ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಕಾಂಗ್ರೆಸ್ ಬಿಡಲಿ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್
Team Udayavani, Jul 11, 2020, 12:57 PM IST
ಚಿಕ್ಕಬಳ್ಳಾಪುರ: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ವೈದ್ಯಕೀಯ ಪರಿಕರಗಳ ಖರೀದಿ ಪಾರದರ್ಶಕತೆಯಿಂದ ನಡೆದಿದೆ. ಆದರೆ ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆಯೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು
ಕಾಂಗ್ರೆಸ್ ನಾಯಕರುಗಳಿಗೆ ತಮ್ಮ ಆಡಳಿತದಲ್ಲಿ ಹಗರಣಗಳನ್ನು ಮಾಡಿ ಮಾಡಿ ತುಂಬ ಅಭ್ಯಾಸವಾಗಿದೆ. ಹಾಗಾಗಿ ಕಾಮಾಲೆ ಕಣ್ಣು ಇರುವರಿಗೆ ಕಾಣುವುದು ಎಲ್ಲಾ ನೀಲಿ ಆಗಿರುತ್ತದೆ. ಆದ್ದರಿಂದ ಮೊದಲು ಕಾಂಗ್ರೆಸ್ ಆ ರೋಗದಿಂದ ಹೊರ ಬರಲಿ ಎಂದು ಸುಧಾಕರ್ ವ್ಯಂಗ್ಯವಾಡಿದರು.
ಈ ಹಿಂದೆ ಒಬ್ಬೊಬ್ಬರು ಯಾರು ಯಾರು ಎಲ್ಲಿ ಹೋಗಿ ಬಂದಿದ್ದಾರೆ. ಏನೆಲ್ಲಾ ಹಗರಣಗಳುನ್ನು ಮಾಡಿದ್ದಾರೆ ಎಂಬುದನ್ನು ನಾವು ಹೇಳಬೇಕಾಗುತ್ತದೆಂದು ಸಚಿವ ಡಾ. ಕೆ.ಸುಧಾಕರ್ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.
ಪಿಪಿಇ ಕಿಟ್ ಹಾಗೂ ಸ್ಯಾನಿಟೈಸರ್ ನ್ನು ಮಾರುಕಟ್ಟೆ ದರಕ್ಕಿಂತ ಹೆಚ್ವಿನ ಬೆಲೆಗೆ ಖರೀದಿ ಮಾಡಲಾಗಿದೆಯೆಂದು ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಖರೀದಿ ಯಾವ ಸಂದರ್ಭದಲ್ಲಿ ನಡೆದಿದೆ. ಕೋವಿಡ್ ಆರಂಭದ ವೇಳೆ ಜಾಗತಿಕವಾಗಿ ತುಂಬ ಬೇಡಿಕೆ ಇತ್ತು, ಟೆಂಡರ್ ಕರೆದರೆ ಪಕ್ರಿಯೆ ವಿಳಂಬ ಆಗುತ್ತದೆ ಎಂಬ ಕಾರಣಕ್ಕೆ ಹೆಚ್ವಿನ ಬೆಲೆಗೆ ಖರೀದಿ ಮಾಡಿರಬಹುದು. ಆದರೆ ಯಾವುದೇ ಅಕ್ರಮ ಅಗಿಲ್ಲ. ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ನಾನೊಬ್ಬನೇ ಇಲ್ಲ. ಡಿಸಿಎಂ ಇದ್ದಾರೆ, ಗೃಹ ಸಚಿವರು, ಆರೋಗ್ಯ ಸಚಿವರು ಸೇರಿ ಐದು ಜನ ಮಂತ್ರಿಗಳು ಇದ್ದಾರೆ. ಡಾ.ಮಂಜುನಾಥ ಸೇರಿದಂತೆ ಅನೇಕ ತಜ್ಣರು ಸಹ ಇದ್ದಾರೆ. ತಜ್ಞರ ಸಮಿತಿ ಶಿಪಾರಸ್ಸಿನಂತೆ ಎಲ್ಲವೂ ನಡೆದಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