲವಕಾಶ ನೀಡಲಾಗಿದೆ. ರಾಗಿಯನ್ನು ತಂದು ಖರೀದಿ ಕೇಂದ್ರಗಳಲ್ಲಿ ಮಾರಾಟಕ್ಕೆ ಮಾ.31ರ ವರೆಗೂ ಅವಕಾಶ ನೀಡಲಾಗಿದೆ. ಕಳೆದ ಫೆ.29ಕ್ಕೆ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪೋರ್ಟಲ್‌ನಲ್ಲಿ ನೋಂದಣಿ ಆಗಿರುವ ಪ್ರಕಾರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ 241, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 698, ಚಿಂತಾಮಣಿ ತಾಲೂಕಿನಲ್ಲಿ 345, ಗೌರಿಬಿದನೂರ ತಾಲೂಕಿನಲ್ಲಿ 106 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 576 ರೈತರು ರಾಗಿ ಮಾರಾಟಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ.

ಪ್ರಚಾರದ ಕೊರತೆ: ಸಾಮಾನ್ಯವಾಗಿ ರಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕಾದರೆ ಚುನಾಯಿತ ಜನಪ್ರತಿನಿದಿಗಳ ಮೂಲಕ ಉದ್ಘಾಟಿಸಿ ಸಾಂಕೇತಿಕವಾಗಿ ರೈತರಿಂದ ಖರೀದಿ ಮಾಡಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರಾಗಿಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆಯಂತೆ ಖರೀದಿ ಕೇಂದ್ರಗಳನ್ನು ಆರಂಭಿಸಿದರೂ ಜಿಲ್ಲೆಯಲ್ಲಿ ಅದರ ಬಗ್ಗೆ ಸೂಕ್ತ ಪ್ರಚಾರ ಮಾಡಿಲ್ಲ. ಎಪಿಎಂಸಿ ಮಾರುಕಟ್ಟೆಗಳಲ್ಲಿ ಕಾಟಾಚಾರಕ್ಕೆ ಬ್ಯಾನರ್‌ಗಳನ್ನು ಅಳವಡಿಸಿರುವುದು ಬಿಟ್ಟರೆ ಗ್ರಾಪಂ ಮಟ್ಟದಲ್ಲಿ ಸೂಕ್ತ ಪ್ರಚಾರ ನಡೆಯದಿರುವುದು ಎದ್ದು ಕಾಣುತ್ತಿದ್ದು,

ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರಗಳ ಸ್ಥಾಪನೆಗೆ ನಿಗದಿಪಡಿಸಿರುವ ವೇಳಾ ಪಟ್ಟಿ ಅತ್ಯಂತ ಅವೈಜ್ಞಾನಕವಾಗಿರುವುದರಿಂದ ಬಹಳಷ್ಟು ರೈತರು ಈಗಾಗಲೇ ರಾಗಿ ಕಾಟಾವು ಮಾಡಿ ಕೈಗೆ ಬಂದ ಬೆಲೆಗೆ ಕ್ವಿಂಟಲ್‌ 2000, 2500 ರೂ.ಗೆ ಈಗಾಗಲೇ ಮಾರಾಟ ಮಾಡಿರುವುದರಿಂದ ಖರೀದಿ ಕೇಂದ್ರಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ರಾಗಿ ಖರೀದಿ ಆಗುತ್ತಿಲ್ಲ ಎನ್ನುವ ಮಾತು ಅಧಿಕಾರಿಗಳ ವಲಯದಲ್ಲಿಯೇ ಕೇಳಿ ಬರುತ್ತಿದೆ. ಇನ್ನೂ ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟ ತಾಲೂಕುಗಳ ರಾಗಿ ಖರೀದಿ ಕೇಂದ್ರಗಳನ್ನು ತಾಲೂಕಿನ ಕೇಂದ್ರ ಸ್ಥಾನದಲ್ಲಿ ಅದರಲ್ಲೂ ಎಪಿಎಂಸಿ ಆವರಣದಲ್ಲಿ ತೆರೆಯದೇ ನಗರದ ಹೊರ ಭಾಗದಲ್ಲಿ ತೆರೆಯಲಾಗಿದೆಯೆಂಬ ಆರೋಪ ರೈತರಿಂದ ಕೇಳಿ ಬರುತ್ತಿದೆ.

