ಪ್ರಸಕ್ತ ವರ್ಷ ಶೇ.30ರಷ್ಟು ಪಠ್ಯ ಕಡಿಮೆ

ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ: ಸಚಿವ ಸುರೇಶ್‌ ಕುಮಾರ್‌

Team Udayavani, Feb 6, 2021, 3:40 PM IST

Minister sureshkumar

ಚಿಕ್ಕಬಳ್ಳಾಪುರ: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಶುಕ್ರವಾರ ಜಿಲ್ಲೆಯ ಗಡಿ ತಾಲೂಕು ಗೌರಿಬಿದನೂರಿನ ವಿವಿಧ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾಗಮ ವ್ಯವಸ್ಥೆಯನ್ನು ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ತಾಲೂಕಿನ ಕಲ್ಲಿನಾಯಕನಹಳ್ಳಿ ಗ್ರಾಪಂನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೊದಲು ಭೇಟಿ ನೀಡಿದ ಸಚಿವರು,  ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೊಂದಿಗೆ ವಿದ್ಯಾಗಮ ಕಾರ್ಯಕ್ರಮದ ಬಗ್ಗೆ ಸಮಾಲೋಚನೆ ನಡೆಸಿದರು. ನಂತರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಈ ವರ್ಷದ ಪಠ್ಯಕಡಿತ, ತರಗತಿಗಳು ಹಾಗೂ ಜೂನ್‌ನಲ್ಲಿ ನಡೆಯಲಿರುವ ವಾರ್ಷಿಕ ಪರೀಕ್ಷೆ ಬಗ್ಗೆ  ಸಂವಾದ ನಡೆಸಿದರು.

ಶೇ.30 ರಷ್ಟು ಪಠ್ಯ: ಬಳಿಕ ಮಾತನಾಡಿದ ಸಚಿವರು, ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಪರೀಕ್ಷಾ ದೃಷ್ಟಿಯಿಂದ ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆ ಆಗಬಾರದು ಎಂಬ ಉದ್ದೇಶದಿಂದ ಈ ವರ್ಷ ಶೇ.30 ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಶಿಕ್ಷಕರೂ ಕೂಡ ಇದನ್ನು ಸವಾಲಾಗಿ ಸ್ವೀಕರಿಸಿದ್ದಾರೆ ಎಂದು ತಿಳಿಸಿದರು.

ಪೂರ್ಣ ಪ್ರಮಾಣದಲ್ಲಿ ಪ್ರಾರಂಭ: ಕೋವಿಡ್‌ನಿಂದ ದೂರಗಾಮಿ ಪರಿಣಾಮ ಬೀರುವ ಕ್ಷೇತ್ರ ಯಾವುದಾದರೂ ಇದ್ದರೆ ಅದು ಶಿಕ್ಷಣ  ಕ್ಷೇತ್ರವೇ  ಆಗಿದೆ. ಕೋವಿಡ್‌ನಿಂದ ಕಳೆದ ವರ್ಷಪೂರ್ತಿ ತರಗತಿಗಳು ಇರಲಿಲ್ಲ. ಪ್ರಸ್ತುತ ವರ್ಷ ಆರೋಗ್ಯ  ಇಲಾಖೆ ಜೊತೆ ಚರ್ಚಿಸಿ ಇದೀಗ 9, 10, 11 ಮತ್ತು 12 ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಿದ್ದೇವೆ. 6 ರಿಂದ 8 ನೇ ತರಗತಿ ವರೆಗೆ ವಿದ್ಯಾಗಮ ಕಾರ್ಯಕ್ರಮದ ಮೂಲಕ ತರಗತಿ ನಡೆಸಲಾಗುತ್ತಿದೆ ಎಂದರು.

ಇದೇ ವೇಳೆ ಗೌರಿಬಿದನೂರು ಪಟ್ಟಣದ ಗ್ರಂಥಾಲಯ ಮತ್ತು ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ನರೇಗಾ  ಯೋಜನೆಯಡಿ ನಿರ್ಮಿಸುತ್ತಿರುವ ಆಟದ ಮೈದಾನ ಹಾಗೂ ಇತರೆ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು. ರಾಷ್ಟೀಯ ಮಟ್ಟದಲ್ಲಿ ನಡೆದ ಇನ್ಸ್‌ಫೈರ್‌ ಪದಕ ಪಡೆದ ಮುತ್ತಕ್ಕ ಹಾಗೂ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ   ಅಧಿಕ ಅಂಕಗಳಿಸಿದ ವಿದ್ಯಾರ್ಥಿನಿ ಸುಚಿತ್ರಾ ಅವರನ್ನು ಸಚಿವರು ಸನ್ಮಾನಿಸಿದರು.

ಇದನ್ನೂ ಓದಿ :ಅನುದಾನಕ್ಕಾಗಿ ಭಿಕ್ಷಾಟನೆ; ಶಾಲೆಗಳ ಪ್ರತಿಭಟನೆ

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌ ಜಿ.ನಾಗೇಶ್‌,  ತಹಶೀಲ್ದಾರ್‌ ಶ್ರೀನಿವಾಸ್‌, ಗೌರಿಬಿದನೂರು ತಾಪಂ ಇಒ ಮುನಿರಾಜು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.