ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ನಂದಿಗಿರಿಧಾಮ

ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ! ಸಿಎಂ ಬಿಎಸ್‌ವೈರಿಂದ ಅಗತ್ಯ ಸಹಕಾರ: ಸಚಿವ ಡಾ.ಕೆ.ಸುಧಾಕರ್‌

Team Udayavani, Feb 26, 2021, 8:04 PM IST

Minister K Sudhakar

ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವ ವಿಖ್ಯಾತ ನಂದಿಗಿರಿಧಾಮವನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿಸಿ ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ನಂದಿಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಂದಿಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಆಕರ್ಷಕವಾಗಿದೆ. ಇದಕ್ಕೆ ಐತಿಹಾಸಿಕ, ಧಾರ್ಮಿಕ  ಪ್ರಾಮುಖ್ಯವಿದ್ದು, ವಿಶೇಷವಾದ ಸಸ್ಯ ಸಂಪತ್ತುಯಿದೆ. ಇವೆಲ್ಲವನ್ನೂ ಗಮನಿಸಿ ಪ್ರವಾಸೋದ್ಯಮ ಕ್ಷೇತ್ರ ವಾಗಿಸ ಬಹುದು. ಇದಕ್ಕಾಗಿ ಸರ್ಕಾರ ಈಗಾಗಲೇ 10 ಕೋಟಿ ರೂ.ಅನುದಾನ ನೀಡಿದೆ ಎಂದರು.

ರೋಪ್‌ ವೇ: ಕಳೆದ 15 ವರ್ಷಗಳಿಂದ ರೋಪ್‌ ವೇ ಬೇಕು ಎಂದು ಜನರು ಬೇಡಿಕೆ ಇಡುತ್ತಿದ್ದಾರೆ. ಅಂತಾ ರಾಷ್ಟ್ರೀಯ ಕಂಪನಿಯೊಂದು ಇದನ್ನು ಮಾಡಲು ಮುಂದಾಗಿ ನಂತರ ಕಾರಣಾಂತರದಿಂದ ಯೋಜನೆ ಕೈ ಬಿಟ್ಟಿತ್ತು. ಈಗ ಆ ಕನಸು ನನಸಾಗಲಿದೆ. ಇಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಮಾಡಲು 10 ಎಕರೆಗೂ ಹೆಚ್ಚು ಜಾಗ ಪಡೆಯಲು ಪ್ರಯತ್ನಿಸಲಾಗಿದೆ. ಈ ರೀತಿ ಮಾಸ್ಟರ್‌ ಪ್ಲಾನ್‌ ಮಾಡಿ ಅನುಷ್ಠಾನಗೊಳಿಸಲಾಗುವುದು.

ಸಿಎಂ ಸಹಕಾರ: ತಕ್ಷಣದಲ್ಲಿ ಟೆಂಡರ್‌ ಆಗಿ ಎಲ್ಲ ಬಗೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಈ ತಾಣವು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸುಮಾರು 30 ಕಿ.ಮೀ. ದೂರದಲ್ಲಿದ್ದು, ಒಂದು ಗಂಟೆಯಲ್ಲಿ ಬರಬಹುದು. ಈ ಪ್ರದೇಶ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಉತ್ತೇಜಿಸಿದ್ದಾರೆ ಎಂದರು.

ವಿಶ್ವದರ್ಜೆಯ ಪ್ರವಾಸಿ ಸೌಲಭ್ಯ: ಇದರ ಜೊತೆಗೆ ಎಕೋ-ಟೂರಿಸಂ, ಸುತ್ತಮುತ್ತಲಿನ ಬೆಟ್ಟಗಳಿಗೆ ಚಾರಣಧಾರಿಗಳು, ಪುರಾತತ್ವ ಸ್ಮಾರಕಗಳು, ನೆಲ್ಲಿಕಾಯಿ ಬಸವಣ್ಣ ಮತ್ತು ಮಂಟಪಗಳು ಸಂರಕ್ಷಣೆ, ಸುಂದರೀಕರಣ ಸೇರಿದಂತೆ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯ ಕಲ್ಪಿಸಲಾಗುವುದು. ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್‌ ಕುಮಾರ್‌, ನಿರ್ದೇಶಕ ರಾಕೇಶ್‌, ಕೆಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ವಿಜಯ್‌ ಶರ್ಮಾ, ಜಿಲ್ಲಾ ಪಂಚಾಯತ್‌ ಸಿಇಒ  .ಶಿವಶಂಕರ್‌, ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಅಧಿಕಾರಿ ಜಿತೇಂದ್ರನಾಥ್‌, ಜಿಲ್ಲಾಧಿಕಾರಿ ಆರ್‌.ಲತಾ, ಎಸ್ಪಿ ಮಿಥುನ್‌ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.