ಶಾಸಕ ವಿ.ಮುನಿಯಪ್ಪ ಅವರ ಆರೋಗ್ಯ ಸ್ಥಿರ, ವದಂತಿಗಳಿಗೆ ಕಿವಿಗೂಡದಿರಲು ಮನವಿ
Team Udayavani, Oct 14, 2020, 9:47 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಕಿಡಿಗೇಡಿಗಳು ಹಬ್ಬಿಸುತ್ತಿರುವ ವದಂತಿಗಳಿಗೆ ಕಿವಿಗೂಡಬಾರದೆಂದು ಶಾಸಕರ ಆಪ್ತ ಕಾರ್ಯದರ್ಶಿ ನಾರಾಯಣಗೌಡ ಮನವಿ ಮಾಡಿದ್ದಾರೆ.
ಉದಯವಾಣಿಯೊಂದಿಗೆ ಮಾತನಾಡಿದ ಅವರು ಶಾಸಕರು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಪರಿಪೂರ್ಣವಾಗಿ ಆರೋಗ್ಯವಾಗಿರಲು ಕಾಂಗ್ರೆಸ್ ಕಾರ್ಯಕರ್ತರು-ಮುಖಂಡರು ಹಾಗೂ ಕ್ಷೇತ್ರದ ಜನರು ವಿವಿಧ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಕೆಲ ಕಿಡಿಗೇಡಿಗಳು ಶಾಸಕರ ಆರೋಗ್ಯಕ್ಕೆ ಸಂಬಂಧಿಸಿದಂತೆ ಇಲ್ಲಸಲ್ಲದ ವದಂತಿಗಳನ್ನು ಹರಡಿಸುವ ಮೂಲಕ ಅನಗತ್ಯವಾಗಿ ಗೊಂದಲವನ್ನು ಸೃಷ್ಠಿಸುವಂತಹ ಕೆಲಸವನ್ನು ಮಾಡುತ್ತಿದ್ದಾರೆ ಇದಕ್ಕೆ ಯಾರು ಸಹ ಕಿವಿಗೂಡಬಾರದೆಂದು ಮನವಿ ಮಾಡಿ ಶಾಸಕರು ಆರೋಗ್ಯವಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಶಾಸಕರ ಅನುಪಸ್ಥಿತಿಯಲ್ಲಿ ಕ್ಷೇತ್ರದ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದೆಂದು ಶಿಡ್ಲಘಟ್ಟ ತಾಲೂಕು ಪಂಚಾಯಿತಿ ಬಳಿ ಇರುವ ಶಾಸಕರ ಕಾರ್ಯಾಲಯದಲ್ಲಿ ಪ್ರತಿನಿತ್ಯ ನಾಗರಿಕರ ಸಮಸ್ಯೆಗಳಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಹಕಾರ ನೀಡುತ್ತಿರುವುದಾಗಿ ಶಾಸಕರ ಆಪ್ತ ಕಾರ್ಯದರ್ಶಿ ನಾರಾಯಣಗೌಡ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