ತಾಯಿ ಮರಣ-ಅನಿಮಿಯಾ ಮುಕ್ತ ದೇಶಕ್ಕೆ ಶ್ರಮಿಸಿ


Team Udayavani, Apr 10, 2019, 3:00 AM IST

tayi

ಗುಡಿಬಂಡೆ: ಆರೈಕೆ ಸಿಗದೆ ತಾಯಿ ಮರಣ ಹಾಗೂ ಅನಿಮಿಯಾ ಮುಕ್ತ ಭಾರತ ಮಾಡಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಜಾರಿಗೆ ತಂದಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.

ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನದಡಿ ಮಂಗಳವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಯಿ ಮರಣ ದೇಶದ ಪ್ರಗತಿಗೆ ಮಾರಕ. ಭಾರತದಲ್ಲಿ ವೈದ್ಯರ ಕೊರತೆ ಇದೆ. ಬದಲಾದ ಕಾಲ ಘಟ್ಟದಲ್ಲಿ ಸೂಕ್ತ ಸಮಯದಲ್ಲಿ ಗುಣಮಟ್ಟದ ಚಿಕಿತ್ಸೆ ವೈದ್ಯಕೀಯ ಆರೈಕೆ ದೊರಕುತ್ತಿಲ್ಲ. ಹೀಗಾಗಿ ತಾಯಿ ಮರಣ ಸಂಭವಿಸುತ್ತಿದೆ ಎಂದು ಹೇಳಿದರು.

ಒಂದು ತಾಯಿಯ ಮರಣಕ್ಕೆ ಅನೇಕ ಕಾರಣಗಳಿದ್ದು ಅದರಲ್ಲಿ ವೈದ್ಯಕೀಯ, ಅವೈದ್ಯಕೀಯ ಎಂದು ವಿಂಗಡಿಸಬಹುದು. ವೈದ್ಯಕೀಯ ಕಾರಣಗಳಲ್ಲಿ ಬಹಳಷ್ಟು ಮರಣಗಳು ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೆ ಸಂಭವಿಸುತ್ತವೆ ಎಂಬುದು ವಿಷಾಧನೀಯ ಸಂಗತಿ ಎಂದು ತಿಳಿಸಿದರು.

ಎಚ್ಚರವಹಿಸಿ: ಸಾಮಾಜಿಕ, ಆರ್ಥಿಕ ಕಾರಣಗಳಿಂದ ಗರ್ಭಿಣಿ ಒಂದೇ ಊರಿನಲ್ಲಿ ಇರುವುದಿಲ್ಲ. ಬರ ಪೀಡಿತ ಪ್ರದೇಶದ ಜನರು ಕೆಲಸಕ್ಕಾಗಿ ನಗರಗಳ ಕಡೆಗೆ ವಲಸೆ ಹೋಗುತ್ತಾರೆ. ಸೂಕ್ತ ಗರ್ಭಿಣಿ ಆರೈಕೆ ಮಾಡಿಕೊಳ್ಳುವುದಿಲ್ಲ. ಸೂಕ್ತ ವೈದ್ಯಕೀಯ ತಪಾಸಣೆಗೆ ಒಳ ಪಡುವುದಿಲ್ಲ. ಹೆರಿಗೆಗೆ 1 ವಾರ ಇಲ್ಲವೇ 1 ತಿಂಗಳು ಇರುವಾಗ ತಾಯಿ ಮನೆಗೆ ಹೆರಿಗೆಗೆ ಬರುತ್ತಾರೆ.

ಗಂಡಾಂತರ ಹೆರಿಗೆ ಲಕ್ಷಣಗಳು ಇದ್ದರೆ ಸ್ಥಳೀಯ ವೈದ್ಯರು ಮೇಲ್ದರ್ಜೆ ಅಥವಾ ಇತರೆ ಆಸ್ಪತ್ರೆಗೆ ಕಳುಹಿಸುತ್ತಾರೆ. ಈ ವೇಳೆ ದಾರಿ ಮಧ್ಯೆ ಸಾವು ಸಂಭವಿಸಬಹುದು. ವೈದ್ಯರ ನಿರ್ಲಕ್ಷ್ಯದಿಂದಲೂ ಸಾವು ಸಂಭವಿಸಬಹುದಾಗಿದೆ ಎಂದು ಹೇಳಿದರು.

