ಪ್ರಾದೇಶಿಕ ಪಕ್ಷದಿಂದ ಕನ್ನಡ ಉಳಿವು: ನಿಖಿಲ್ ಕುಮಾರಸ್ವಾಮಿ
Team Udayavani, Nov 16, 2021, 3:06 PM IST
ಚಿಕ್ಕಬಳ್ಳಾಪುರ: ಕನ್ನಡ ಭಾಷೆ, ನೆಲ, ಜಲದ ಉಳಿವಿಗಾಗಿ ಪ್ರಾದೇಶಿಕ ಪಕ್ಷ ಸದೃಢವಾಗಬೇಕೆಂದು ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದ ಹೊರವಲಯದ ನಾಗಾರ್ಜುನ್ ಎಂಜಿನಿಯರಿಂಗ್ಕಾಲೇಜಿನಲ್ಲಿಆಯೋಜಿಸಿದ್ದಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡಿಗರಿಗೆ ಉದ್ಯೋಗ, ಸ್ಥಳೀಯ ಸಮಸ್ಯೆಗಳನ್ನು ಇತ್ಯರ್ಥ ಮಾಡುವ ವಿಚಾರದಲ್ಲಿ ಪ್ರಾದೇಶಿಕ ಪಕ್ಷ ಬಲಿಷ್ಠಗೊಳಿಸಬೇಕೆಂದು ಮನವಿ ಮಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಕಷ್ಟಪಟ್ಟು ಶಿಕ್ಷಣ ನೀಡುವ ಪೋಷಕರ ಮನಸ್ಸಿಗೆ ನೋವುಂಟು ಮಾಡುವ ಕೆಲಸವನ್ನು ವಿದ್ಯಾರ್ಥಿಗಳು ಮಾಡಬಾರದೆಂದು ಮನವಿ ಮಾಡಿ, ತಂದೆ ಮತ್ತು ತಾಯಿ ಕೋಪದಿಂದ ಏನಾದರೂ ಬೈದರೆ ಮನಸ್ಸಿನಲ್ಲಿ ದುಃಖ ಪಡುತ್ತಾರೆ. ಆದ್ದರಿಂದ ಪೋಷಕರ ಹೆಸರಿಗೆ ಕೀರ್ತಿ ತರುವಂತಹ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ರಾಜ್ಯದಲ್ಲಿ ಹುಟ್ಟಿ ಬರಲಿ: ಕೊರೊನಾ ಸಂಕಷ್ಟದ ಅವಧಿಯಲ್ಲಿ, ಬೇರೆ ಸಂದರ್ಭಗಳಲ್ಲಿ ನಟ ಪುನೀತ್ ರಾಜ್ ಕುಮಾರ್ ಸಲ್ಲಿಸಿರುವ ಜನಸೇವೆ ಶಾಶ್ವತವಾಗಿ ಉಳಿದುಕೊಳ್ಳುತ್ತದೆ. ಅವರು ನಮ್ಮನ್ನು ಅಗಲಿದ್ದಾರೆ ಎಂದು ನಂಬಲು ಸಾಧ್ಯವಿಲ್ಲ. ಅವರು ನಟಿಸಿರುವ ಪ್ರತಿ ಸಿನಿಮಾದಲ್ಲಿ ಸಮಾಜಕ್ಕೆ ಒಂದು ಸಂದೇಶ ಕೊಟ್ಟಿದ್ದಾರೆ. ನಾನು ಸಹ ಅವರ ಅಪ್ಪಟ ಅಭಿಮಾನಿ. ಅಪ್ಪು ಸಾರ್ ಮತ್ತೂಮ್ಮೆ ನಮ್ಮ ರಾಜ್ಯದಲ್ಲಿ ಹುಟ್ಟಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ ಎಂದರು.
ಡಿಸೆಂಬರ್ನಲ್ಲಿ ರೈಡರ್ ಚಿತ್ರ ಬಿಡಗಡೆ: ನಾನು ನಟಿಸಿರುವ ರೈಡರ್ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಮಹಿಳೆಯರು, ಮಕ್ಕಳು, ಶಾಲಾ ಕಾಲೇಜಿನ ವಿದ್ಯಾರ್ಥಿಗಳುಕುಳಿತು ನೋಡುವ ಚಿತ್ರ ಎಂದರು.
ನಟ ಪುನೀತ್ ಅವರಿಗೆ ಶ್ರದ್ಧಾಂಜಲಿ: ಈ ಸಂದರ್ಭದಲ್ಲಿ ಮೌನಾಚರಣೆ ಮೂಲಕ ನಟ ಪುನೀತ್ ರಾಜ್ಕುಮಾರ್ ಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಒಂದೆರಡು ಸ್ಟೆಪ್ ಹಾಕಿ ನಟ ನಿಖೀಲ್ ವಿದ್ಯಾರ್ಥಿಗಳನ್ನು ರಂಜಿಸಿದರು.
ಕಾಲೇಜು ನಿರ್ದೇಶಕ ಎಸ್.ಜಿ.ಗೋಪಾಲಕೃಷ್ಣ, ಪ್ರಾಂಶುಪಾಲ ಜಿತೇಂದ್ರನಾಥ್ ಮುಂಗಾರ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಸಹಿತ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Lok Sabha Polls; ಮೊಯ್ಲಿ ಕೊನೇ ಚುನಾವಣೆ ಅಸ್ತ್ರದಿಂದ ಚಿಕ್ಕಬಳ್ಳಾಪುರ ಟಿಕೆಟ್ ಕಗ್ಗಂಟು
Gruha Jyothi scheme: ಗೃಹಜ್ಯೋತಿ ಗ್ರಾಹಕರ ಜೇಬಿಗೆ ಕತ್ತರಿ!
Chikaballapura: ಲೋಕ ಸಮರ ಹೊತ್ತಲ್ಲೇ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ
Hot meal: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಬಿಸಿಯೂಟ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