ನಿಯಮ ಉಲ್ಲಂಘಿಸಿದವರಿಗೆ ಡೀಸಿ ತರಾಟೆ


Team Udayavani, Apr 30, 2021, 2:41 PM IST

news held at chikkaballapura

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕು ಕಾಣಿಸಿಕೊಂಡು ಹೋಂ ಐಸೋಲೇಷನ್‌ನಲ್ಲಿರುವ ಜನ ಮನೆಯಿಂದ ಹೊರ ಬಂದರೇ ಪ್ರಕರಣ ದಾಖಲಿಸಿ ಕಾನೂನುರೀತಿಯ ಕ್ರಮ ಜರುಗಿಸಲಾಗುವುದು ಎಂದುಜಿಲ್ಲಾಧಿಕಾರಿ ಆರ್‌.ಲತಾ ಖಡಕ್‌ ಎಚ್ಚರಿಕೆ ನೀಡಿದರು.

ತಾಲೂಕಿನ ಮಂಚನಬಲೆ ಗ್ರಾಮದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಖುದ್ದು ಗ್ರಾಮಕ್ಕೆ ಭೇಟಿ ನೀಡಿ ಟಾಸ್ಕ್ ಪೋರ್ಸ್‌ಸಮಿತಿಗಳ ಕಾರ್ಯ ವೈಖರಿ ಪರಿಶೀಲಿಸಿ ಮಾತನಾಡಿದ ಅವರು, ಜನರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಸರ್ಕಾರ ಅನೇಕ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.ನಾಗರಿಕರು ಸಹ ಅದಕ್ಕೆ ‌ಪೂರಕವಾಗಿ ಸಹಕಾರ ನೀಡಬೇಕು, ಕೊರೊನಾ ನಿಯಮ ಕಡ್ಡಾಯವಾಗಿ ಪಾಲಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದುಹೇಳಿದರು.

ನಿಯಮ ಉಲ್ಲಂಸಿದವರಿಗೆ ತರಾಟೆ: ಕೋವಿಡ್‌ಸೊಂಕು ದೃಢಪಟ್ಟು ಯಾವುದೇ ಮಾಸ್ಕ್ ಧರಿಸದೇ,ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಮಂಚನಬಲೆ ಗ್ರಾಮ ವ್ಯಾಪ್ತಿಯ ಈತಮಾಕಲಹಳ್ಳಿಯಲ್ಲಿ ಕೆಲವರು ಬೇಕಾಬಿಟ್ಟಿಯಾಗಿ ಓಡಾಡುತ್ತಿರುವ ಬಗ್ಗೆ ಆಶಾಕಾರ್ಯಕರ್ತೆಯರು ಜಿಲ್ಲಾಧಿಕಾರಿಗಳ ಗಮನಕ್ಕೆತಂದರು. ಕೂಡಲೇ ಸ್ಪಂದಿಸಿದ ಡೀಸಿ, ಅಂತಹವರ ಮೇಲೆ ಕೂಡಲೇ ಪ್ರಕರಣ ದಾಖಲಿಸಿ, ಕೋವಿಡ್‌ಕೇರ್‌ ಸೆಂಟರ್‌ಗೆ ಸೇರಿಸುವಂತೆ ಸ್ಥಳದಲ್ಲೇ ಪೊಲೀಸ್‌ ಅಧಿಕಾರಿಗಳಿಗೆ ಹಾಗೂ ತಾಲೂಕು ಕೋವಿಡ್‌ ನೋಡಲ್‌ ಅಧಿಕಾರಿಗಳಿಗೆ ಆದೇಶಿಸಿದರು. ಅಲ್ಲದೆ,ಕೋವಿಡ್‌ ನಿಯಮ ಉಲ್ಲಂಘಿಸುವವರನ್ನು ತರಾಟೆಗೆತೆಗೆದುಕೊಂಡರು.

