ಜಿಲ್ಲಾದ್ಯಂತ 6 ಕೋಟಿಗೂ ಅಧಿಕ ಚುನಾವಣಾ ಅಕ್ರಮ ಪತ್ತೆ!
Team Udayavani, May 11, 2023, 2:54 PM IST
ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿ ಮಾದರಿ ನೀತಿ ಅನುಷ್ಠಾನಗೊಂಡ ದಿನದಿಂದ ಮತದಾನ ಪ್ರಕ್ರಿಯೆ ಮುಗಿಯುವವರೆಗೂ ಜಿಲ್ಲಾದ್ಯಂತ ಬರೋಬ್ಬರಿ 6 ಕೋಟಿಗೂ ಅಧಿಕ ಮೌಲ್ಯದ ದಾಖಲೆಗಳಿಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಗದು, ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಜಿಲ್ಲೆಯ 5 ಕ್ಷೇತ್ರಗಳಲ್ಲಿ 57 ಲಕ್ಷ ರೂ., ನಗದು ವಶಕ್ಕೆ ಪಡೆಯಲಾಗಿದ್ದು ಆ ಪೈಕಿ ಗೌರಿಬಿದನೂರಲ್ಲಿ 90.9500ರೂ, ಬಾಗೇಪಲ್ಲಿ ಕ್ಷೇತ್ರದಲ್ಲಿ 8.32,000 ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 1,225,850 ರೂ, ಶಿಡ್ಲಘಟ್ಟ ಕ್ಷೇತ್ರದಲ್ಲಿ ಒಟ್ಟು 290.900 ಲಕ್ಷ ರೂ, ಹಾಗೂ ಚಿಂತಾಮಣಿ ಕ್ಷೇತ್ರದಲ್ಲಿ 1,89.900 ಲಕ್ಷ ರೂ, ನಗದು ವಶಕ್ಕೆ ಪಡೆಯಲಾಗಿದೆ. ಜಿಲ್ಲಾದ್ಯಂತ ಒಟ್ಟು 86,816.14 ಲೀಟರ್ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದು ಅದರ ಒಟ್ಟಾರೆ ಮೌಲ್ಯ 2,45 ಲಕ್ಷ ರೂ ಗಳಾಗಿವೆ.
ಗೌರಿಬಿದನೂರಲ್ಲಿ 676.73 ಲೀಟರ್, ಬಾಗೇಪಲ್ಲಿ ಕ್ಷೇತ್ರದಲ್ಲಿ 999.02 ಲೀಟರ್, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ 8,2371, 96 ಲೀಟರ್, ಶಿಡ್ಲಘಟ್ಟದಲ್ಲಿ 898.9 ಲೀಟರ್ ಹಾಗೂ ಚಿಂತಾಮಣಿ ಕ್ಷೇತ್ರದಲ್ಲಿ 1968.35 ಲೀಟರ್ ಅಕ್ರಮ ಮದ್ಯವನ್ನು ಅಬಕಾರಿ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಇನ್ನೂ ಮಾದಕ ವಸ್ತು ವಶಕ್ಕೆ ಪಡೆದಿರುವ ಪೊಲೀಸರು ಚುನಾವಣೆ ವೇಳೆ ಒಟ್ಟು 8.32 ಕೆ.ಜಿ.ಯ ಒಟ್ಟು 5.19 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಚಿನ್ನ, ಬೆಳ್ಳಿ ವಿಚಾರಕ್ಕೆ ಬಂದರೆ ಒಟ್ಟು 5.64 ಕೆ.ಜಿ. ವಶಕ್ಕೆ ಪಡೆಯಲಾಗಿದ್ದು ಅದರ ಒಟ್ಟು ಮೌಲ್ಯ 2.67 ಕೋಟಿ ಮೌಲ್ಯದಾಗಿದೆ. ಇನ್ನೂ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ಬೆಲೆ ಬಾಳುವ ವಸ್ತುಗಳನ್ನು (ಪ್ಯಾನ್ಸ್, ಸೀರೆ, ಕುಕ್ಕರ್, ಮಿಕ್ಸಿ ಮತ್ತಿತರ ವಸ್ತುಗಳು) ಜಿಲ್ಲಾದ್ಯಂತ ಬರೋಬ್ಬರಿ 3.80 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು