ಅವರು ಬ್ಲಾಕ್ ಮೇಲ್ ಗಿರಾಕಿಗಳು; ಸೋತವರಿಗೂ ಮಂತ್ರಿಗಿರಿ ಕೊಟ್ಟರೆ ಪ್ರಜಾಪ್ರಭುತ್ವ ಎಲ್ಲಿದೆ?
Team Udayavani, Dec 14, 2019, 3:47 PM IST
ಚಿಕ್ಕಬಳ್ಳಾಪುರ: ಅನರ್ಹ ಶಾಸಕರು ಚುನಾವಣೆಯಲ್ಲಿ ಗೆದ್ದ ಮೇಲೆ ಅಲ್ಲಿಯೂ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಎಲ್ಲಿದ್ಧರೂ ಬ್ಲಾಕ್ ಮೇಲ್ ಗಿರಾಕಿಗಳೆಂದು ಮಾಜಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಪಕ್ಷದಲ್ಲಿ ಅವರು ಬ್ಲಾಕ್ ಮೇಲ್ ಶುರುವು ಮಾಡಿದ್ದಾರೆ. ಸೋತವರಿಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಕೊಡಬೇಕೆಂದು ಇವರು ಯಡಿಯೂರಪ್ಪ ಬಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದು ನ್ಯಾಯವೇ? ಈ ರೀತಿಯಾದರೆ ಎಲ್ಲಿದೆ ಪ್ರಜಾಪ್ರಭುತ್ವ ಎಂದು ಶಿವಶಂಕರರೆಡ್ಡಿ ಪ್ರಶ್ನಿಸಿದರು.
ಇವರ ಬ್ಲಾಕ್ ಮೇಲ್ ರಾಜಕಾರಣದಿಂದ ಬಿಜೆಪಿ ಪಕ್ಷದಲ್ಲಿ 25, 30 ವರ್ಷ ಕಾಲ ದುಡಿದು ಸಚಿವರಾಗುವ ಅರ್ಹತೆ ಇದ್ದರೂ ಅನೇಕ ಹಿರಿಯ ಮುಖಂಡರು ಸಚಿವ ಸ್ಥಾನ ವಂಚಿತರಾಗುತ್ತಿದ್ದಾರೆ. ಇದರಿಂದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಹೆಚ್ಚು ದಿನ ಉಳಿಯವ ಲಕ್ಷಣಗಳು ಕಾಣುತ್ತಿಲ್ಲ ಎಂದರು.
ರಾಜ್ಯ ಬಿಜೆಪಿ ಸರ್ಕಾರ, ಬರೀ ಅಧಿಕಾರ ಹಾಗೂ ಚುನಾವಣೆ ನಡೆಸಲು ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಜನಪರವಾದ ಅಭಿವೃದ್ಧಿ ಕಾಳಜಿ ಇಲ್ಲ ಎಂದು ಶಿವಶಂಕರ ರೆಡ್ಡಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!