Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ


Team Udayavani, May 27, 2024, 11:57 AM IST

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

ಚಿಕ್ಕಬಳ್ಳಾಪುರ: ಜಿಲ್ಲೆಯ ಉಸ್ತುವಾರಿ ಸಚಿವರಾದ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಸಚಿವರಾದ ಬಳಿಕ ಆರಂಭಿಸಿರುವ ವಾರಾಂತ್ಯದ ಜನತಾ ದರ್ಶನಕ್ಕೆ ಬರೋಬ್ಬರಿ ಒಂದು ವರ್ಷ ಸಂದಿದೆ.

ಹೌದು, ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡ ಬಳಿಕ ಡಾ.ಎಂ.ಸಿ.ಸುಧಾಕರ್‌, ತಮ್ಮ ಸ್ವ ಕ್ಷೇತ್ರದಲ್ಲಿ ನಡೆಸಿರುವ ಜನತಾ ದರ್ಶನ ಬಗ್ಗೆ ಸ್ವತಃ ಸಚಿವರೇ ಮೆಲುಕು ಹಾಕಿಕೊಂಡು ವರುಷ 1 ಸಮಸ್ಯೆಗಳ ಪರಿಹಾರ ಸಾವಿರಾರು ಎಂದು ತಮ್ಮ ಫೇಸ್‌ಬುಕ್‌ ನಲ್ಲಿ ಬರೆದುಕೊಂಡು ಗಮನ ಸೆಳೆದಿದ್ದಾರೆ.

43 ಬಾರಿ ಜನತಾ ದರ್ಶನ: ಇನ್ನೂ ಸಚಿವ ಡಾ. ಎಂ.ಸಿ.ಸುಧಾಕರ್‌, ತಮ್ಮ ಸ್ವ ಕ್ಷೇತ್ರ ಚಿಂತಾಮಣಿ ತಾಲೂಕು ಒಂದರಲ್ಲಿಯೆ ಬರೋಬ್ಬರಿ 43 ಜನತಾ ದರ್ಶನಗಳನ್ನು ಹಮ್ಮಿಕೊಂಡಿರುವುದಾಗಿ ಅವರೇ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. ವಾರಾಂತ್ಯದಲ್ಲಿ ಶನಿವಾರ ಅಥವಾ ಭಾನುವಾರ ಕ್ಷೇತ್ರದ ಜನರ ಸಮಸ್ಯೆಗಳ ಆಹವಾಲು ಆಲಿಸಲು ಮೀಸಲಿಟ್ಟಿರುವ ಡಾ.ಎಂ.ಸಿ.ಸುಧಾಕರ್‌, ಸಚಿವರಾಗಿ ಎಷ್ಟೇ ಕಾರ್ಯದೊತ್ತಡ ಇದ್ದರೂ ಪ್ರತಿ ಶನಿವಾರ, ಭಾನುವಾರ ಚಿಂತಾಮಣಿಗೆ ಆಗಮಿಸಿ ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುವ 43 ಜನತಾ ದರ್ಶನ ನಡೆಸಿ ಹೊಸ ದಾಖಲೆ ಬರೆದಿದ್ದಾರೆ.

ಆದರೆ ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಸ್ವ ಕ್ಷೇತ್ರದಲ್ಲಿ ಜನತಾ ದರ್ಶನಕ್ಕೆ ಕೊಟ್ಟಿರುವ ಆದ್ಯತೆ ಬೇರೆ ಕ್ಷೇತ್ರಗಳಲ್ಲಿ ಕೊಟ್ಟಿಲ್ಲ. ಜಿಲ್ಲಾ ಮಟ್ಟದ ಜನತಾ ದರ್ಶನ ಕೂಡ ಸಮರ್ಪಕವಾಗಿ ತಿಂಗಳಗೊಮ್ಮೆ ನಡೆಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಜಿಲ್ಲೆಯಲ್ಲಿ ಸಮಸ್ಯೆಗಳ ಆಗರ ಇದೆ. ಕಂದಾಯ ಇಲಾಖೆ ಸೇರಿದಂತೆ ಹಲವು ಮಹತ್ವದ ಇಲಾಖೆಗಳು ಇನ್ನಷ್ಟು ಚುರುಕುಗೊಳ್ಳಬೇಕಿದೆ. ಸಾರ್ವಜನಿಕರ ಸಮಸ್ಯೆಗಳು ಸಾಕಷ್ಟು ಇವೆ. ಆದರೆ ಸಚಿವರು ಜಿಲ್ಲಾ ಕೇಂದ್ರದಲ್ಲೂ ಕನಿಷ್ಠ ತಿಂಗಳಗೊಮ್ಮೆ ಜನತಾ ದರ್ಶನ ನಡೆಸಿದರೆ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳು ಆನಾವರಣಗೊಳ್ಳುತ್ತೆ ಎಂಬುದು ಜಿಲ್ಲೆಯ ನಾಗರಿಕರ ಒತ್ತಾಸೆ.

ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೆ ನಿರಾಸಕ್ತಿ!: ಇನ್ನೂ ಜಿಲ್ಲಾ ಮಟ್ಟದಲ್ಲಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಪ್ರತಿ ತಿಂಗಳು ನಡೆಯಬೇಕಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನ ಆರಂಭದಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿ ಬಳಿಕ ಎರಡು ತಿಂಗಳ ನಂತರ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದ್ದು ಬಿಟ್ಟರೆ ಬೇರೆ ಎಲ್ಲೂ ನಡೆದಿಲ್ಲ. ತಮ್ಮ ಸ್ವ ಕ್ಷೇತ್ರ ಚಿಂತಾಮಣಿ ನಗರದಲ್ಲಿ ವಾರಾಂತ್ಯದಲ್ಲಿ ಜನತಾ ದರ್ಶನ ನಡೆಸುವ ಸಚಿವರಾದ ಡಾ.ಎಂ.ಸಿ.ಸುಧಾಕರ್‌, ಜಿಲ್ಲೆಯ ಗೌರಿಬಿದನೂರು, ಗುಡಿಬಂಡೆ, ಶಿಡ್ಲಘಟ್ಟದಲ್ಲಿ ಕೂಡ ಜಿಲ್ಲಾ ಮಟ್ಟದ ಜನತಾ ದರ್ಶನಕ್ಕೂ ಇನ್ನೂ ಕಾಲ ಕೂಡಿ ಬಂದಿಲ್ಲ. ಚೇಳೂರು, ಮಂಚೇನಹಳ್ಳಿ ತಾಲೂಕುಗಳಲ್ಲಿ ಕೂಡ ಸಚಿವರ ಅಧ್ಯಕ್ಷತೆಯಲ್ಲಿ ಒಂದೇ ಒಂದು ಜನತಾ ದರ್ಶನವೂ ಇಲ್ಲಿವರೆಗೂ ಏರ್ಪಡು ಆಗಿಲ್ಲ.

ಜನರ ಸಮಸ್ಯೆಗಳ ಪರಿಹಾರಕ್ಕೆ  ಪ್ರಾಮಾಣಿಕ ಪ್ರಯತ್ನ: ಚಿಂತಾಮಣಿ ನಗರದ ಮಾಳಪಲ್ಲಿಯ ಅಂಜನಿ ನಿವಾಸದಲ್ಲಿ ಪ್ರತೀ ವಾರಾಂತ್ಯ ಸರಿ ಸುಮಾರು 43 ಜನತಾ ದರ್ಶನ ಕಾರ್ಯಕ್ರಮ ನಡೆಸಿ, ಜನಸಾಮಾನ್ಯರ ಸಮಸ್ಯೆಗಳ ಆಲಿಸಿ ಸಮಸ್ಯೆಗಳ ಪರಿಹಾರ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್‌ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-asdsdsad

Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ

Bantwal ಹಳೆಯ ದ್ವೇಷಕ್ಕೆ ಬೆಂಕಿಗಾಹುತಿಯಾಯಿತು ಸ್ನೇಹಿತನ ಬೈಕ್ ….

Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್‌ ಭಸ್ಮ

1-dharwad

Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Monsoon: ಕುರಿ, ಕೋಳಿ ಸಾಕಾಣಿಕೆ ಜೋರು!

chiಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

ಅಖಾಡದಲ್ಲಿ ನಾನೇ ಇದ್ದಿದ್ದರೆ ಫ‌ಲಿತಾಂಶ ಬೇರೆಯೇ ರೀತಿಯಲ್ಲಿ ಇರುತ್ತಿತ್ತು: ಪ್ರದೀಪ್‌

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

Chikkaballapura; ಸುಧಾಕರ್ ಗೆ ಜನಾಭಿಪ್ರಾಯ ಸಿಕ್ಕಿದೆ, ಆದರೆ ರಾಜೀನಾಮೆ….:ಪ್ರದೀಪ್ ಈಶ್ವರ್

manchenahalli

Manchenahalli; ವಿದ್ಯುತ್ ಸ್ಪರ್ಶವಾಗಿ ಕಂಬದಲ್ಲಿಯೇ ಮೃತಪಟ್ಟ ಬೆಸ್ಕಾಂ ಸಿಬ್ಬಂದಿ

3-gudibande

Gudibanda: ಕಾರು ಅಪಘಾತ: ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Temples:ಕರಾವಳಿಯ ದೇಗುಲಗಳಲ್ಲಿ ಭಾರೀ ಭಕ್ತ ಸಂದಣಿ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

1-sl

T20 World Cup; ಲಂಕೆಗೆ ಕೊನೆಯಲ್ಲೊಂದು ಸಮಾಧಾನ

1-sdsddsa

Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ

1-aasdsadsa-dad

Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.