ಮುಂಬೈ ನಂಜು: ಜಿಲ್ಲಾಡಳಿತ ಲೆಕ್ಕಾಚಾರ ಉಲ್ಟಾ!


Team Udayavani, May 25, 2020, 8:07 AM IST

jilladhalita

ಚಿಕ್ಕಬಳ್ಳಾಪುರ: ಕೋವಿಡ್‌ 19 ಮುಕ್ತ ಜಿಲ್ಲೆಯ ಕನಸು ಕಾಣುತ್ತಿದ್ದ ಜಿಲ್ಲೆಗೆ ಕಂಟಕವಾದ ಮುಂಬೈ ವಲಸಿಗರು, ಹಸಿರು ವಲಯ ದತ್ತ ಸಾಗಿದ್ದ ಜಿಲ್ಲೆಗೆ ಈಗ ಕೆಂಪು ವಲಯದ ಕಪ್ಪು ಚುಕ್ಕೆ. ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರು ಖುದ್ದು  ವಿರೋಧಿಸಿದರೂ ಜಿಲ್ಲೆಗೆ ತಂದು ಬಿಟ್ಟರು ಕೋವಿಡ್‌ 19 ಸೋಂಕಿತ ಮುಂಬೈ ವಲಸಿಗರನ್ನ. ಮಹಾಮಾರಿ ಕೋವಿಡ್‌ 19 ಜಿಲ್ಲಾಡಳಿತದ ಲೆಕ್ಕಚಾರವನ್ನೇ ತಲೆಕೆಳಗೆ ಮಾಡಿದೆ.

ಜಿಲ್ಲೆ ಯಲ್ಲಿ ಮೇ 22 ರವರೆಗೂ ಬರೀ 26 ಮಂದಿ ಯಲ್ಲಿ  ಮಾತ್ರ ಸೋಂಕು ಕಾಣಿಸಿಕೊಂಡಿದ್ದು, ಆ ಪೈಕಿ ಇಬ್ಬರು ಮೃತಪಟ್ಟು 19 ಮಂದಿ ಚೇತ ರಿಕೆ ಕಂಡು ಐವರು ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಜಿಲ್ಲೆಯಲ್ಲಿ ಸೋಂಕಿತರು ಗುಣ ಮುಖರಾಗಿ ಜಿಲ್ಲೆ ಹಸಿರು ವಲಯಕ್ಕೆ ಹೋಗ ಲಿದೆ ಎನ್ನುವಷ್ಟರಲ್ಲಿ ಜಿಲ್ಲೆಗೆ ಮುಂಬೈ ನಂಜು ಅಂಟಿಕೊಂಡಿದೆ.

3 ದಿನದಲ್ಲಿ ಶತಕ ಬಾರಿಸಿದ ಕೋವಿಡ್‌ 19: ಜಿಲ್ಲೆಗೆ ಮುಂಬೈ ನಿಂದ ವಲಸಿಗರನ್ನು ಕರೆ ತಂದಿದ್ದೆ ಈಗ ಜಿಲ್ಲೆಗೆ ಶಾಪವಾಗಿದೆ. ವಲಸಿಗರು ಬಂದ ಮೂರೇ ದಿನಕ್ಕೆ ಹಾಗೂ  ಬಾಗೇಪಲ್ಲಿ ಗರ್ಭಿಣಿ ಸೋಂಕಿತೆ ಸೇರಿ ಜಿಲ್ಲೆಯಲ್ಲಿ ಶತಕ ಬಾರಿ ಸಿದೆ. ಕಳೆದ ಶುಕ್ರವಾರ 47 ಮಂದಿ ವಲಸಿಗ ರಲ್ಲಿ ಕಂಡು ಬಂದಿದ್ದ ಕೋವಿಡ್‌ 19, ಎರಡನೇ ದಿನ ಶನಿವಾರ 26 ಮಂದಿಯಲ್ಲಿ ಕಾಣಿಸಿ ಕೊಂಡರೆ, ಭಾನು ವಾರ 27ಕ್ಕೆ ಏರಿಕೆ  ಕಂಡಿದೆ.

