ಸಂಕಷ್ಟದಲ್ಲೂ ಕ್ಷೇತ್ರ ಮರೆತ ಸಂಸದ ಬಚ್ಚೇಗೌಡ

ಮಗನ ಕ್ಷೇತ್ರಕ್ಕೆ ಸೀಮಿತ ಕಾರ್ಯಚಟುವಟಿಕೆ; ಏ.3 ರಂದು ಭೇಟಿ ನೀಡಿದ್ದೇ ಕೊನೆ

Team Udayavani, Apr 27, 2020, 4:25 PM IST

ಸಂಕಷ್ಟದಲ್ಲೂ ಕ್ಷೇತ್ರ ಮರೆತ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಹಿನ್ನೆಲೆ ಲಾಕ್‌ಡೌನ್‌ ಇರುವುದರಿಂದ ಜನತೆ ಸಂಕಷ್ಟ ದಲ್ಲಿದ್ದಾರೆ. ಬರದಿಂದ ಕಂಗಲಾಗಿರುವ ಜನತೆಗೆ ನೀರಿನ ದಾಹ ನೀಗುತ್ತಿಲ್ಲ. ರೈತರು ಬೆಳೆದ ಬೆಳೆಗೆ ಮಾರುಕಟ್ಟೆ ಜೊತೆಗೆ ಬೆಲೆ ಕೊಡ ಸಿಗುತ್ತಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿಯೂ ಸಂಸದ ಬಿ.ಎನ್‌.ಬಚ್ಚೇಗೌಡ ಕ್ಷೇತ್ರದ ಕಡೆಗೆ ತಲೆಹಾಕದಿರುವುದು ಚರ್ಚೆಗೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಖಾತೆ ಬಿ.ಎನ್‌.ಬಚ್ಚೇಗೌಡರಿಗೆ ಇದ್ದರೂ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಅವರ ಮೇಲಿನ ಜನರ
ನಿರೀಕ್ಷೆಗಳು ಈಗ ಹುಸಿಯಾಗಿದ್ದು, ಅವರ ಕಾರ್ಯವೈಖರಿ ಬಗ್ಗೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಬೇಸರ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ಗೌರಿಬಿದನೂರು, ಚಿಕ್ಕಬಳ್ಳಾಪುರ
ತಾಲೂಕುಗಳಲ್ಲಿ ಕೋವಿಡ್ ಸೋಂಕಿತರು ಕಾಣಿಸಿಕೊಂಡು ಜನರು ತಲ್ಲಣಗೊಂಡಿದ್ದಾರೆ. ಮತ್ತೂಂದೆಡೆ ಲಾಕ್‌ಡೌನ್‌ನಿಂದಾಗಿ ಜನ ಸಾಮಾನ್ಯರು, ವಲಸಿಗರು, ಕಾರ್ಮಿಕರು, ಬಡವರು, ಮಧ್ಯಮ ವರ್ಗದ ಜನತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕ್ಷೇತ್ರದ ಸಂಸದರಾಗಿ ಜನರ ಸಂಕಷ್ಟಗಳಿಗೆ ಧ್ವನಿಯಾಗಿ ಜಿಲ್ಲಾಡಳಿತಕ್ಕೆ ಸೂಕ್ತ ಮಾರ್ಗದರ್ಶನ ನೀಡಿ ಕ್ಷೇತ್ರದ ಜನರ ಆಶೋತ್ತರಗಳಿಗೆ ಆಸರೆಯಾಗಬೇಕಿದ್ದ ಸಂಸದರು ಈಗ ತಮ್ಮ ಪುತ್ರ ಶಾಸಕರಾಗಿರುವ ಹೊಸಕೋಟೆಗೆ ಸೀಮಿತವಾಗಿರುವುದು ಟೀಕೆಗೆ ಗುರಿಯಾಗಿದೆ.

ಲಾಕ್‌ಡೌನ್‌ ಘೋಷಣೆಯಾಗಿ ತಿಂಗಳು ಕಳೆದರೂ ಸಂಸದ ಬಿ.ಎನ್‌.ಬಚ್ಚೇಗೌಡ, ಇದುವರೆಗೂ ಅಧಿಕಾರಿಗಳ ಸಭೆ ಕರೆದು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚೆ ನಡೆಸಿಲ್ಲ. ಒಮ್ಮೆ ಮಾತ್ರ ಉಸ್ತುವಾರಿ ಸಚಿವರಾಗಿದ್ದ ಉಪ ಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಕರೆದಿದ್ದ ಸಭೆಯಲ್ಲಿ ಭಾಗವಹಿಸಿ ಹೋಗಿರುವುದು ಬಿಟ್ಟರೆ ಇದುವರೆಗೂ ಕ್ಷೇತ್ರಕ್ಕೆ ಕಾಲಿಟ್ಟಿಲ್ಲ.

ಸಂಸದರ ಕಚೇರಿ ಭಣ ಭಣ: ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಾರ್ಯಾಲಯ ಇದ್ದರೂ ಜನರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಸಂಸದರು ಹೊಸಕೋಟೆ ಕ್ಷೇತ್ರದಲ್ಲಿ ಬೀಡುಬಿಟ್ಟು ಅಲ್ಲಿನ ಶಾಸಕರಾಗಿರುವ ತಮ್ಮ ಪುತ್ರ ಶರತ್‌ ಬಚ್ಚೇಗೌಡ ಜೊತೆ ಕಾಣಿಸಿಕೊಳ್ಳುತ್ತಿರುವುದು ಬಿಟ್ಟರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಸೇರಿದ ಕ್ಷೇತ್ರಗಳಲ್ಲಿ ತಲೆ ಹಾಕುತ್ತಿಲ್ಲ ಎನ್ನುವ ಆರೋಪ ಕ್ಷೇತ್ರದ ಮತದಾರರಿಂದ ಕೇಳಿ ಬರುತ್ತಿದೆ.

ಸಂಸದರಿಗೆ ಕ್ಷೇತ್ರದ ಜನರ ಬಗ್ಗೆ ಕಾಳಜಿ ಇಲ್ಲ. ಕೋವಿಡ್ ಸೋಂಕು ಸಂಕಷ್ಟದಿಂದ ಜನ ಸಾಮಾನ್ಯರು, ಕೂಲಿ ಕಾರ್ಮಿಕರು, ರೈತರು ಪರಿತಪಿಸುವಂತಾಗಿದೆ. ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಕುಡಿಯುವ ನೀರು, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು.
● ಎಂ.ಪಿ.ಮುನಿವೆಂಕಟಪ್ಪ, ಕೃಷಿ ಕೂಲಿಕಾರರ ಸಂಘದ ರಾಜ್ಯ ಮುಖಂಡರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.