ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಮೊಯ್ಲಿ ವಿಫ‌ಲ


Team Udayavani, Apr 16, 2019, 3:00 AM IST

shashvata

ಬಾಗೇಪಲ್ಲಿ: ವೀರಪ್ಪ ಮೊಯ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರಲು ಸಂಪೂರ್ಣವಾಗಿ ವಿಫಲರಾದರು ಎಂದು ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯೆ ಬೃಂದಾ ಕಾರಟ್‌ ತಿಳಿಸಿದರು.

ಸೋಮವಾರ ಪಟ್ಟಣದ ಗೂಳೂರು ವೃತ್ತದಲ್ಲಿ ಸಿಪಿಎಂ ಅಭ್ಯರ್ಥಿ ಎಸ್‌.ವರಲಕ್ಷ್ಮಿ ಪರವಾಗಿ ಚುನಾವಣಾ ಪ್ರಚಾರ ಭಾಷಣ ಮಾಡಿ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಳ್ಳುವಾಗ ಮೊಯ್ಲಿ ಎಲ್ಲಿ ಹೋಗಿದ್ದರು ಎಂದು ಪ್ರಶ್ನಿಸಿದರು.

ಶಾಶ್ವತ ನೀರಾವರಿಗೆ ಆಗ್ರಹಿಸಿ ಡಾ.ಪರಮಶಿವಯ್ಯ ವರದಿ ಜಾರಿಗೆ ಆಗ್ರಹಿಸಿ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನೇತೃತ್ವದಲ್ಲಿ ಅನೇಕ ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಈ ಭಾಗದ ಸಂಸದರು ಕಿವಿಗೆ ಹಾಕಿಕೊಳ್ಳಲಿಲ್ಲ.

ಜನ ಸಾಮಾನ್ಯರ ಹೋರಾಟ: 2014ರಲ್ಲಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರದಲ್ಲಿ ನಡೆದ ಚುನಾವಣೆ ಪ್ರಚಾರದಲ್ಲಿ ನಮಗೆ ಓಟು ಕೊಡಿ ಬಯಲುಸೀಮೆ ಜಿಲ್ಲೆಗಳಿಗೆ ದೊಡ್ಡ ಪೈಪುಗಳು ಹಾಕಿ ನೀರು ತರುತ್ತೇವೆ. ಈ ದೊಡ್ಡ ಪೈಪುಗಳ ಹೇಗೆ ಇರುತ್ತವೆ ಎಂದರೆ ಪೈಪ್‌ಗ್ಳಲ್ಲಿ ಮಾರುತಿ ಕಾರು ಚಲಿಸಬಹುದು ಎಂದು ಹೇಳಿದ್ದರು. ಆದರೆ ನೀರು ಬರಲೇ ಇಲ್ಲ ಎಂದು ವ್ಯಂಗವಾಡಿದರು.

ಬೇರೆ ಪಕ್ಷಗಳ ಮತಗಳನ್ನು ಖರೀದಿ ಮಾಡುವುದು ಚನ್ನಾಗಿ ಗೊತ್ತಿದೆ. ಆದರೆ ಸಿಪಿಎಂ ಪಕ್ಷಕ್ಕೆ ಮತಗಳನ್ನು ಖರೀದಿ ಮಾಡುವ ಕಾರ್ಯಕ್ಕೆ ಕೈಹಾಕುವುದಿಲ್ಲ. ನಿರಂತರ ಜನಸಾಮಾನ್ಯರ ಮೂಲಭೂತ ಸೌಲಭ್ಯಗಳ ಬಗ್ಗೆ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಬಂಡವಾಳಶಾಹಿಗಳ ಪರ ಸರ್ಕಾರ: ಬಿಜೆಪಿ, ಆರ್‌ಎಸ್‌ಎಸ್‌ ಒಂದುಗೂಡಿ ಸಂವಿಧಾನವನ್ನು ಹಾಳು ಮಾಡುವ ಪಿತೂರಿ ನಡೆಸಲಾಗುತ್ತಿದೆ. ಜಾತಿ, ಜಾತಿಗಳ ನಡುವೆ ವೀಷ ಬೀಜ ಬಿತ್ತುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ, ಆರ್‌ಎಸ್‌ಎಸ್‌ನ್ನು ಸೋಲಿಸಬೇಕಾಗಿದೆ. ಮೋದಿ ಸರ್ಕಾರದಲ್ಲಿ ಕೇವಲ ಬಂಡವಾಳ ಶಾಹಿಗಳಿಗೆ ಮಾತ್ರ ಅನುಕೂಲವಾಗುತ್ತಿದೆ ಎಂದು ಆರೋಪಿಸಿದರು.

