ಮುನಗನಹಳ್ಳಿಗೆ ಮಕ್ಕಳ ಸ್ನೇಹಿ ಗ್ರಾಪಂ ರಾಷ್ಟ್ರ ಪ್ರಶಸ್ತಿ

ಮಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮ , ಪ್ರಗತಿ ಕಾರ್ಯಗಳಿಗೆ ನರೇಗಾ ಬಳಕ

Team Udayavani, Apr 2, 2021, 1:40 PM IST

ಮುನಗನಹಳ್ಳಿಗೆ ಮಕ್ಕಳ ಸ್ನೇಹಿ ಗ್ರಾಪಂ ರಾಷ್ಟ್ರ ಪ್ರಶಸ್ತಿ

ಚಿಂತಾಮಣಿ: ಮಕ್ಕಳ ಕಾಳಜಿ ಬಗ್ಗೆ ಆದ್ಯತೆ ನೀಡಿ, ಮಕ್ಕಳ ಸಮಸ್ಯೆ ಬಗೆಹರಿಸುವುದು. ಮಕ್ಕಳ ಗ್ರಾಮ ಸಭೆ ನಡೆಸುವುದು. ಶಾಲೆಯಿಂದ ಹೊರ ಉಳಿದ ಮಕ್ಕಳನ್ನು ಶಾಲೆಗೆಸೇರಿಸುವುದು. ಅಂಗನವಾಡಿ ಕೇಂದ್ರಗಳಿಗೆ ಹಾಗೂ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು.ಆಟದ ಮೈದಾನ ನಿರ್ಮಾಣ ಸೇರಿದಂತೆ ಮಕ್ಕಳಸರ್ವಾಂಗೀಣ ಅಭಿ ವೃದ್ಧಿಗೆ ಶ್ರಮಿಸಿದ ಗ್ರಾಪಂಗಳಿಗೆ ಭಾರತಸರ್ಕಾರ ನೀಡುವ ಮಕ್ಕಳಸ್ನೇಹಿ ಗ್ರಾಮ ಪಂಚಾಯಿತಿ ಪ್ರಶಸ್ತಿತಾಲೂಕಿನ ಮುನಗನಹಳ್ಳಿ ಗ್ರಾಪಂಗೆ ಲಭಿಸಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ.

ರಾಜ್ಯಕ್ಕೆ ಏಕೈಕ ಗ್ರಾಪಂ: ಭಾರತ ಸರ್ಕಾರ ನೀಡುವ ಮಕ್ಕಳ ಸ್ನೇಹಿ ಗ್ರಾಪಂ ಪುರಸ್ಕಾರ ಪ್ರಶಸ್ತಿಗೆ ರಾಜ್ಯದಿಂದ ಆರ್ಜಿ ಸಲ್ಲಿಸಿದ್ದ ಹಲವು ಗ್ರಾಪಂಗಳ ಪೈಕಿ ತಾಲೂಕಿನ ಮುನಗನಹಳ್ಳಿ ಗ್ರಾಪಂಗೆಪ್ರಶಸ್ತಿ ದೊರೆತಿರುವುದು ಮುನಗನಹಳ್ಳಿ ಗ್ರಾಪಂ ರಾಜ್ಯಕ್ಕೆ ಮಾದರಿಯಾಗಿದೆ.

