ಬಿಜೆಪಿ ಸರ್ಕಾರದಿಂದ ದ್ವೇಷ ರಾಜಕಾರಣ: ಮಾಜಿ ಕೃಷಿ ಸಚಿವ ಶಿವಶಂಕರರೆಡ್ಡಿ ಆಕ್ರೋಶ.
Team Udayavani, Sep 19, 2019, 4:03 PM IST
ಚಿಕ್ಕಬಳ್ಳಾಪುರ: ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದ್ವೇಷದ ರಾಜಕಾರಣ ಮಾಡುತ್ತಿದೆ, ಮೈತ್ರಿ ಸರ್ಕಾರದಲ್ಲಿ ಅಭಿವೃದ್ಧಿಗೆ ಬಂದ ಅನುದಾನವನ್ನು ಬಿಜೆಪಿ ಸರ್ಕಾರ ಹಿಂಪಡೆಯುತ್ತಿದೆಯೆಂದು ಮಾಜಿ ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ ಕಿಡಿಕಾರಿದರು.
ಜಿಲ್ಲೆಯ ಗೌರಿಬಿದನೂರು ನಗರದ ಸೂರ್ಯ ಕಲ್ಯಾಣ ಮಂಟಪದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಕ್ಷದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕ್ಷೇತ್ರದಲ್ಲಿ ಲೋಕೋಪಯೋಗಿ, ಸಮಾಜ ಕಲ್ಯಾಣ, ನಗರಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಗೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬಿಡುಗಡೆಗೊಂಡಿದ್ದ ಅನುದಾನವನ್ನು ಸಿಎಂ ಯಡಿಯೂರಪ್ಪ ವಾಪಸ್ಸು ಪಡೆಯುವ ಮೂಲಕ ವಿರೋದ ಪಕ್ಷಗಳ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸುತ್ತಿದ್ದಾರೆಂದರು. ಬಿಜೆಪಿ ಸರ್ಕಾರ ನೆರೆ, ಬರ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ, ಕೇಂದ್ರದಿಂದ ಅಗತ್ಯ ಅನುದಾನ ತರುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಹೀಗಾಗಿ ಕ್ಷೇತ್ರಗಳ ಅಭಿವೃದ್ಧಿಗೆ ನೀಡಿದ ಹಣ ವಾಪಸ್ಸು ಪಡೆಯುತ್ತಿದ್ದಾರೆಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮುಖಂಡರಾದ ಹನುಮಂತರೆಡ್ಡಿ, ಗೀತಾ, ಪ್ರಕಾಶರೆಡ್ಡಿ, ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ
Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್ ಕಲ್ಯಾಣ್!
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