ಲೋಕಸಭೆ ಕ್ಷೇತ್ರದ ಸಿಪಿಎಂ ಅಭ್ಯರ್ಥಿ ಎಸ್‌.ವರಲಕ್ಷ್ಮಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಯೋಚನೆ ಮಾಡಿ ಮತದಾನ ಮತದಾನ ಮಾಡಬೇಕು. ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನದಲ್ಲಿ ದೇಶದ ಪ್ರತಿಯೊಬ್ಬರಿಗೂ ಮತದಾನಕ್ಕೆ ಅವಕಾಶ ಕೊಡಲಾಗಿದೆ. ಮತದಾನದ ಹಕ್ಕನ್ನು ಸದುಪಯೋಗ ಪಡಿಸಿಕೊಂಡು ಯೋಗ್ಯರನ್ನು ಚುನಾಯಿಸಬೇಕಾಗಿದೆ.

ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಜನರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತಿದ್ದಾರೆ. ಸಿಪಿಎಂ ಪಕ್ಷಕ್ಕೆ ಸೋಲು, ಗೆಲುವು ಮುಖ್ಯವಲ್ಲ ಜನರ ಸಮಸ್ಯೆಗಳೇ ಮುಖ್ಯ. ಜನರಿಗೆ ಸುಳ್ಳು ಭರವಸೆ ನೀಡಿ ವಂಚನೆ ಮಾಡುತ್ತಿರುವ ಕಾಂಗ್ರೆಸ್‌,ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಮನೆಗೆ ಕಳುಹಿಸಬೇಕು ಎಂದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಿಪಿಎಂ ಕಾರ್ಯಕರ್ತರು ಬೈಕ್‌ ರ್ಯಾಲಿ ನಡೆಸಿ ಮತಯಾಚಿಸಿದರು.

ರಾಜ್ಯ ಸಿಪಿಎಂ ಕಾರ್ಯದರ್ಶಿ ಬಸವರಾಜ್‌, ಮಾಜಿ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ, ತಾಲೂಕು ಕಾರ್ಯದರ್ಶಿ ಚನ್ನರಾಯಪ್ಪ, ನಗರ ಘಟಕದ ಅಧ್ಯಕ್ಷ ವಾಲ್ಮೀಕಿ ನಗರದ ಅಶ್ವತ್ಥಪ್ಪ, ತಾಪಂ ಸದಸ್ಯ ಶ್ರೀರಾಮನಾಯ್ಕ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಜೆಸಿಬಿ ಪಿ.ಮಂಜುನಾಥರೆಡ್ಡಿ, ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಉಮೇಶ್‌, ಮೀನಾಕ್ಷಿ ಸುಂದರ, ತಾಲೂಕು ಸಿಐಟಿಯು ಅಧ್ಯಕ್ಷ ಬಿ.ಆಂಜನೇಯರೆಡ್ಡಿ, ಜಿಲ್ಲಾ ಡಿವೈಎಫ್‌ಐ ಅಧ್ಯಕ್ಷ ಬಿ.ಎಂ.ಹೇಮಚಂದ್ರ ಇದ್ದರು.

2004ರ ಲೋಕಸಭೆಯಲ್ಲಿ 61 ಸ್ಥಾನಗಳನ್ನು ಹೊಂದಿದ್ದ ಸಿಪಿಎಂ ಪಕ್ಷ ದೇಶದಲ್ಲಿ ನರೇಗಾ ಮತ್ತು ಅನೇಕ ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶ್ರಮಿಸಿದೆ. ಪುನಃ ಮೋದಿ ಸರ್ಕಾರದ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಕೋಮು ಸೌಹಾರ್ದತೆ ನಾಶವಾಗುತ್ತದೆ.
-ಬೃಂದಾ ಕಾರಟ್‌, ಸಿಪಿಎಂ ಪಾಲಿಟ್‌ ಬ್ಯೂರೋ ಸದಸ್ಯೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.