ಶ್ರಮಕ್ಕೆ ತಕ್ಕ ಪ್ರತಿಫ‌ಲ: ಗ್ರಾಪಂ ವ್ಯಾಪ್ತಿಯಲ್ಲಿ ಹತ್ತು ಹಳ್ಳಿಗಳಿದ್ದು, 8 ಕಿರಿಯ ಪ್ರಾಥಮಿಕ ಪಾಠ ಶಾಲೆಗಳು, ನಾಲ್ಕುಹಿರಿಯ ಪ್ರಾಥಮಿಕ ಪಾಠ ಶಾಲೆಗಳಲ್ಲಿ 327ವಿದ್ಯಾರ್ಥಿಗಳಿದ್ದು, ಯಾವ ಗ್ರಾಮದಲ್ಲೂ ಮಕ್ಕಳುಶಾಲೆಯಿಂದ ಹೊರಗೆ ಉಳಿಯದಂತೆ ಎಲ್ಲಾ ಆರ್ಹ ಮಕ್ಕಳನ್ನುಶಾಲೆಗೆ ಸೇರಿಸುವುದು. ಮಕ್ಕಳೇ ಶಾಲೆಗೆ ಸೇರುವಂತೆ ಆಕರ್ಷಿಸುವುದು. ಶಾಲೆ ಕಟ್ಟಡಗಳಿಗೆ ಸುಣ್ಣ- ಬಣ್ಣ ಬಳಿದು ರಂಗು ನೀಡಿದಗ್ರಾಪಂ ಆಡ ಳಿತ, ಗ್ರಾಪಂನ ಎಲ್ಲಾಗ್ರಾಮಗಳ ಶಾಲೆಗಳಲ್ಲಿ ಶೇ. 100ರಷ್ಟುಮಕ್ಕಳನ್ನು ಶಾಲೆಗೆ ಕಳುಹಿಸುವ ಜೊತೆಗೆ ಅವರಿಗೆ ಮೂಲ ಸೌಲಭ್ಯವನ್ನುಕಲ್ಪಿಸಿದೆ. ಅಲ್ಲದೆ, ಶೇ.100ರಷ್ಟುಹಾಜರಾತಿ ಕಾಪಾಡಿಕೊಳ್ಳಲು ಗ್ರಾಪಂ ಆಡಳಿತ ಸಕ್ರಿಯವಾಗಿಕಾರ್ಯನಿರ್ವಹಿಸಿದ ಪರಿ ಣಾಮ,ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಲು ಕಾರಣ ಎಂದು ಗ್ರಾಪಂ ಆಡಳಿತ ವರ್ಗ, ಆಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ನರೇಗಾ ಯೋಜನೆ ಬಳಕೆ: ಮುನಗನಹಳ್ಳಿ ಗ್ರಾಪಂ ವ್ಯಾಪ್ತಿಯ ಶಾಲೆಗಳ ಅಭಿವೃದ್ಧಿಗೆ ಪಣತೊಟ್ಟ ಗ್ರಾಪಂ ಆಡಳಿತ ಮಂಡಳಿ,ಕಳೆದ ಕೆಲ ವರ್ಷಗಳಿಂದ ಗ್ರಾಪಂ ವ್ಯಾಪ್ತಿ ಎಲ್ಲಾ ಶಾಲಾಕಟ್ಟಡಗಳಿಗೆ ಸುಣ್ಣ- ಬಣ್ಣ ಬಳಿದು, ನರೇಗಾ ಯೋಜನೆಯಡಿಆಟದ ಮೈದಾನ, ಉದ್ಯಾನವನ ನಿರ್ಮಾಣ ಮಾಡಿದೆ. ಅದರಜೊತೆಗೆ ಗ್ರಾಪಂ ವ್ಯಾಪ್ತಿ ಹತ್ತು ಗ್ರಾಮಗಳಲ್ಲಿ 287 ಮಕ್ಕಳಿಗೆ 10ಅಂಗನವಾಡಿ ಕೇಂದ್ರಗಳನ್ನು ನಿರ್ಮಾಣ ಮಾಡಿ, ಅವುಗಳನ್ನುಮಾದರಿ ಕೇಂದ್ರಗಳನ್ನಾಗಿಸಿದೆ. ಶಾಲೆ ಗಳಿಗೆ ಕಾಂಪೌಂಡ್‌, ಶೌಚಾಲಯಗಳನ್ನು ನಿರ್ಮಾಣ ಮಾಡಿದ ಗ್ರಾಪಂ ಆಡಳಿತ,ಮಕ್ಕಳ ಆರೋಗ್ಯದತ್ತ ಕಾಳಜಿವಹಿಸಿ, ಶೇ.100ರಷ್ಟು ಮಕ್ಕಳಿಗೆ ಲಸಿಕೆ ಹಾಕಿಸುವಲ್ಲಿ ಯಶಸ್ವಿಯಾಗಿದೆ.

ದಾನಿಗಳ ನೆರವು: ಗ್ರಾಪಂ ವ್ಯಾಪ್ತಿಯ ಎಲ್ಲಾ ಶಾಲೆ ಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ದಾನಿಗಳ ಮೂಲಕಶುದ್ಧಕುಡಿಯುವ ನೀರಿನ ಘಟಕಗಳು, ವಿದ್ಯಾರ್ಥಿಗಳು ಮತ್ತು ಮಕ್ಕಳಿಗೆ ಬೇಕಾದ ಪೀಠೊ ಪಕರಣಗಳು ಸೇರಿದಂತೆಮೂಲ ಸೌಕರ್ಯಗಳನ್ನು ಕಲ್ಪಿಸಿದೆ. ಮುನಗನಹಳ್ಳಿ ಗ್ರಾಪಂಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗ ಮಕ್ಕಳ ಬಗ್ಗೆಕಾಳಜಿವಹಿಸಿದೆ. ಇದರಿಂದ ಮುನಗನಹಳ್ಳಿಗೆ ಮಕ್ಕಳ ಸ್ನೇಹಿ ಗ್ರಾಪಂ ರಾಷ್ಟ್ರಿಯ ಪ್ರಶಸ್ತಿ ಲಭಿಸಿದೆ.

ಈಗ ರಾಷ್ಟ್ರಿಯ ಮಕ್ಕಳಸ್ನೇಹಿ ಪ್ರಶಸ್ತಿ ಲಭಿಸಿರುವುದು ನಮ್ಮ ಕಾರ್ಯಕ್ಕ ಪ್ರೋತ್ಸಾಹನೀಡಿದಂತಾಗಿದೆ. ಆದ್ದರಿಂದ ಇದೇ ರೀತಿ ದುಡಿದುಗ್ರಾಮಗಳ ಅಭಿವೃದ್ಧಿಪಡಿಸಿ, ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲು ಶ್ರಮಿಸುತ್ತೇವೆ. -ಕವಿತಾ, ಪಿಡಿಒ, ಮುನುಗನಹಳ್ಳಿ

ಗ್ರಾಪಂ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ನರೇಗಾ ಯೋಜನೆಯಡಿ ಒಂದು ವರ್ಷಕ್ಕೆ ಒಂದುವರೆ ಕೋಟಿ ರೂ. ಅನುದಾನ ವೆಚ್ಚ ಮಾಡಿ

ಕಾಂಪೌಂಡ್‌, ಶಾಲಾ ಆವರಣದಲ್ಲಿ ಉದ್ಯಾನ ವನ, ಮಳೆ ನೀರು ಕೋಯ್ಲು, ಆಟದ ಮೈದಾನಗಳ ಅಭಿವೃದ್ಧಿ, ಶಾಲೆಗಳಿಗೆ ಅಡುಗೆ ಕೊಠಡಿ ನಿರ್ಮಾಣ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ಹಲವು ಕಾರ್ಯಗಳನ್ನು ಕೈಗೊಂಡಿದ್ದೇವು. ●ಎಸ್‌.ವಿ.ಸುಮಾ, ಮಾಜಿ ಅಧ್ಯಕ್ಷೆ, ಮುನುಗನಹಳ್ಳಿ ಗ್ರಾಪಂ

ಮುನುಗನಹಳ್ಳಿ ಗ್ರಾಪಂಗೆ ರಾಷ್ಟ್ರಿಯ ಮಕ್ಕಳ ಸ್ನೇಹಿ ಪ್ರಶಸ್ತಿ ಬಂದಿರುವುದುಸಂತಸದ ವಿಚಾರ. ಇದ ರಂತೆ ತಾಲೂಕಿನಎಲ್ಲಾ ಗ್ರಾಪಂ ಗಳು ಒಂದಲ್ಲಾ ಒಂದುರೀತಿಯಲ್ಲಿ ಸಾಧನೆ ಮಾಡಿ ರಾಜ್ಯ,ರಾಷ್ಟ್ರಮಟ್ಟದ ಪ್ರಶಸ್ತಿ ಪಡೆಯಬೇಕು. ಮುನುಗನಹಳ್ಳಿ ಆಡಳಿತ ವರ್ಗ ಮತ್ತು ಅಧಿಕಾರ ವರ್ಗಕ್ಕೆ ಅಭಿನಂದನೆ. ●ಮಂಜುನಾಥ್‌, ತಾಪಂ ಇಒ, ಚಿಂತಾಮಣಿ

 

-ಶ್ರೀನಿವಾಸ್‌.ಕೆ.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

LS polls 2024: ಅಸೆಂಬ್ಲಿಯಲ್ಲಿ ಜಂಗೀಕುಸ್ತಿ, ಲೋಕ ಸಮರದಲ್ಲಿ ದೋಸ್ತಿ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

High temperature: ಉರಿ ಬಿಸಿಲಿಗೆ ಹೈರಾಣ: ಮಳೆಗಾಗಿ ಕಾದ ಜನ!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha election: ಎಸ್ಸೆಸ್ಸೆಲ್ಸಿ, ಪಿಯುಸಿ ಓದಿರುವ ಅಭ್ಯರ್ಥಿಗಳೇ ಹೆಚ್ಚು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

Lok Sabha Elections 2024: 29 ಅಭ್ಯರ್ಥಿಗಳ ಸ್ಪರ್ಧೆ ಇದೇ ಮೊದಲು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.