ಹೀಗಾಗಿ ಮೂರು ದಿನದಲ್ಲಿ ವಲಸಿ ಗರ ಆಗಮನದ ಪರಿಣಾಮ ಜಿಲ್ಲೆಯಲ್ಲಿ ಸೋಂಕಿ ತರ ಸಂಖ್ಯೆ 126ಕ್ಕೆ ಏರಿಕೆ ಕಂಡಿದೆ. ಆರಂಭ ದಲ್ಲಿ ಜಿಲ್ಲೆಯಲ್ಲಿ ಕೋವಿಡ್‌ 19 ಆರ್ಭಟ ನಿಯಂತ್ರಣದಲ್ಲಿತ್ತು. ಜಿಲ್ಲಾಡಳಿತ ಕೂಡ ಸೋಂಕಿತರ  ಹಾಗೂ ಅವರ ಸಂಪರ್ಕದಲ್ಲಿದ್ದವರನ್ನು ಸಮರ್ಪಕವಾಗಿ ಕ್ವಾರಂಟೈನ್‌ ಮಾಡಿ ಸೋಂಕಿ ತರ ಪ್ರಮಾಣ ಹೆಚ್ಚಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿತ್ತು.

ಆದರೆ, ರಾಜ್ಯ ಸರ್ಕಾರ ಲಾಕ್‌ಡೌನ್‌ ಸಡಿಲಿಕೆ ಮಾಡಿ  ವಲಸಿಗರ ಆಗಮಕ್ಕೆ ಅವಕಾಶ ನೀಡಿದ್ದೆ ತಡ ಜಿಲ್ಲೆಯಲ್ಲೀಗ ಕೋವಿಡ್‌ 19 ನಾಗಲೋಟ ಬ್ರೇಕ್‌ ಇಲ್ಲದೇ ಸಾಗಿದ್ದು, ಜಿಲ್ಲಾಡ ಳಿತಕ್ಕೆ ಮುಂಬೈ ವಲಸಿಗರು ಸಂಕಷ್ಟ, ಸಂಕಟ ತಂದಿದ್ದು, ಸಾರ್ವ ಜನಿಕರಲ್ಲಿ ಆತಂಕ ಉಂಟು ಮಾಡಿದೆ.  ಸದ್ಯಕ್ಕೆ ವಲಸಿಗರು ಆಗ ಮನಕ್ಕೆ ರಾಜ್ಯ ಸರ್ಕಾರವೇ ಬ್ರೇಕ್‌ ಹಾಕಿದೆ. ಆದರೆ ಜಿಲ್ಲೆಗೆ ಆಗ ಮಿಸಿರುವ ಸುಮಾರು 253 ಮುಂಬೈ ವಲಸಿಗರ ಪೈಕಿ ಇದುವರೆಗೂ 99 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ 37 ಮಂದಿ ವರದಿ ಬಾಕಿ ಇದೆ.

ಮಹಾರಾಷ್ಟ್ರದ ಮುಂಬೈನಿಂದ ಜಿಲ್ಲೆಗೆ ಆಗ ಮಿಸಿರುವ ಕಾರ್ಮಿಕರಿಗೆ ನನ್ನ ಕಡೆಯಿಂದ ಅನುಮತಿ ಕೊಟ್ಟಿರಲಿಲ್ಲ. ಆದರೆ ಸರ್ಕಾರದ ಮಟ್ಟದಲ್ಲಿ ಮಾನವೀಯತೆಯ ದೃಷ್ಟಿಯಲ್ಲಿ ಅವರನ್ನು ಜಿಲ್ಲೆಗೆ ಕರೆಸಿಕೊಳ್ಳಬೇಕೆಂಬ ಆದೇಶದ ಮೇರೆಗೆ ನಾವು ಅವರನ್ನು ಸಾರ್ವಜನಿಕರ ಸಂಪರ್ಕಕ್ಕೆ ಬಿಡದೇ ಎಲ್ಲರನ್ನು ಕ್ವಾರಂಟೈನ್‌ ಮಾಡಿದ್ದೇವೆ. 
-ಆರ್‌.ಲತಾ, ಜಿಲ್ಲಾಧಿಕಾರಿ, ಮಾಧ್ಯಮ ಹೇಳಿಕೆ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.