ಕ್ರಮ ವಹಿಸಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ವಿಜಯಲಕ್ಷಿ, ದೇಶದಲ್ಲಿ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಆರೋಗ್ಯ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಯೋಜನೆ ಜಾರಿಗೆ ತಂದಿದ್ದಾರೆ.

ಇದರ ಮೂಲ ಉದ್ಧೇಶ ಪ್ರತಿ ತಿಂಗಳು 9 ನೇ ತಾರೀಖೀನಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ, ಸರ್ಕಾರಿ/ ಅರೆ ಸರ್ಕಾರಿ/ಖಾಸಗಿ ಸ್ತ್ರೀ ರೋಗ ತಜ್ಞರು ಗರ್ಭಿಣಿ ಸ್ತ್ರೀಯರ ಪರೀಕ್ಷೆ ಮಾಡಿ ಸೂಕ್ತ ಮಾರ್ಗದರ್ಶನ ನೀಡಬೇಕು. ಮುಖ್ಯವಾಗಿ ತಾಯಿ ಮರಣ ಸಂಭವಿಸದಂತೆ ಕ್ರಮ ವಹಿಸಬೇಕೆಂದರು.

ಉಚಿತ ಔಷಧಿ: ಇದೊಂದು ಗ್ರಾಮೀಣ ಮತ್ತು ಬಡ ಹೆಣ್ಣು ಮಕ್ಕಳ ಪಾಲಿಗೆ ವರವಾಗಿದ್ದು ಹೊಸದಾದ ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಇದರ ಪೂರ್ಣ ಪ್ರಯೋಜನವನ್ನು ಗರ್ಭಿಣಿಯರು ಪಡೆಯಬೇಕು. ವೈದ್ಯರಿಗೆ ಹಣ ನೀಡಬೇಕಿಲ್ಲ. ಈ ವೇಳೆ ಗರ್ಭಿಣಿಗೆ ಅಗತ್ಯ ಇರುವ ಔಷಧಿಯನ್ನು ಜೆ.ಎಸ್‌.ಎಸ್‌.ಕೆ ಕಾರ್ಯಕ್ರಮದಡಿ ಭರಿಸಲಾಗುವುದೆಂದರು.

ತಾಯ್ತನಕ್ಕೆ ಯಾವುದೇ ಜಾತಿ, ಕುಲದ ಹಂಗು ನೋಡದೇ, ಬಡವ, ಶ್ರೀಮಂತ ಎಂದು ಬೇಧವೆಣಿಸದೆ ಉಚಿತವಾದ ಚಿಕಿತ್ಸೆ ನೀಡಲಾಗುವುದು. ಮೂಲಕ ತಾಯಿ ಮರಣ ಶಿಶು ಮರಣ ತಡೆಗಟ್ಟಬೇಕೆಂದರು.

ಗರ್ಭಿಣಿಯರಿಗೆ ಉಚಿತ ಔಷಧಿ: ಪ್ರತಿ ಗರ್ಭಿಣಿ ಕನಿಷ್ಠ 4 ಬಾರಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ರಕ್ತದಲ್ಲಿ ಹಿಮೋಗ್ಲೊಬಿನ್‌ ಪ್ರಮಾಣ, ಬಿ.ಪಿ, ಕಬ್ಬಿಣಾಂಶ ಮತ್ತಿತರ ವಿಷಯಗಳ ಕಡೆ ಗಮನ ಹರಿಸಬೇಕು. ಅನಿಮಿಯಾ ಎಂದು ಕಂಡು ಬಂದಲ್ಲಿ, ಬಿ.ಪಿ ಹೆಚ್ಚು ಇರುವುದು ಕಂಡು ಬಂದಲ್ಲಿ ಸೂಕ್ತ ಮಾತ್ರೆ- ಔಷಧಿ ಪಡೆಯಬೇಕು.

ಎಚ್‌ಐವಿ ಮತ್ತಿತರ ಪರೀಕ್ಷೆಗೊಳಪಟ್ಟು ಮುಂಜಾಗ್ರತಾ ಕ್ರಮವಾಗಿ ಚಿಕಿತ್ಸೆ ಪಡೆಯಬಹುದು. ಅಲ್ಲದೇ, ಮಗುವಿಗೆ ಕಾಯಿಲೆ ಹರಡದಂತೆ ತಡೆಯಬಹುದು ಎಂದು ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್‌ ಕಗ್ಗಂಟು

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ 

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

Chikballapur; ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರ ಕಳೆದ ಬಾರಿ ಬಿಜೆಪಿ ವಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.