ಒಟ್ಟು 1,604 ಕ್ವಿಂಟಲ್‌ ರಾಗಿ ಖರೀದಿ: ಜಿಲ್ಲೆಯಲ್ಲಿ ಕೃಷಿ ಇಲಾಖೆ ಹಾಗೂ ಕೃಷಿ ಮಾರುಕಟ್ಟೆ ಸಹಯೋಗದೊಂದಿಗೆ ಜಿಲ್ಲೆಯ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆ ತೆರೆದಿರುವ ರಾಗಿ ಖರೀದಿ ಕೇಂದ್ರಗಳಲ್ಲಿ ಇದುವರೆಗೂ ಒಟ್ಟು 1,604 ಕ್ವಿಂಟಲ್‌ ರಾಗಿ ಖರೀದಿ ಮಾಡಲಾಗಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಒಟ್ಟು 43, ಚಿಂತಾಮಣಿಯಲ್ಲಿ 1, ಶಿಡ್ಲಘಟ್ಟ ತಾಲೂಕಿನಲ್ಲಿ 62 ರೈತರು ಮಾತ್ರ ರಾಗಿ ಖರೀದಿ ಕೇಂದ್ರಗಳಿಗೆ ಆಗಮಿಸಿ ರಾಗಿಯನ್ನು ಬೆಂಬಲ ಬೆಲೆಗೆ ಮಾರಾಟ ಮಾಡಿ ಹೋಗಿದ್ದಾರೆ. ಉಳಿದಂತೆ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು ತಾಲೂಕುಗಳಲ್ಲಿ ರೈತರು ಖರೀದಿ ಕೇಂದ್ರಗಳಿಗೆ ಆಗಮಿಸಿ ರಾಗಿ ಮಾರಾಟ ಮಾಡಿಲ್ಲ. ಚಿಂತಾಮಣಿ ತಾಲೂಕಿನಲ್ಲಿ 345 ಮಂದಿ ರೈತರು ಹೆಸರು ನೋಂದಣಿ ಮಾಡಿಸಿದ್ದರು ಒಬ್ಬ ರೈತರು ಮಾತ್ರ ರಾಗಿ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ್ದಾರೆ.

ಜಿಲ್ಲೆಯಲ್ಲಿ ರೈತರಿಗೆ ಪಹಣಿಯದ್ದೇ ಸಮಸ್ಯೆ: ಜಿಲ್ಲೆಯಲ್ಲಿ ರೈತರಿಗೆ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟಕ್ಕೆ ಆಸಕ್ತಿ ಇದ್ದರೂ ಪಹಣಿಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಮಾಡಿರುವ ಎಡವಟ್ಟುನಿಂದ ಬಹಳಷ್ಟು ರೈತರು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಭರಪೂರ ರಾಗಿ ಬೆಳೆದಿದ್ದರೂ ರೈತರ ಪಹಣಿಗಳಲ್ಲಿ ಸಮರ್ಪಕವಾಗಿ ಬೆಳೆ ವಿವರ ನಮೂದಾಗದ ಕಾರಣ ಖರೀದಿ ಕೇಂದ್ರಗಳಲ್ಲಿ ಪಹಣಿ ನೀಡುವುದು ಕಡ್ಡಾಯ ಆಗಿರುವುದರಿಂದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲೆಯಲ್ಲಿ ಕೃಷಿ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಬಂದಿರುವ ಇಳುವರಿಯಂತೆ ಈ ವರ್ಷ 28 ಸಾವಿರ ಕ್ವಿಂಟಲ್‌ ರಾಗಿ ಖರೀದಿಗೆ ಅವಕಾಶ ಇದೆ. ಆದರೆ ಕೊನೆಯವರೆಗೂ ಎಷ್ಟು ರೈತರು ಬಂದು ಮಾರಾಟ ಮಾಡುತ್ತಾರೋ? ಎಷ್ಟು ಕ್ವಿಂಟಲ್‌ ರಾಗಿ ಖರೀದಿ ಆಗುತ್ತದೆ ಎಂಬುದನ್ನು ಈಗಲೇ ಹೇಳಕ್ಕೆ ಆಗುವುದಿಲ್ಲ. ಕೊನೆಯಲ್ಲಿ ಗೊತ್ತಾಗುತ್ತದೆ. ಫೆ.29ರ ತನಕ ಒಟ್ಟು 1,966 ಮಂದಿ ರೈತರು ರಾಗಿ ಮಾರಾಟಕ್ಕೆ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈಗಾಗಲೇ 106 ಮಂದಿ ರೈತರು 1,604 ಕ್ವಿಂಟಲ್‌ನಷ್ಟು ರಾಗಿ ಮಾರಾಟ ಮಾಡಿದ್ದಾರೆ.
-ಸೋಮಶಂಕರಪ್ಪ, ಪ್ರಭಾರಿ ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

ರೈತರ ನೋಂದಣಿ (ಫೆ.29ಕ್ಕೆ)
ಬಾಗೇಪಲ್ಲಿ 241
ಚಿಕ್ಕಬಳ್ಳಾಪುರ 698
ಚಿಂತಾಮಣಿ 345
ಗೌರಬಿದನೂರು 106
ಶಿಡ್ಲಘಟ್ಟ 576
ಗುಡಿಬಂಡೆ 00

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.