ಕೈವಾರ ಬೆಟ್ಟದಲ್ಲಿ ನೀರು ಆಹಾರಕ್ಕಾಗಿ ಕೋತಿಗಳ ಪರದಾಟ


Team Udayavani, Mar 26, 2019, 1:04 PM IST

kaivara

ಚಿಂತಾಮಣಿ: ಮಾನವನ ಅತಿ ದುರಾಸೆಯಿಂದಾಗಿ ಮರಗಿಡಗಳನ್ನು ನಾಶ ಮಾಡಿದ ಕಾರಣ ಹಲವು ವರ್ಷಗಳಿಂದ ಚಿಂತಾಮಣಿ ತಾಲೂಕಿನಲ್ಲಿ ಉತ್ತಮ ಮಳೆಯಾಗದ ಕಾರಣ ಹಾಗೂ ಬೇಸಿಗೆಗೆ ಮೊದಲೇ ತಾಲೂಕಿನ ಬಿಸಿಲಿನ ಬೇಗೆ ಹೆಚ್ಚಾಗಿ ಜನಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿರುವುದು ಒಂದೆಡೆ, ಮತ್ತೂಂದೆಡೆ ಕಾಡುಗಳಲ್ಲಿ ವಾಸಿಸುವ ಕೋತಿ ಮತ್ತಿತ್ತರ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರು ಆಹಾರ ಸಿಗದೇ ಪರದಾಡುವಂತಾಗಿದೆ.

ಒಣಗಿದ ಮರಗಳಲ್ಲಿ ಆಹಾರ ಹುಡುಕಾಟ: ಹಲವು ವರ್ಷಗಳಿಂದ ಉತ್ತಮ ಮಳೆಯಿಲ್ಲದ ಕಾರಣ ಕೆರೆಕುಂಟೆಗಳು ಬತ್ತಿ ಹೋಗಿದ್ದು, ದಿನೇ ದಿನೆ ಏರುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ಮರಗಿಡಗಳು ಕೂಡ ಒಣಗಿವೆ. ತಾಲೂಕಿನ ಕೈವಾರದ ಗವಿ ನರಸಿಂಹಸ್ವಾಮಿ ದೇವಾಲಯದ ಬಳಿಯ ಬೆಟ್ಟದಲ್ಲಿ ಕೋತಿಗಳು ನೀರು ಆಹಾರಕ್ಕಾಗಿ ಪರಿತಪಿಸುವಂತಾಗಿದ್ದು, ಬೆಟ್ಟದಲ್ಲಿ ಎಲ್ಲಾ ಮರಗಿಡಗಳು ಬಿಸಿಲಿನ ತಾಪಮಾನಕ್ಕೆ ಒಣಗಿರುವ ಕಾರಣ, ಒಣಗಿದ ಮರಗಳಲ್ಲಿ ಆಹಾರಕ್ಕಾಗಿ ಕೋತಿಗಳು ಹುಡುಕಾಟ ನಡೆಸುತ್ತಿದ್ದ ದೃಶ್ಯಗಳು ನೋಡುಗರ ಮನಕುಲಕುವಂತಿದೆ.

ಕುಡಿಯುವ ನೀರಿಗೆ ಪರದಾಟ: ಕೈವಾರದ ಗವಿ ಬಳಿಯ ಬೆಟ್ಟದಲ್ಲಿ ನೂರಾರು ಸಂಖ್ಯೆಯಲ್ಲಿ ಕೋತಿಗಳು ವಾಸವಾಗಿದ್ದು, ಬೆಟ್ಟದಲ್ಲಿ ಎಲ್ಲೂ ಕೂಡ ನೀರಿನ ಸೌಲಭ್ಯವಿಲ್ಲದ ಕಾರಣ ನೀರಿಗಾಗಿ ಕೋತಿಗಳು ಪರದಾಡುವಂತಾಗಿ ಗ್ರಾಮಗಳತ್ತ ನೀರಿಗಾಗಿ ವಲಸೆ ಬರುತ್ತಿವೆ.