ಕರ್ತವ್ಯ ಅಡ್ಡಿಮಾಡಿದ್ರೆ ಕ್ರಮ: ಕೋವಿಡ್‌ ಕರ್ತವ್ಯನಿರ್ವಹಿಸುತ್ತಿರುವ ಟಾಸ್ಕ್ ಪೋರ್ಸ್‌ ಸಮಿತಿಯಸದಸ್ಯರಿಗೆ, ಆಶಾ ಕಾರ್ಯಕರ್ತೆಯರಿಗೆ ಗೌರವ ಕೊಟ್ಟು ಕೋವಿಡ್‌ ಕರ್ತವ್ಯ ನಿರ್ವಹಿಸಲು ಸ್ಫೂರ್ತಿ ನೀಡಬೇಕು.ಅವರ ಕರ್ತವ್ಯಗಳಿಗೆ ಅಡ್ಡಿ ಪಡಿಸಿದರೆ ಮುಲಾಜಿಲ್ಲದೇಶಿಸ್ತು ಕ್ರಮ ಜರುಗಿಸಬೇಕು ಎಂದು ಹೇಳಿದರು.

ಲಕ್ಷಣಗಳಿದ್ದವರಿಗೂ ಚಿಕಿತ್ಸೆ ನೀಡಿ: ಆರ್ಟಿಪಿಸಿಆರ್‌ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್‌ ವರದಿ ಬಂದಿದ್ದು,ಸೋಂಕಿನ ಲಕ್ಷಣಗಳಿದ್ದಲ್ಲಿ ಅವರನ್ನು ಸಹ ಸೋಂಕಿತರೆಂದು ಭಾವಿಸಿ ಚಿಕಿತ್ಸೆ ನೀಡಬೇಕೆಂದು  ಸರ್ಕಾರ ಆದೇಶಿಸಿದೆ. ಅದರಂತೆ ಆರೋಗ್ಯ ಇಲಾಖೆಯಅ ಧಿಕಾರಿಗಳು ಕ್ರಮ ವಹಿಸಬೇಕು. ಒಟ್ಟಾರೆ,ಯಾರೊಬ್ಬರೂ ಚಿಕಿತ್ಸೆ ಸಿಗದೆ ಸಾವು ಸಂಭವಿಸದಂತೆ ಎಚ್ಚರ ವಹಿಸುವಂತೆ ಅ ಧಿಕಾರಿಗಳಿಗೆ ಸೂಚಿಸಿದರು.

ಮಹತ್ವದ ದಿನಗಳು: ಜ್ವರ, ಕೆಮ್ಮು, ಶೀತ ಹೀಗೆ ಏನೇಲಕ್ಷಣಗಳು ಕಾಣಿಸಿಕೊಂಡರೂ ತಕ್ಷಣವೇ ಕೋವಿಡ್‌ಪರೀಕ್ಷೆ ಮಾಡಿಕೊಳ್ಳುವುದರಿಂದ ಮುಂದಾಗುವಅನಾಹುತಗಳನ್ನು ತಪ್ಪಿಸಬಹುದೆಂದ ಜಿಲ್ಲಾಧಿಕಾರಿಗಳು,ನಾವು ವಯಸ್ಸಿನಲ್ಲಿ ಚಿಕ್ಕವರಿದ್ದೇವೆ, ಕೋವಿಡ್‌ ಏನೂಮಾಡಲ್ಲ ತಡೆದುಕೊಳ್ಳುತ್ತೇವೆಂದು ಕೋವಿಡ್‌ ಗಂಟಲುದ್ರವ ಪರೀಕ್ಷೆ ಮಾಡಿಸಿಕೊಳ್ಳದೇ ನಿರ್ಲಕ್ಷ್ಯವಹಿಸುವುದರಿಂದ ಸಾವು ಸಂಭವಿಸುತ್ತವೆ. ಪ್ರಸ್ತುತ ಈಸಂಕಷ್ಟದ ಅವ ಧಿಯಲ್ಲಿ ಪ್ರತಿ ದಿನವೂ ಮಹತ್ವವಾಗಿದೆಎಂದು ಹೇಳಿದರು.

