ಕ್ಷೇತ್ರಕ್ಕೆ ಬಿಜೆಪಿ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡುತ್ತಿಲ್ಲ
Team Udayavani, Dec 6, 2021, 1:30 PM IST
ಚೇಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂಜೂರು ಆಗಿದ್ದ ಕಾಮಗಾರಿಗಳೇ, ಕ್ಷೇತ್ರದಲ್ಲಿ ನನ್ನ ಮರ್ಯಾದೆ ಉಳಿಸಿವೆ. ಇದೀಗಬಿಜೆಪಿ ಸರ್ಕಾರ ಬಾಗೇಪಲ್ಲಿ ಕ್ಷೇತ್ರಕ್ಕೆ ಒಂದು ಪೈಸೆಹಣ ಬಿಡುಗಡೆ ಮಾಡುತ್ತಿಲ್ಲ, ನಾವು ಪ್ರತಿದಿನಸಚಿವರ ಕಚೇರಿಗಳಿಗೆ ಅಲೆದಾಡುತ್ತಿದ್ದರೂ ಹಣನೀಡುತ್ತಿಲ್ಲ ಎಂದು ಶಾಸಕ ಎಸ್.ಎನ್.ಸುಬ್ಟಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿಏರ್ಪಡಿಸಿದ್ದ ಎಂಎಲ್ಸಿ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ಅನಿಲ್ಕುಮಾರ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿ, ಅಭಜಿತ ಜಿಲ್ಲೆಯಲ್ಲಿ ಕಾಂಗ್ರೆಸ್ನಹಾಲಿ, ಮಾಜಿ ಶಾಸಕರು ಪಕ್ಷದ ಅಭ್ಯರ್ಥಿ ಅನಿಲ್ಕುಮಾರ್ ಗೆಲುವಿಗೆ ಶ್ರಮಿಸುತ್ತಿದ್ದು, ಅವರಿಗೆ ನೀವುನಿಮ್ಮ ಮತ ನೀಡಿ ಗೆಲ್ಲಿಸಿಕೊಡಬೇಕಾಗಿದೆ. ಈ ಹಿಂದೆಅನಿಲ್ಕುಮಾರ್ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ. ಭರವಸೆ ಹುಸಿ ಮಾಡದೆ ಮತ ಹಾಕಬೇಕಾಗಿದೆ ಎಂದು ಹೇಳಿದರು.
ನಿರ್ಗತಿಕರಿಗೆ ಮನೆ ಮಂಜೂರಿಲ್ಲ: ಯಾರೋ ಹೇಳುವ ಮಾತುಗಳು ಕಿವಿಗೆ ಹಾಕಿಕೊಳ್ಳಬೇಡಿಎಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಲ್ಲಿ ಮನವಿ ಮಾಡಿದ ಶಾಸಕರು, ಈಗಿನ ಬಿಜೆಪಿ ಸರ್ಕಾ ರಕ್ಕೆ ಮೂಲ ಸೌಲಭ್ಯ ಒದಗಿಸುವ ಮನಸ್ಸಿಲ್ಲ, ಗ್ರಾಮಾಂತರ ಪ್ರದೇಶಗಳಲ್ಲಿ ಈಗಲೂ ಗುಡಿಸಲು ಹಾಕಿ ಕೊಂಡು ಜೀವನ ನಡೆಸುತ್ತಿದ್ದಾರೆ. ಇಂತಹನಿರ್ಗತಿಕರಿಗೆ ಸರ್ಕಾರ ಮನೆ ಮಂಜೂರು ಮಾಡುತ್ತಿಲ್ಲ ಎಂದು ತಿಳಿಸಿದರು.
ಕಾಂಗ್ರೆಸ್ ಬಲಪಡಿಸಿ: ಕೊರೊನಾ ಸೋಂಕು ಅಡ್ಡ ಇಟ್ಟುಕೊಂಡು ಅಭಿವೃದ್ಧಿ ಕೆಲಸಗಳಿಗೆ ಅಡ್ಡಗಾಲುಹಾಕುತ್ತಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಅಭಿವೃದ್ಧಿ ಮಾಡಲು ಸಾಧ್ಯವಾಗುವುದಿಲ್ಲ.ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ: ಬಾಗೇಪಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ನರೇಂದ್ರ ಮಾತನಾಡಿ, ಅವಿಭಜಿತ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನುಮೆಚ್ಚಿ ಮಾಜಿ ಶಾಸಕರು, ಮುಖಂಡರು, ಪಕ್ಷ ಸೇರುತ್ತಿದ್ದಾರೆ. ಬಿಜೆಪಿ ಸರ್ಕಾರದ ದುರಾಡಳಿತದಿಂದಜನತೆ ಬೇಸತ್ತು ಹೋಗಿದ್ದಾರೆ. ಇದನ್ನು ತೊಲಗಿಸಲುನೀವು ಕೈ ಜೋಡಿಸಿ, ಬಿಜೆಪಿಯನ್ನು ಮನೆಗೆ ಕಳುಹಿಸಿ -ಕಾಂಗ್ರೆಸ್ ಅಧಿಕಾರಕ್ಕೆ ತರಬೇಕೆಂದರು.
ಚೇಳೂರು, ನಲ್ಲಗುಟ್ಲಪಲ್ಲಿ, ಪಾಳ್ಯಕೆರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.ಇದಕ್ಕೂ ಮುನ್ನ ಚೇಳೂರು ಹೋಬಳಿಯ ರಾಶ್ಚರವು,ಚಾಕವೇಲು, ಪುಲಗಲ್ಲು ಗ್ರಾಪಂ ಕೇಂದ್ರಗಳಲ್ಲಿಪ್ರಚಾರ ಸಭೆ ನಡೆಸಿ ಅನಿಲ್ಕುಮಾರ್ಗೆ ಮತಗಳು ಹಾಕಿಸಿ ಗೆಲ್ಲಿಸಿ ಕೊಡಲು ಮನವಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