ರಸ್ತೆ ಬಳಿ ಆಹಾರಕ್ಕಾಗಿ ಕೋತಿಗಳು: ಬೆಟ್ಟದಲ್ಲಿ ನೀರು ಆಹಾರ ಸಿಗದ ಕಾರಣ ಕೋತಿಗಳು ಪ್ರತಿನಿತ್ಯ ಗವಿಯಿಂದ ಚಿಂತಾಮಣಿ ನಗರಕ್ಕೆ ಹೋಗುವ ರಸ್ತೆಯಲ್ಲಿ ಸಾರ್ವಜನಿಕರು ಏನಾದರೂ ತಿನ್ನಲು ಆಹಾರ ನೀಡುತ್ತಾರೆ ಎಂದು ಗುಂಪು ಗುಂಪಾಗಿ ಕೋತಿಗಳ ಹಿಂಡು ರಸ್ತೆ ಬದಿಯಲ್ಲಿ ಪ್ರತಿನಿತ್ಯ ಕಾಯುವ ದೃಶ್ಯಗಳು ನೋಡಬಹುದು.

ಸಾಯುವ ಸ್ಥಿತಿಯಲ್ಲಿ ಕೆಲ ಕೋತಿಗಳು: ಬೆಟ್ಟದಲ್ಲಿ ಎಲ್ಲಿ ಕೂಡ ಕೋತಿಗಳಿಗೆ ನೀರು ಆಹಾರ ಸಿಗದ ಕಾರಣ, ಈಗಾಗಲೇ ಹಲವು ಕೋತಿಗಳು ಆಹಾರಕ್ಕಾಗಿ ಹುಡುಕಾಟ ನಡೆಸಿ ಬಿಸಿಲಿನ ಬೇಗೆಯಿಂದ ಸುಸ್ತಾಗಿದ್ದು, ಇದೇ ರೀತಿ ನೀರು ಆಹಾರ ಸಿಗದೇ ಇದ್ದರೆ ಹಲವು ಕೋತಿಗಳು ಸಾಯುವುದು ನಿಶ್ಚಿತ.

ಸಾರ್ವಜನಿಕರಿಂದ ಆಹಾರ: ಕೋತಿಗಳು ಆಹಾರಕ್ಕಾಗಿ ಪ್ರತಿನಿತ್ಯ ರಸ್ತೆ ಬಳಿ ಕಾಯುತ್ತಿರುವುದನ್ನು ಅರಿತ ಕೆಲ ಸಾರ್ವಜನಿಕರು ಕೋತಿಗಳಿಗೆ ನೀರು, ಆಹಾರ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ತಾಲೂಕಿನಲ್ಲಿ ಸಮಾಜ ಸೇವಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಂಘ ಸಂಸ್ಥೆಗಳಿದ್ದು, ಮೂಕ ಪ್ರಾಣಿ ಪಕ್ಷಿಗಳಿಗೆ ಕುಡಿಯವ ನೀರು ಹಾಗೂ ಆಹಾರ ನೀಡಲು ಮುಂದಾಗಬೇಕಾಗಿದೆ.

ಶಾಶ್ವತ ನೀರಾವರಿ ಬೇಕಾಗಿದೆ: ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಾವುದೇ ರೀತಿಯ ನದಿ ನಾಲೆಯಿಲ್ಲದ ಕಾರಣ ಹಾಗೂ ಹಲವು ವರ್ಷಗಳಿಂದ ಉತ್ತಮ ಮಳೆಯಾಗದೇ ಕೆರೆ ಕುಂಟೆಗಳಲ್ಲಿ ಇರುವ ಅಲ್ಪಸ್ವಲ್ಪ ನೀರು ಕೂಡ ಬತ್ತಿ ಜನ ಜಾನುವಾರಗಳಿಗೆ ತೊಂದರೆಯಾಗಿದೆ.