ಹತ್ತಿರದ ಕೋವಿಡ್‌ ಆಸ್ಪತ್ರೆಗೆ ಸೇರಿಸಿ: ಯಾವುದೇರೋಗ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಗಂಟಲುದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸೊಂಕು ದೃಢ ಪಟ್ಟುಯಾವುದೇ ರೋಗ ಲಕ್ಷಣಗಳಿದ್ದಲ್ಲಿ ನಮ್ಮ ಆರೋಗ್ಯಅ ಧಿಕಾರಿಗಳು ಅಥವಾ ಟಾಸ್ಕ್ ಪೋರ್ಸ್‌ ಸಮಿತಿಗಳ ಸದಸ್ಯರನ್ನು ಸಂಪರ್ಕಿಸಿ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಕ್ವಾರಂಟೈನ್‌ ಇರಬಹುದು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿಹತ್ತಿರದ ಕೋವಿಡ್‌ ಆಸ್ಪತ್ರೆಗಳಲ್ಲಿ ದಾಖಲಾಗಬಹುದುಎಂದು ವಿವರಿಸಿದರು.

ವಿಡಿಯೋ ಸಂವಾದ: ಮಂಚನಬಲೆ ಗ್ರಾಪಂಉಪಾಧ್ಯಕ್ಷ ಶ್ರೀಧರ್‌ ಮಾತನಾಡಿ, ಜಿಲ್ಲಾ ಧಿಕಾರಿಗಳುಸರಣಿಯೋಪಾ ದಿಯಲ್ಲಿ ಪ್ರತಿ ಹಳ್ಳಿ ಹಾಗೂ ನಗರಪ್ರದೇಶಗಳ ಪ್ರತಿ ವಾರ್ಡ್‌ಗಳಿಗೆ ಖುದ್ದು ಭೇಟಿ ನೀಡಿಕೋವಿಡ್‌ ಸೊಂಕಿತರನ್ನು ಹಾಗೂ ಗುಣಮುಖರಾಗಿಹೋಂಐಸೋಲೇಷನ್‌ನಲ್ಲಿ ಇರುವವರನ್ನು ಭೇಟಿಮಾಡಿ, ವಿಡಿಯೋ ಸಂವಾದದ ಮೂಲಕ ಅವರಯೋಗ ಕ್ಷೇಮ ವಿಚಾರಿಸುತ್ತಿದ್ದಾರೆ ಎಂದು ಹೇಳಿದರು.

ಅದರಂತೆ 28 ಸಕ್ರಿಯ ಪ್ರಕರಣಗಳಿರುವ ನಮ್ಮಗ್ರಾಪಂಗೆ ಭೇಟಿ ನೀಡಿ, ಅಧ್ಯಕ್ಷರು, ಸದಸ್ಯರಿಗೆ ಹಾಗೂಸಾರ್ವಜನಿಕರಿಗೆ ಕೋವಿಡ್‌ ಜಾಗೃತಿ ಮೂಡಿಸಿರುವುದುನಮ್ಮ ಟಾಸ್ಕ್ ಪೋರ್ಸ್‌ ಸಮಿತಿಗೆ ಧೈರ್ಯಬಂದಿದೆ.ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಅನುಸರಿಸಿ ನಮ್ಮಗ್ರಾಪಂನಿಂದ ಕೋವಿಡ್‌ ನಿರ್ಮೂಲನೆ ಮಾಡುವುದಾಗಿ ತಿಳಿಸಿ, ಜಿಲ್ಲಾಧಿ ಕಾರಿಗಳ ಭೇಟಿಗೆ ಅಭಿನಂದನೆ ತಿಳಿಸಿದರು. ಜಿಪಂ ಸಿಇಒ ಪಿ.ಶಿವಶಂಕರ್‌, ತಾಲೂಕು ನೋಡಲ್‌ಅ ಧಿಕಾರಿ ಭಾಸ್ಕರ್‌, ಗ್ರಾಪಂ ಅಧ್ಯಕ್ಷೆ ಗಾಯತ್ರಮ್ಮ ಮತ್ತುಸದಸ್ಯರು, ಆಶಾ, ಅಂಗನವಾಡಿ ಸಿಬ್ಬಂದಿ, ಟಾಸ್ಕ್ಪೋರ್ಸ್‌ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.