Mla Pradeep Eshwar: ಮೊನ್ನೆ ಬಿಗ್ಬಾಸ್, ಈಗ ತೆಲಂಗಾಣದಲ್ಲಿ ಪ್ರಚಾರ!
Team Udayavani, Nov 14, 2023, 2:34 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ನೆರೆಯ ತೆಲಂಗಾಣ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವುದಕ್ಕೆ ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜೆಡಿಎಸ್ ಎಂಬ ಮುಖಪುಟದಲ್ಲಿ ತನ್ನ ಕ್ಷೇತ್ರದ ಹೂ ಬೆಳೆಗಾರರ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಪಕ್ಕದ ರಾಜ್ಯದ ಜನರ ಕಿವಿಗೆ ಹೂ ಇಡುತ್ತಿರುವ ಬಿಲ್ಡಪ್ ಈಶ್ವರ್ ಎಂದು ಬರೆದು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯ ಅವ್ಯವಸ್ಥೆಯ ದೃಶ್ಯಗಳನ್ನು ಟ್ಯಾಗ್ ಮಾಡಿದ್ದಾರೆ.
ಜೆಡಿಎಸ್ ಮುಖಂಡರ ಆಕ್ರೋಶ: ಇನ್ನೂ ಚಿಕ್ಕಬಳ್ಳಾಪುರದ ಜೆಡಿಎಸ್ ಯುವ ಮುಖಂಡ ಅಖೀಲ್ರೆಡ್ಡಿ ಎಂಬುವರು ತಮ್ಮ ಫೇಸ್ಬುಕ್ನಲ್ಲಿ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಹಾಗೂ ಹೂ ಮಾರುಕಟ್ಟೆ ವ್ಯವಸ್ಥೆಯ ದೃಶ್ಯವನ್ನು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಸುಮಾರು 31 ಸಾವಿರ ಮಂದಿ ಲೈಕ್ ಒತ್ತಿದ್ದು 1,700 ಮಂದಿ ಕಾಮೆಂಟ್ ಮಾಡಿದ್ದಾರೆ.
ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ತಾತ್ಕಾಲಿಕ ಜಾಗದಲ್ಲಿ ನಡೆಯುತ್ತಿರುವ ಹೂ ಮಾರುಕಟ್ಟೆಯ ದುಸ್ಥಿತಿ ಬಗ್ಗೆ ಜೆಡಿಎಸ್ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದೇ, ಪಕ್ಕದ ರಾಜ್ಯದ ಚುನಾವಣೆಯಲ್ಲಿ ಪ್ರಚಾರಕ್ಕೆ ತೆರಳಿರುವ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಕಿಡಿಕಾರಿದ್ದಾರೆ. ತಾನು ರೈತ ಮಗ ಎಂದು ಹೇಳಿಕೊಂಡು ಓಟ್ ಹಾಕಿಕೊಂಡು ಗೆದ್ದು ಬಿಟ್ಟಿದೀರಿ, ಚಿಕ್ಕಬಳ್ಳಾಪುರದಲ್ಲಿ ಸರಿಯಾದ ರಸ್ತೆ ಇಲ್ಲ. ಚರಂಡಿ ಇಲ್ಲ. ಮಳೆ ಬಂದರೆ ಓಡಾಟಕ್ಕೆ ಆಗಲ್ಲ. ಇದಕ್ಕೆ ಪರಿಹಾರ ಕಲ್ಪಿಸಿ, ನೀವು ನೋಡಿದರೆ ಚಿಕ್ಕಬಳ್ಳಾಪುರದಲ್ಲಿ ಏನು ಸಮಸ್ಯೆ ಇಲ್ಲ ಅಂತ ಎಲ್ಲೋ ಹೋಗಿ ಚುನಾವಣೆ ಪ್ರಚಾರದಲ್ಲಿ ಇದ್ದೀರಿ. ಇಲ್ಲಿಗೆ ಬಾರಣ್ಣ, ನೀವು ಇಲ್ಲಿ ಬರಲೇಬೇಕಣ್ಣ ಅಂತ ಯುವ ರೈತರಾಗಿರುವ ಅಖೀಲ್ರೆಡ್ಡಿ ಶಾಸಕ ಪ್ರದೀಪ್ ಈಶ್ವರ್ಗೆ ಕೋರಿದ್ದಾರೆ.
ಕೆಸರು ಗದ್ದೆಯಾದ ಹೂ ಮಾರುಕಟ್ಟೆ!: ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ನಗರದ ಹೊರ ವಲಯದ ಸಿವಿವಿ ಕ್ಯಾಂಪಸ್ ಬಳಿ ಇರುವ ತಾತ್ಕಲಿಕ ಹೂ ಮಾರುಕಟ್ಟೆ ಸಂಪೂರ್ಣ ಕೆಸರು ಗೆದ್ದೆಯಾಗಿದ್ದು, ವಾಹನಗಳ ಹಾಗೂ ರೈತರ ಓಡಾಟಕ್ಕೆ ತೀವ್ರ ಸಮಸ್ಯೆ ಆಗಿದೆ. ಹೂ ಮಾರುಕಟ್ಟೆಯ ಅವ್ಯವಸ್ಥೆಯನ್ನು ವಿಡಿಯೋ ಮಾಡಿ ಶಾಸಕ ಪ್ರದೀಪ್ ಈಶ್ವರ್ಗೆ ಟ್ಯಾಗ್ ಮಾಡಿರುವ ನೆಟ್ಟಿಗರು ಮೊದಲು ಚಿಕ್ಕಬಳ್ಳಾಪುರ ಬಾ ಅಂತ ಕರೆಯುತ್ತಿದ್ದು, ಈ ವಿಡಿಯೋ ತುಣಕುಗಳು ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