ಎಚ್ಚರಿಕೆ: ಜಾನುವಾರುಗಳು, ಪ್ರಾಣಿ, ಪಕ್ಷಿಗಳು ಈ ಭಾಗದಲ್ಲಿ ಜೀವಂತವಾಗಿ ಉಳಿಯಬೇಕಾದರೆ ಸರ್ಕಾರ ಕೂಡಲೇ ಎಚ್ಚೆತು ಈ ಭಾಗಕ್ಕೆ ಶಾಶ್ವತವಾದ ನೀರಾವರಿ ಯೋಜನೆಗಳನ್ನು ನೀಡಬೇಕು. ಇಲ್ಲವಾದಲ್ಲಿ ಕುಡಿಯುವ ನೀರಿಗಾಗಿ ಕೋಲಾರ-ಚಿಕ್ಕಬಳ್ಳಾಪುರದ ಜನತೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ನೀರಾವರಿ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಒಟ್ಟಾರೆ ಪ್ರತಿನಿತ್ಯ ನೀರು ಆಹಾರಕ್ಕಾಗಿ ಪರದಾಡುತ್ತಿರುವ ಕೋತಿಗಳ ರಕ್ಷಣೆಗೆ ಸಂಘಸಂಸ್ಥೆಗಳು ಹಾಗೂ ಸಮಾಜ ಸೇವಕರು ಮುಂದಾಗಬೇಕಾಗಿದೆ.

ಸಮರ್ಪಕ ನೀರಿನ ಸರಬರಾಜು ಇಲ್ಲ: ಇನ್ನೂ ಮೈಲಾಪುರ ಗ್ರಾಮದ ಕೆಲವರು ಕೈವಾರದ ಗವಿ ಬಳಿಯ ಬೆಟ್ಟದಲ್ಲಿ ಕೋತಿಗಳಿಗೆ ಕುಡಿಯವ ನೀರಿನ ಅನುಕೂಲಕ್ಕಾಗಿ ಚಿಕ್ಕತೊಟ್ಟಿಗಳನ್ನು ನಿರ್ಮಿಸಿ ನೀರು ಬಿಟ್ಟಿದು, ತೊಟ್ಟಿಗಳಿಗೆ ಹಲವು ದಿನಗಳಿಂದ ನೀರು ಸರಬರಾಜು ಮಾಡದ ಕಾರಣ ಹಾಗೂ ಸ್ವತ್ಛತೆ ಮಾಡದ ಕಾರಣ ತೊಟ್ಟಿಗಳಲ್ಲಿ ನೀರು ಪಾಚಿಕಟ್ಟಿ, ದುರ್ನಾತ ಬೀರುತ್ತಿರುವುದರಿಂದ ಕೋತಿಗಳು ನೀರು ಕುಡಿಯಲು ಹಿಂಜರಿಯುತ್ತಿವೆ.

ಕೋತಿಗಳು ಕುಡಿಯುವ ನೀರಿಗಾಗಿ ಅರಣ್ಯ ಇಲಾಖೆಯಿಂದ ಬೆಟ್ಟದಲ್ಲಿ ಅಲ್ಲಲ್ಲಿ ತೊಟ್ಟಿಗಳನ್ನು ನಿರ್ಮಾಣ ಮಾಡಲಾಗಿದ್ದು. ಕುಡಿಯವ ನೀರಿನ ಅಭಾವ ಹಾಗೂ ತೊಂದರೆಯಿಂದಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಕೈವಾರ ಮಠದಿಂದ ಕೂಡ ಪ್ರತಿನಿತ್ಯ ಆಹಾರ ನೀಡಲಾಗುತ್ತಿದೆ.
-ಜಯಚಂದ್ರ, ವಲಯ ಉಪಆರಣ್ಯಾಧಿಕಾರಿ, ಚಿಂತಾಮಣಿ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.