ರಾಜ್ಯದಲ್ಲಿ ಸಮಾಜವಾದಿಗಳು ಮಜಾವಾದಿಗಳಾಗಿದ್ದಾರೆ: ಸಚಿವ ಸಿ.ಟಿ.ರವಿ
ಮಟ್ಕಾ, ಜೂಜು ರೇಸ್ ಆಡುತ್ತಿದ್ದವರನ್ನ ಕಾಂಗ್ರೆಸ್ ಅಭ್ಯರ್ಥಿ ಮಾಡಿದ್ದಾರೆ
Team Udayavani, Nov 15, 2019, 3:00 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಂತವೇರಿ ಗೋಪಾಲಗೌಡ ಹೊರತುಪಡಿಸಿ ಉಳಿದೆಲ್ಲಾ ಸಮಾಜವಾದಿಗಳು ಮಜಾವಾದಿಗಳಾಗಿದ್ದಾರೆಂದು ಸಚಿವ ಸಿ.ಟಿ.ರವಿ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕಿದ್ದ ಗ್ರಹಣ ಬಿಟ್ಟಿದೆ. 14 ತಿಂಗಳ ರಾಹು ಕೇತು ತೊಲಗಿದೆ. ಉಪ ಚುನಾವಣೆ ಮೂಲಕ ರಾಜ್ಯದಲ್ಲಿ ಶುಕ್ರದೆಸೆ ಜೊತೆಗೆ ಗುರುಬಲ ಕೂಡಿಬಂದಿದೆ ಎಂದರು.
ಚುನಾವಣೆ ಯುದ್ಧವಿದ್ಧಂತೆ. ಕಾಂಗ್ರೆಸ್ ನಿಂದ ನೈತಿಕ ಪಾಠ ಕಲಿಯಬೇಕಿಲ್ಲ, ಕೃಷ್ಣಭೈರೇಗೌಡ, ಜಮೀರ್ ಅಹಮದ್, ಚೆಲುವರಾಯಸ್ವಾಮಿ ಎಲ್ಲಿದ್ದರು, ಕಾಂಗ್ರೆಸ್ ಮಾಡೋದು ನೈತಿಕತೆನಾ. ಮಟ್ಕಾ, ಜೂಜು ರೇಸ್ ಆಡುತ್ತಿದ್ದವರನ್ನ ಕಾಂಗ್ರೆಸ್ ಅಭ್ಯರ್ಥಿ ಮಾಡಿದ್ದಾರೆ ಎಂದು ಕುಟುಕಿದರು.
ಇದು ಯಾವ ನೈತಿಕತೆ. ಚಿಕ್ಕಬಳ್ಳಾಪುರ ಜನರಿಗೆ ಅಭಿವೃದ್ಧಿ ಬೇಕಾ? ಇಲ್ಲವೇ ಗೂಂಡಾಗಿರಿ ಬೇಕಾ ಜನರಿಗೆ ಸಿಟಿ ರವಿ ಪ್ರಶ್ನಿಸಿದರು.
ಸಮಾಜವಾದಿಗಳಿಗೆಲ್ಲ ಬ್ರಾಂಡೆಡ್ ಬೇಕು. ಅವರು ಕುಡಿಯೋದಕ್ಕೆ ಸ್ಕಾಚ್ ಬೇಕು. ಅವರು ಹಾಕುವ ಸೆಂಟ್ ಸಹ ವಿದೇಶಗಳಿಂದ ತರಿಸುತ್ತಾರೆ. ಅವರಿಗೆ ಹಸು ಸಗಣಿ ವಾಸನೆ ಅಂದರೆ ಅಗಲ್ಲ ಎಂದು ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಗೆಲ್ಲುವ ರಾಜಕಾರಣ ಮಾಡಲಿ:
ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಲಾಗುವುದೆಂದು ಹೇಳಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ ಅವರು, ಕುಮಾರಸ್ಚಾಮಿ ಗೆಲ್ಲುವ ರಾಜಕಾರಣ ಮಾಡಲಿ. ಸೋಲಿನ ರಾಜಕಾರಣ ಬೇಡ ಎಂದರು. ದೇವೇಗೌಡರು ತಮ್ಮ ಮಗನಿಗೆ ಸರಿಯಾಗಿ ರಾಜಕಾರಣ ಮಾಡುವುದನ್ನು ಕಲಿಸಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